ಮನೆ- ಮನೆಗೆ ತೆರಳಿ ಕೋವಿಡ್ ತಪಾಸಣೆ
Team Udayavani, Jun 19, 2021, 11:48 AM IST
ಚಿಕ್ಕಮಗಳೂರು: ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ “ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ರೂಪಿಸಿದ್ದು ಶುಕ್ರವಾರ ತಾಲೂಕಿನ ಕೆ.ಆರ್. ಪೇಟೆ ಗ್ರಾಮದಲ್ಲಿ ಕೋವಿಡ್- ಕಾರ್ಯಪಡೆಯವರು ಮನೆ-ಮನೆಗೆ ತೆರಳಿ ಕೋವಿಡ್ ತಪಾಸಣೆ ನಡೆಸಿದರು.
ತಹಶೀಲ್ದಾರ್ ಡಾ| ಕೆ.ಜೆ.ಕಾಂತರಾಜ್ ಚಾಲನೆ ನೀಡಿ ಮಾತನಾಡಿ, ಕೊರೊನಾ ಸೋಂಕು 2ನೇ ಅಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರಮಾಣದಲ್ಲಿ ಕಂಡುಬಂದಿದ್ದು ಇದರ ತಡೆಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು. ಸೋಂಕು ಕಂಡುಬಂದಲ್ಲಿ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಇರಬೇಕು. ವೈದ್ಯಕೀಯ ಹಾಗೂ ಔಷಧೋಪಚಾರಗಳು ಇರಲಿದ್ದು ಬೇಗ ಗುಣಮುಖ ಹೊಂದಲು ಸಾಧ್ಯವಾಗಲಿದೆ ಎಂದರು.
ಗ್ರಾಮೀಣ ಜನರು ಕೋವಿಡ್ ತಪಾಸಣೆಗೆ ಹಿಂದೇಟು ಹಾಕುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ “ವೈದ್ಯರ ನಡೆ ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮದ ಮೂಲಕ ಹಳ್ಳಿಯ ಪ್ರತಿ ಮನೆಗೆ ವೈದ್ಯರೇ ತೆರಳಿ ಆರೋಗ್ಯ ತಪಾಸಣೆ ಮಾಡಲಿದ್ದು ಪ್ರತಿಯೊಬ್ಬರು ಸಹಕರಿಸುವಂತೆ ಹೇಳಿದರು.
ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ| ಸೀಮಾ ಮಾತನಾಡಿ, ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರಿಂದ ತಪಾಸಣೆಗೆ ಒಳಪಡಬೇಕು. ಕಡ್ಡಾಯವಾಗಿಮಾಸ್ಕ್, ಪರಸ್ಪರ ಸಾಮಾಜಿಕ ಅಂತರ ಪಾಲಿಸಬೇಕು. ಪಾಸಿಟಿವ್ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಇರಬೇಕು ಎಂದು ಸಲಹೆ ನೀಡಿದರು.
ಕೆ.ಆರ್.ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ವಿದ್ಯಾ ಸಾಗರ್, ಗ್ರಾಪಂ ಅಧ್ಯಕ್ಷ ಶಿವಪ್ರಸಾದ್, ಉಪಾಧ್ಯಕ್ಷೆ ಮೈತ್ರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ