ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ


Team Udayavani, Jun 19, 2021, 11:43 AM IST

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಬಳ್ಳಾರಿ: ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳನ್ನು ಮುಟ್ಟೋಕೆ ಹಿಂಜರಿಯುತ್ತಿರುವ ಸಂಕಷ್ಟದ ಸಮಯದಲ್ಲಿ ಇಲ್ಲೊಬ್ಬ ಹುಲುಗಪ್ಪ ಎಂಬ ವ್ಯಕ್ತಿ ಕೋವಿಡ್‌ನಿಂದ ಮೃತಪಟ್ಟ ನೂರಾರು ಶವಗಳನ್ನು ಶವ ಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆಯುವುದರ ಜತೆಗೆ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮಹಾಮಾರಿ ಕೋವಿಡ್‌ ಸೋಂಕು ಕಳೆದ ಎರಡು ವರ್ಷಗಳಿಂದ ಕಾಡುತ್ತಿರುವ ಕೋವಿಡ್‌ಸೋಂಕು ಹಲವು ಸಂಕಷ್ಟಗಳನ್ನು ತಂದೊಡ್ಡಿದೆ. ಕುಟುಂಬದ ಮುಖ್ಯಸ್ಥರನ್ನು ಬಲಿ ಪಡೆದು ಮಕ್ಕಳನ್ನು, ಅವಲಂಬಿತರನ್ನು ಬೀದಿಪಾಲು ಮಾಡಿರುವ ಕೋವಿಡ್‌ ಸೋಂಕು ಜನಸಾಮಾನ್ಯರಲ್ಲಿ ಆತಂಕ, ಭಯವನ್ನು ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಕೋವಿಡ್‌ ಸೋಂಕಿನಿಂದ ಮೃತಪಟ್ಟಿರುವ ಬಹುತೇಕ ಶವಗಳನ್ನು ಕುಟುಂಬಸ್ಥರು ಪಡೆದು ಅಂತ್ಯಸಂಸ್ಕಾರ ಮಾಡದೆ ಬಿಟ್ಟುಹೋಗಿರುವ ಹಾಗೂ ಅಂತ್ಯ ಸಂಸ್ಕಾರ ಮಾಡಲು ಮುಂದೆ ಬಂದ ಸಂಘ ಸಂಸ್ಥೆಗಳಿಗೆ ನೀಡಿರುವ ಹಲವಾರು ಉದಾಹರಣೆಗಳಿವೆ. ಅಂತಹದ್ದರಲ್ಲಿ ಕೋವಿಡ್‌ ಸೋಂಕಿನ ಯಾವುದೇ ಭಯ, ಆತಂಕ ಪಡದ ಹುಲುಗಪ್ಪ ಸುಮಾರು 440 ಕೋವಿಡ್‌ ಶವಗಳನ್ನು ಶವ ಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಗರದ ರೂಪನಗುಡಿ ರಸ್ತೆಯಲ್ಲಿ ಆರ್ಯವೈಶ್ಯ ಅಸೋಸಿಯೇಷನ್‌ನವರು ನಿರ್ಮಿಸಿರುವಹರಿಶ್ಚಂದ್ರ ಘಾಟ್‌ನಲ್ಲಿ ಮೇಲ್ವಿಚಾರಕನಾಗಿ ಕಾರ್ಯನಿರ್ವಹಿಸುತ್ತಿರುವ ಹುಲುಗಪ್ಪನವರು, ಶವಗಳನ್ನು ಸಹ ಸಂಸ್ಕಾರ ಮಾಡುತ್ತಿದ್ದಾರೆ. ಶವಗಳನ್ನು ಹೊತ್ತೂಯ್ಯುವ ವಾಹನದ ಚಾಲಕನಾಗಿಯೂ ಕಾರ್ಯನಿರ್ವಹಿಸುವ ಇವರು, ಈವರೆಗೆ ಸರಿ ಸುಮಾರು ಒಂದು ಸಾವಿರ ಶವಗಳನ್ನು ಸಂಸ್ಕಾರ ಮಾಡಿದ್ದು, ಈ ಪೈಕಿ ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಲ್ಲಿ (ಕಳೆದ 2020 ಜುಲೆ„ 31 ರಿಂದ 2020 ಇಲ್ಲಿವರೆಗೆ) 440 ಕೋವಿಡ್‌ ಶವಗಳನ್ನು ಸಂಸ್ಕಾರ ಮಾಡಿದ್ದಾರೆ.

ಅನಾಥ ಶವಗಳ ಸಂಸ್ಕಾರ: ಕೋವಿಡ್‌ ಸೋಂಕಿನಿಂದ ಮೃತಪಟ್ಟ ಶವವನ್ನು ಸಂಬಂಧಿ ಕರು ಸೇರಿ ಯಾರೂ ಮುಟ್ಟುವುದಿಲ್ಲ. ಕೇವಲ ದೂರದಿಂದಲೇ ನೋಡಿ ಹಿಂದೆ ಸರಿಯುತ್ತಾರೆ. ಕೆಲವೊಮ್ಮೆ ಶವ ಸಂಸ್ಕಾರ ಮಾಡಲು ಶವ ಹಿಂದೆಯೂ ಯಾರೂ ಬರಲ್ಲ. ಇಂಥ ಸಂದರ್ಭದಲ್ಲಿ ಸಂಬಂಧಿಕರು ಬರುವಿಕೆಯನ್ನು ನೋಡದೆ ಹುಲುಗಪ್ಪ ಅವರೇ ಶವವನ್ನು ಎತ್ತಿಕೊಂಡು ವಾಹನದೊಳಕ್ಕೆ ಹಾಕಿಕೊಂಡು ಶವ ಸಂಸ್ಕಾರ ಮಾಡಿದ್ದಾರೆ. ಮನೆಯಲ್ಲಿ ನಾಲ್ವರು ಮಕ್ಕಳು ಇದ್ದಾರೆ ಎಂಬ ಆತಂಕವೂ ಇಲ್ಲದೇ ಶವ ಸಂಸ್ಕಾರ ಮಾಡುತ್ತಿರುವ ಹುಲುಗಪ್ಪರ ನಿಸ್ವಾರ್ಥ ಸೇವೆಗೆ ಆರ್ಯವೈಶ್ಯ ಅಸೋಸಿಯೇಷನ್‌, ಮುಖಂಡರು, ಜನರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಎಸ್ಸೆಸ್ಸೆಲ್ಸಿ ವ್ಯಾಸಂಗ: ಶವ ಸಂಸ್ಕಾರದಲ್ಲಿ ತೊಡಗಿರುವಹುಲುಗಪ್ಪ ಓದಿದ್ದು ಕೇವಲ ಎಸ್ಸೆಸ್ಸೆಲ್ಸಿ ಮಾತ್ರ. ನಗರದ ಮುನಿಸಿಪಲ್‌ ಕಾಲೇಜಿನಲ್ಲಿ 10ನೇ ತರಗತಿ ಪೂರ್ಣಗೊಳಿಸಿರುವ ಹುಲುಗಪ್ಪ, ನಂತರ ವಿದ್ಯಾಭ್ಯಾಸ ಮುಂದುವರೆಸಲು ಆಸಕ್ತಿಯಿಲ್ಲದೇ ಅಲ್ಲಿಗೆ ಮುಗಿಸಿದ್ದಾರೆ. ನಂತರ 1992 ರಿಂದ ಟ್ಯಾಕ್ಸಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು, 2004ರಲ್ಲಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಂಬ್ಯುಲೆನ್ಸ್‌ ಚಾಲಕನಾಗಿ ಸೇರಿ 2012ರ ವರೆಗೆ ಕಾರ್ಯನಿರ್ವಹಿಸಿದ್ದಾರೆ. ನಂತರ ಆರ್ಯವೈಶ್ಯ ಅಸೋಸಿಯೇಷನ್‌ನ ಹರಿಶ್ಚಂದ್ರ ಘಾಟ್‌ ಗೆ ಸೇರಿದ ಇವರು, ಅಂದಿನಿಂದ ಶವಗಳನ್ನು ಸಾಗಿಸುವ ವಾಹನ ಚಾಲಕರಾಗಿ, ಘಾಟ್‌ ನಿರ್ವಹಿಸುವ ಮೇಲ್ವಿಚಾರಕನಾಗಿ ಕಾರ್ಯನಿರ್ವಹಿಸುತ್ತಲೇ ಶವ ಸಂಸ್ಕಾರ ಮಾಡುವಂತಹ ಪುಣ್ಯದ ಕೆಲಸಗಳನ್ನು ಸಹ ಮಾಡುತ್ತಾ ಬಂದಿದ್ದಾರೆ.

ಸಿಗದ ಬಾಡಿಗೆ ಮನೆ :

ಆರ್ಯವೈಶ್ಯ ಹರಿಶ್ಚಂದ್ರ ಘಾಟ್‌ನಲ್ಲಿ ನಿತ್ಯ ಶವಸಂಸ್ಕಾರಗಳನ್ನು ಮಾಡುವ ಹುಲುಗಪ್ಪಗೆ ಮೂವರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ ಇದ್ದಾರೆ. ಆದರೂ, ಕೋವಿಡ್‌ ಸೇರಿ ಶವಗಳನ್ನು ಸಂಸ್ಕಾರ ಮಾಡುತ್ತಾನೆ ಎಂದು ಇವರಿಗೆ ಬಾಡಿಗೆಮನೆ ನೀಡಲು ನಿರಾಕರಿಸಿದ್ದಾರೆ. ಮೊದಲುಇದ್ದ ಮನೆಯಿಂದಲೇ ಹೊರ ಹಾಕಿದ್ದ ಹುಲುಗಪ್ಪರಿಗೆ ಬೇರೆ ಕಡೆ ಬಾಡಿಗೆ ಕೇಳಲುಹೋದಾಗ ನಾನು ಮಾಡುವ ವೃತ್ತಿಯನ್ನುಕೇಳುತ್ತಿದ್ದಂತೆ ಮಾಲೀಕರು ಮನೆ ಬಾಡಿಗೆ ನೀಡದೆ ನಿರಾಕರಿಸುತ್ತಿದ್ದರು. ಸಮಾಜ ಎಂದರೆ,ಒಳ್ಳೆಯವರು, ಕೆಟ್ಟವರು ಇಬ್ಬರೂ ಇರುತ್ತಾರೆ. ಅದರಲ್ಲೂ ಒಬ್ಬರು ಮುಂದೆ ಬಂದು ನನಗೆ ಮನೆಬಾಡಿಗೆ ನೀಡಲು ಮುಂದೆ ಬಂದಿದ್ದಾರೆ ಎಂದು ಹುಲುಗಪ್ಪ ತನ್ನ ಅಳಲು ತೋಡಿಕೊಂಡಿದ್ದಾರೆ. ಹೀಗೆ ಶವಗಳನ್ನು ಸಂಸ್ಕಾರ ಮಾಡುತ್ತಿರುವ ಹುಲುಗಪ್ಪನನ್ನು ಫ್ರಂಟ್‌ಲೆçನ್‌ ವಾರಿಯರನ್ನಾಗಿ ಗುರುತಿಸುವುದು ಅಗತ್ಯವಾಗಿದೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.