ಪಶ್ಚಿಮಬಂಗಾಳ: ಕೋವಿಡ್ 19 ನೆಗೆಟಿವ್ ವರದಿ ಬಳಿಕ ಟಿಎಂಸಿ ಶಾಸಕ ಜಯಂತ್ ನಿಧನ
ಅವರ ಶ್ವಾಸಕೋಶ ಹಾನಿಗೊಳಗಾಗಿತ್ತು ಎಂದು ಖಾಸಗಿ ಆಸ್ಪತ್ರೆಯ ಹಿರಿಯ ವೈದ್ಯರು ಪಿಟಿಐಗೆ ತಿಳಿಸಿದ್ದಾರೆ.
Team Udayavani, Jun 20, 2021, 8:12 AM IST
ಕೋಲ್ಕತಾ: ಕೋವಿಡ್ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದ ತೃಣಮೂಲ ಕಾಂಗ್ರೆಸ್ ಶಾಸಕ ಜಯಂತ್ ನಾಸ್ಕರ್ ಶನಿವಾರ(ಜೂನ್ 19) ಕೋಲ್ಕತಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಮೇ ತಿಂಗಳಿನಲ್ಲಿ ಶಾಸಕ ಜಯಂತ್ ಅವರಿಗೆ ಕೋವಿಡ್ 19 ದೃಢಪಟ್ಟಿದ್ದು, ಶುಕ್ರವಾರ(ಜೂ.18) ಪರೀಕ್ಷೆ ನಡೆಸಿದ ವೇಳೆ ನೆಗೆಟಿವ್ ವರದಿ ಬಂದಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿ:ದಕ್ಷಿಣ ಕನ್ನಡ : ಮೂರೂವರೆ ತಿಂಗಳಲ್ಲೇ ಅರ್ಧ ಲಕ್ಷ ಮಂದಿಗೆ ಸೋಂಕು!
ಜಯಂತ್ ನಾಸ್ಕರ್(73) ಶುಕ್ರವಾರ ರಾತ್ರಿ ನಿಧನರಾಗಿರುವುದಾಗಿ ವರದಿ ತಿಳಿಸಿದೆ. ಗೋಸಾಬಾ ವಿಧಾನಸಭಾ ಕ್ಷೇತ್ರದ ಶಾಸಕ ಜಯಂತ್ ಅವರನ್ನು ಎಂಆರ್ ಬಂಗೂರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಎಂದು ವರದಿ ವಿವರಿಸಿದೆ.
ಶುಕ್ರವಾರ ಅವರನ್ನು ಪರೀಕ್ಷೆಗೊಳಪಡಿಸಿದಾಗ ಕೋವಿಡ್ 19 ನೆಗೆಟಿವ್ ವರದಿ ಬಂದಿತ್ತು. ಆದರೆ ದೀರ್ಘಕಾಲದ ಅನಾರೋಗ್ಯದಿಂದ ಅವರ ಶ್ವಾಸಕೋಶ ಹಾನಿಗೊಳಗಾಗಿತ್ತು ಎಂದು ಖಾಸಗಿ ಆಸ್ಪತ್ರೆಯ ಹಿರಿಯ ವೈದ್ಯರು ಪಿಟಿಐಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್
Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ
BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್?
Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ
Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ