ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಆರನೇ ಬಾರಿ ವಿವಾಹವಾಗಲು ಸಿದ್ಧತೆ ನಡೆಸಿದ ವೇಳೆ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Team Udayavani, Jun 19, 2021, 11:53 AM IST

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ನವದೆಹಲಿ: ಸ್ವಯಂಘೋಷಿತ ಬಾಬಾ ಆರನೇ ಮದುವೆಯಾಗಲು ಸಿದ್ಧತೆ ನಡೆಸುತ್ತಿದ್ದಾಗಲೇ ಪೊಲೀಸರು ಬಂಧಿಸಿರುವ ಘಟನೆ ಉತ್ತರಪ್ರದೇಶದ ಕಾನ್ಪುರ್ ನಲ್ಲಿ ನಡೆದಿದೆ. ಷಹಜಹಾನ್ ಪುರ್ ನಿವಾಸಿ ಅಂಜು ಕಥೇರಿಯಾ ಪೊಲೀಸರ ಅತಿಥಿಯಾದ ಸ್ವಯಂಘೋಷಿತ ಬಾಬಾ!

ಇದನ್ನೂ ಓದಿ:ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಈ ಸ್ವಯಂ ಘೋಷಿತ ಬಾಬಾ ಅಂಜು ಈಗಾಗಲೇ ಐದು ಮದುವೆಯಾಗಿದ್ದು, ಕಾನೂನುಬದ್ಧವಾಗಿ ತನ್ನ ಮೊದಲಿನ ಪತ್ನಿಯರಿಗೆ ವಿವಾಹ ವಿಚ್ಛೇದನ ನೀಡದೆ ಆರನೇ ಬಾರಿ ಮದುವೆಯಾಗಲು ಸಿದ್ಧತೆ ನೀಡಿದ್ದ. ಈ ಸಂದರ್ಭದಲ್ಲಿ ಐದನೇ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಬಾಬಾನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಜು ಬಾಬಾ ಈಗಾಗಲೇ ಐದು ಮದುವೆಯಾಗಿದ್ದು, ನಮಗೆಲ್ಲಾ ವಂಚಿಸಿದಂತೆ, ಈತ ಇದೀಗ ಆರನೇ ಮದುವೆಯಾಗಲು ಹೊರಟಿರುವುದಾಗಿ ಐದನೇ ಪತ್ನಿ ದೂರು ನೀಡಿರುವುದಾಗಿ ದಕ್ಷಿಣ ಕಾನ್ಪುರ್ ಡಿಸಿಪಿ ರವೀನಾ ತ್ಯಾಗಿ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಐವರು ಪತ್ನಿಯರು!
ಪ್ರಾಥಮಿಕ ತನಿಖೆ ಪ್ರಕಾರ, ಅಂಜು ಕಥೇರಿಯಾ 2005ರಲ್ಲಿ ಮೊದಲ ಬಾರಿಗೆ ಮಣಿಪುರಿ ಜಿಲ್ಲೆಯ ನಿವಾಸಿಯ ಯುವತಿಯೊಬ್ಬಳನ್ನು ವಿವಾಹವಾಗಿದ್ದ. ಇವರಿಬ್ಬರ ವಿವಾಹ ವಿಚ್ಛೇದನ ಪ್ರಕರಣ ಕೋರ್ಟ್ ನಲ್ಲಿದೆ. 2010ರಲ್ಲಿ ಅಂಜು ಬರೇಲಿ ಜಿಲ್ಲೆಯ ಯುವತಿಯೊಬ್ಬಳನ್ನು ವಿವಾಹವಾಗಿದ್ದು, ಆಕೆ ಕೂಡಾ ವಿವಾಹ ವಿಚ್ಛೇದನ ಅರ್ಜಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.

ನಾಲ್ಕು ವರ್ಷಗಳ ನಂತರ ಸ್ವಯಂಘೋಷಿತ ಬಾಬಾ ಆಯುರೈಯಾ ಜಿಲ್ಲೆಯ ಯುವತಿಯೊಬ್ಬಳನ್ನು ವಿವಾಹವಾಗಿದ್ದ. ಈತನ ಹಿಂದಿನ ವಿವಾಹದ ರಹಸ್ಯ ತಿಳಿದ ನಂತರ ಮೂರನೇ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಳು, ಬಳಿಕ ಅಂಜು ಮೂರನೇ ಹೆಂಡತಿಯ ಸಂಬಂಧಿಯೊಬ್ಬಳನ್ನು ವಿವಾಹವಾಗಿದ್ದ. 2019ರಲ್ಲಿ ಐದನೇ ವಿವಾಹವಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐದನೇ ಪತ್ನಿಯ ಬಳಿಯೂ ಈತ ತನ್ನ ಹಿಂದಿನ ವಿವಾಹದ ಗುಟ್ಟು ರಟ್ಟು ಮಾಡಿರಲಿಲ್ಲವಾಗಿತ್ತು. ಕೆಲವು ದಿನಗಳ ನಂತರ ಆಕೆಗೆ ಕಿರುಕುಳ ನೀಡಲಾರಂಭಿಸಿದ್ದ. ಇದರಿಂದ ರೋಸಿ ಹೋದ ಆಕೆ ಕಳೆದ ವರ್ಷ ಚಾಕೇರಿ ಪೊಲೀಸ್ ಠಾಣೆಯಲ್ಲಿ ಅಂಜು ವಿರುದ್ಧ ದೂರು ದಾಖಲಿಸಿದ್ದಳು. ಬಳಿಕ ಅಂಜು ಕಿದ್ವಾಯಿ ನಗರ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ವಾಸವಾಗಿದ್ದು, ಆರನೇ ಬಾರಿ ವಿವಾಹವಾಗಲು ಸಿದ್ಧತೆ ನಡೆಸಿದ ವೇಳೆ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.