ರೋಗಿಗಳಿಲ್ಲದೆ ಜಂಬೋ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಮುಚ್ಚಲು ಬಿಎಂಸಿ ನಿರ್ಧಾರ


Team Udayavani, Jun 20, 2021, 12:19 PM IST

covid Care Center

ಮುಂಬಯಿ: ಕಡಿಮೆ ಕೊರೊನಾ ಸೋಂಕಿತರಿರುವ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ (ಬಿಕೆಸಿ), ದಹಿಸರ್‌ ಮತ್ತು ಮುಲುಂಡ್‌ನ‌ಲ್ಲಿರುವ ಕೊರೊನಾ ಆಸ್ಪತ್ರೆಗಳನ್ನು ಇನ್ನೂ ಕೆಲವು ದಿನಗಳಲ್ಲಿ ಮುಚ್ಚಲು ಬಿಎಂಸಿ ನಿರ್ಧರಿಸಿದ್ದು, ಈ ಆಸ್ಪತ್ರೆಗಳ ಸಿಬಂದಿ ಸಂಖ್ಯೆಯನ್ನು ಕಡಿಮೆ ಮಾಡಲು ಮನಪಾ ಆದೇಶಿಸಿದೆ. ಒಂದೆಡೆ ರಾಜ್ಯದ ಕೊರೊನಾ ಕಾರ್ಯಪಡೆ ಮುಂದಿನ 4 ವಾರಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಕುರಿತು ಎಚ್ಚರಿಕೆ ನೀಡಿದ್ದು, ಆರಂಭಿಕ ದಿನಗಳಲ್ಲಿ ಮತ್ತೆ ವೈದ್ಯರು ಮತ್ತು ದಾದಿಯರ ಕೊರತೆ ಕಂಡು ಬರುವ ಸಾಧ್ಯತೆಯಿದೆ ಎನ್ನಲಾಗಿದೆ.

ಚಂಡಮಾರುತದ ಬಳಿಕ ಮತ್ತೆ ತೆರೆದಿಲ್ಲ

ಸಂಜೀವ್‌ ಜೈಸ್ವಾಲ್‌ ಅವರ ವರ್ಗಾವಣೆಯ ಬಳಿಕ ಮುಂಬಯಿಯಲ್ಲಿ ಆರು ದೊಡ್ಡ ಕೊರೊನಾ ಆಸ್ಪತ್ರೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೆಚ್ಚುವರಿ ಪುರಸಭೆ ಆಯುಕ್ತ ಸುರೇಶ್‌ ಕಾಕಾನಿಗೆ ವಹಿಸಲಾಗಿದೆ. ಅಧಿಕಾರ ವಹಿಸಿಕೊಂಡ ಅನಂತರ ಕಾಕನಿ ಅವರು ಮಂಗಳವಾರ ಸಭೆ ನಡೆಸಿ ಎಲ್ಲ ಪ್ರಮುಖ ಕೊರೊನಾ ಆಸ್ಪತ್ರೆಗಳನ್ನು ಪರಿಶೀಲಿಸಿದರು. ಚಂಡಮಾರುತದಿಂದಾಗಿ ಬಿಕೆಸಿ, ಮುಲುಂಡ್‌ ಮತ್ತು ದಹಿಸರ್‌ ಕೊರೊನಾ ಆಸ್ಪತ್ರೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಯಿತು. ಮಾನ್ಸೂನ್‌ ರಿಪೇರಿ ಕಾರ್ಯಗಳು ನಡೆಯುತ್ತಿವೆ ಎಂದು ಬಿಎಂಸಿ ಹೇಳಿದ ಬಳಿಕ ಆಸ್ಪತ್ರೆಗಳನ್ನು ವೈದ್ಯಕೀಯ ಸೇವೆಗಳಿಗಾಗಿ ಮತ್ತೆ ತೆರೆಯಲಾಗಿಲ್ಲ ಎಂದು ಈ ಸಂದರ್ಭ ತಿಳಿಸಿದರು.

ಕೊರೊನಾ ರೋಗಿಗಳಿಂದ ಮುಕ್ತ

ಪ್ರಸ್ತುತ ಗೋರೆಗಾಂನಲ್ಲಿರುವ ನೆಸ್ಕೊ ಮತ್ತು ಮರೋಲ್‌ನ ಸೆವೆನ್‌ ಹಿಲ್ಸ… ಆಸ್ಪತ್ರೆ ಯು ಕೊರೊನಾ ರೋಗಿಗಳಿಗೆ ಮುಕ್ತವಾ ಗಿದೆ. ನೆಸ್ಕೊ ಸುಮಾರು 3.5 ಸಾವಿರ ಹಾಸಿಗೆ ಗಳ ಸಾಮರ್ಥ್ಯವನ್ನು ಹೊಂದಿದ್ದು, ಸುಮಾರು 200 ರೋಗಿಗಳನ್ನು ಅಲ್ಲಿ ದಾಖಲಿಸ ಲಾಗಿದೆ. ರೋಗಿಗಳ ಸಂಖ್ಯೆ ಕಡಿಮೆಯಿರು ವಾಗ ಎಲ್ಲ ಕೊರೊನಾ ಆಸ್ಪತ್ರೆಗಳನ್ನು ಪ್ರಾರಂ ಭಿಸುವ ಬದಲು, ಬಿಕೆಸಿ, ಮುಲುಂಡ್‌, ದಹಿ ಸಾರ್‌ ಆಸ್ಪತ್ರೆಗಳು ಈಗಿರುವ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಶೇ. 50-60ಕ್ಕೆ ತಲುಪಿದ ಬಳಿಕ ಮತ್ತೆ ತೆರೆಯಲು ನಿರ್ಧರಿಸಿದೆ.

ನಿರ್ವಹಣಾ ಸೇವೆಗಳು ಮುಂದುವರಿಕೆ

ಈ ಆಸ್ಪತ್ರೆಗಳಲ್ಲಿ ಆಮ್ಲಜನಕ, ನೈರ್ಮಲ್ಯ, ಅಗ್ನಿಶಾಮಕ ಇತ್ಯಾದಿ ನಿರ್ವಹಣಾ ಸೇವೆಗಳು ಮುಂದುವರಿಯಲಿವೆ. ಇಲ್ಲಿ ಅಗತ್ಯ ಸಂಖ್ಯೆಯ ಸಿಬಂದಿ ಇಟ್ಟುಕೊಂಳ್ಳಲು ಸೂಚಿಸಲಾಗಿದೆ. ನೌಕರರಿಗೆ ಒಂದು ಅಥವಾ ಎರಡು ತಿಂಗಳು ವಿಶ್ರಾಂತಿ ನೀಡಿ ಮತ್ತೆ ಉದ್ಯೋಗ ನೀಡುವಂತೆ ಬಿಎಂಸಿ ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ಸೂಚಿಸಿದ್ದಾರೆ.

4 ವಾರಗಳಲ್ಲಿ 3ನೇ ಅಲೆ ಸಾಧ್ಯತೆ

ಕೊರೊನಾ ಆಕ್ಷನ್‌ ಫೋರ್ಸ್‌ ಮುಖ್ಯಮಂತ್ರಿಯವರೊಂದಿಗಿನ ಸಭೆಯಲ್ಲಿ ಮುಂದಿನ ಎರಡು ನಾಲ್ಕು ವಾರಗಳಲ್ಲಿ ಮೂರನೇ ಅಲೆ ಕಾಣಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇದರಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಹೇಳಲಾಗಿದೆ. ಈ ಹಿನ್ನೆಲೆ ದೊಡ್ಡ ಕೊರೊನಾ ಆಸ್ಪತ್ರೆಗಳ ಮಾನವಶಕ್ತಿಯನ್ನು ಕಡಿಮೆ ಮಾಡುವ ಪುರಸಭೆಯ ನಿರ್ಧಾರ ಎಷ್ಟು ಸೂಕ್ತವಾಗಿದೆ ಎಂಬ ಚರ್ಚೆ ನಡೆಯುತ್ತಿದೆ.

ಮಾನವಶಕ್ತಿ ಕಡಿತ ಸೂಕ್ತವಲ್ಲ

ಮೊದಲ ಅಲೆ ಬಳಿಕ ಪುರಸಭೆಯು ದೊಡ್ಡ ಕೊರೊನಾ ಆಸ್ಪತ್ರೆಗಳ ಮಾನವ ಶಕ್ತಿಯನ್ನು ಶೇ. 50ಕ್ಕಿಂತ ಕಡಿಮೆಗೊಳಿಸಿತು. ಗುತ್ತಿಗೆ ಅವಧಿ ಮುಗಿದ ವೈದ್ಯರು ಮತ್ತು ದಾದಿಯರ ಷರತ್ತುಗಳನ್ನು ಮತ್ತೆ ವಿಸ್ತರಿಸಲಾಗಿಲ್ಲ. 2ನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದಾಗ ಆಸ್ಪತ್ರೆಗಳಲ್ಲಿ ವೈದ್ಯರು ಸಿಬಂದಿ ಕೊರತೆ ಕಾಣಿಸಿಕೊಂಡಿದೆ.

60 ರೋಗಿಗಳಿಗೆ ಓರ್ವ ನರ್ಸ್‌

ಒಬ್ಬ ನರ್ಸ್‌ 60 ರೋಗಿಗಳಿಗೆ ನೋಡಿ ಗೊಳ್ಳಲು ತಿಳಿಸಲಾಗಿದ್ದು, ಅಲ್ಪಾವಧಿಗೆ ಮಾನವಶಕ್ತಿಯನ್ನು ಕಡಿಮೆ ಮಾಡುವ ನಿರ್ಧಾರ ಸರಿಯಲ್ಲ, ಏಕೆಂದರೆ ಮತ್ತೆ ಮಾನವ ಶಕ್ತಿ ಪಡೆಯುವುದು ಕಷ್ಟಕರವಾಗುತ್ತಿದೆ, ವಿಶೇಷವಾಗಿ ಅನುಭವಿ ವೈದ್ಯರು ಮತ್ತು ದಾದಿಯರನ್ನು ಮರಳಿ ಪಡೆಯುವುದು ಕಷ್ಟ ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಬಿಕೆಸಿ ಕೊರೊನಾ ಆಸ್ಪತ್ರೆಯಲ್ಲಿ 2,328

ಹಾಸಿಗೆಗಳ ಸಾಮರ್ಥ್ಯವಿದೆ. ಇದು 896 ಆಮ್ಲ ಜನಕ ಹಾಸಿಗೆಗಳು ಮತ್ತು 12 ಡಯಾಲಿಸಿಸ್‌ ಘಟಕಗಳನ್ನು ಹೊಂದಿದೆ. ಆಸ್ಪತ್ರೆಯಲ್ಲಿ 395 ವೈದ್ಯರು, 299 ದಾದಿಯರು ಮತ್ತು 305 ವಾರ್ಡ್‌ಬಾಯ್‌ಗಳು ಸೇರಿದಂತೆ 1,399 ಉದ್ಯೋಗಿಗಳಿದ್ದಾರೆ. ಮುಲುಂಡ್‌ ಆಸ್ಪತ್ರೆಯಲ್ಲಿ 1,708 ಹಾಸಿಗೆಗಳಿವೆ. ಇದು 969 ಆಮ್ಲಜನಕ ಹಾಸಿಗೆಗಳನ್ನು ಹೊಂದಿದೆ. ಆಸ್ಪತ್ರೆಯಲ್ಲಿ 103 ವೈದ್ಯರು, 105 ದಾದಿಯರು ಮತ್ತು 90 ವಾರ್ಡ್‌ಬಾಯ್‌ಗಳು ಸೇರಿದಂತೆ 436 ಸಿಬಂದಿ ಇದ್ದಾರೆ. ದಹಿಸರ್‌ ಆಸ್ಪತ್ರೆಯಲ್ಲಿ 672 ಆಮ್ಲಜನಕ ಹಾಸಿಗೆಗಳೊಂದಿಗೆ 1,061 ಹಾಸಿಗೆಗಳಿವೆ. ಇದರಲ್ಲಿ 520 ಉದ್ಯೋಗಿಗಳು, 100 ವೈದ್ಯರು, 150 ದಾದಿಯರು ಮತ್ತು 60 ವಾರ್ಡ್‌ಬಾಯ್‌ಗಳಿದ್ದಾರೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.