ಜೋಗ ಜಲಪಾತದ ಸೊಬಗು, ವೀಕ್ಷಿಸಲಾಗದ ಕೊರಗು
Team Udayavani, Jun 19, 2021, 9:41 PM IST
ಶಿವಮೊಗ್ಗ: ಮಲೆನಾಡಿನಲ್ಲಿ ಮುಂಗಾರು ಮಳೆ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಶರಾವತಿ ನದಿ ಕಣಿವೆಯಲ್ಲೂ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕಲಾರಂಭಿಸಿದೆ. ಆದರೆ ಹಾಲ್ನೊರೆಯ ಜಲಧಾರೆ ವೀಕ್ಷಣೆಗೆ ಕೊರೊನಾ ಲಾಕ್ಡೌನ್ ಬ್ರೇಕ್ ಹಾಕಿದೆ.
ಜೋಗ ಜಲಪಾತದ ಜಲಾನಯನ ಪ್ರದೇಶದಲ್ಲಿ ಕಳೆದ ಐದಾರು ದಿನದಿಂದ ನಿರಂತರ ಮಳೆಯಾಗುತ್ತಿರುವುದರಿಂದ ಜೋಗ ಜಲಪಾತಕ್ಕೆ ಜೀವಕಳೆ ಬಂದಿದೆ. ರಾಜಾ, ರಾಣಿ, ರೋರರ್, ರಾಕೇಟ್ ಕವಲುಗಳಲ್ಲಿ ನೀರು ರಭಸದಿಂದ ಧುಮ್ಮಿಕ್ಕುತ್ತಿವೆ. ಹೊಸನಗರ ತಾಲೂಕಿನಲ್ಲಿ ದಾಖಲೆಯ 33 ಸೆಂಟಿಮೀಟರ್ಗೂ ಹೆಚ್ಚಿನ ಮಳೆಯಾಗಿದೆ. ಹೀಗಾಗಿ ಲಿಂಗನಮಕ್ಕಿ ಜಲಾಶಯಕ್ಕೂ ಹೆಚ್ಚಿನ ನೀರು ಹರಿದುಬರುತ್ತಿದೆ.
ಇದಲ್ಲದೆ ಜಲಾಶಯದಿಂದ ಜಲಪಾತದ ನಡುವಿನ ಪ್ರದೇಶದಲ್ಲೂ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಜಲಪಾತದ ಸೌಂದರ್ಯ ಇಮ್ಮಡಿಯಾಗಿದೆ. ಆದರೆ ಈ ವರ್ಷ ಜೋಗದ ವೈಭವವನ್ನು ಕಣ್ತುಂಬಿಕೊಳ್ಳುವ ಭಾಗ್ಯ ಪ್ರವಾಸಿಗರಿಗೆ ಇಲ್ಲವಾಗಿದೆ. ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಪ್ರವೇಶ ನಿಬಂìಧಿ ಸಲಾಗಿದೆ. ಹೀಗಾಗಿ ಜೋಗದ ಪ್ರಮುಖ ದ್ವಾರಕ್ಕೆ ಬೀಗ ಹಾಕಲಾಗಿದೆ.
ಜೋಗ ಜಲಪಾತ ವೀಕ್ಷಣೆಗಾಗಿ ಹತ್ತಾರು ಮಂದಿ ಪ್ರವಾಸಿಗರು ಆಗಮಿಸಿ ಗೇಟ್ನ ಕೊರಗು! ಬೀಗ ನೋಡಿ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಸ್ಸಾಗುತ್ತಿದ್ದಾರೆ.
ಮಳೆಯಿಂದ ಜೋಗ ಮೈದುಂಬಿರುವ ವಿಷಯ ತಿಳಿದು ಅನೇಕರು ಇದನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದರೂ ವೀಕ್ಷಣೆ ಸಾಧ್ಯವಾಗದೆ ನಿರಾಸೆಯಿಂದ ಮರಳುತ್ತಿದ್ದಾರೆ. ಜೋಗ ಜಲಪಾತದ ದ್ವಾರಕ್ಕೆ ಬೀಗ ಹಾಕಲಾಗಿದ್ದು, ಸರ್ಕಾರದ ಆದೇಶದ ಬಳಿಕವಷ್ಟೇ ಜೋಗ ಜಲಪಾತದ ವೀಕ್ಷಣೆ ಸಾಧ್ಯವಾಗಲಿದೆ.
ನಿರಂತರ ಮಳೆಯಿಂದ ಈ ಬಾರಿ ಜೋಗ ಜಲಪಾತ ಮೈಂದುಬಿ ಧುಮ್ಮಿಕ್ಕುತ್ತಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಮೂರು ವರ್ಷದ ಹಿಂದಿನ ವಿಡಿಯೋಗಳು ಶೇರ್ ಆಗುತ್ತಿವೆ. ಭಾರೀ ಪ್ರಮಾಣದ ನೀರು ಧುಮ್ಮಿಕ್ಕುತ್ತಿರುವ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ