ದಾವಣಗೆರೆ: ಲಾಕ್ ಡೌನ್ ನಿಯಮ ಸಡಿಲಿಕೆ, ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ
Team Udayavani, Jun 21, 2021, 1:04 PM IST
ದಾವಣಗೆರೆ: ಮಹಾಮಾರಿ ಕೋವಿಡ್ ಹಾವಳಿ, ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳ ಕಾಲ ಮನೆ ವಾಸ ಅನುಭವಿಸಿದ್ದ ಜನರು ಸೋಮವಾರ ಮುಕ್ತ ಸಂಚಾರ ನಡೆಸಿದರು.
ಕೋವಿಡ್ ಪಾಸಿಟಿವಿಟಿ 6.37% ನಡುವೆಯೂ ಜಿಲ್ಲಾಡಳಿತ ಪ್ರತಿ ದಿನ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರ ವರೆಗೆ ಅಂಗಡಿ ಮುಂಗಟ್ಟು ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಿದೆ. ಬಹು ದಿನಗಳ ನಂತರ ವಾಣಿಜ್ಯ ಚಟುವಟಿಕೆ ಗರಿಗೆದರಿತ್ತು. ಪ್ರತಿ ರಸ್ತೆಯಲ್ಲಿ ಜನಸಂದಣಿ, ವಾಹನ ಸಂಚಾರ ಹೆಚ್ಚಾಗಿತ್ತು. ಕೆಲ ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಂಡು ಬಂದಿತು.
ಇದನ್ನೂ ಓದಿ:ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು
ಕೋವಿಡ್ ಮಾರ್ಗಸೂಚಿ ಷರತ್ತಿಗೆ ಒಳಪಟ್ಟು ಬಹಳ ದಿನಗಳ ನಂತರ ಸಾರಿಗೆ ಸಂಸ್ಥೆಯ ಬಸ್ ಸಂಚರಿಸಿದವು. ನಗರ ಸಾರಿಗೆ ಬಸ್ ಸಹ ರಸ್ತೆಗೆ ಇಳಿದವು. ಆದರೆ, ಖಾಸಗಿ ಬಸ್ ಸಂಚಾರ ಕಂಡು ಬರಲಿಲ್ಲ. ಜನರು ಸ್ವಾತಂತ್ರ್ಯ ಸಿಕ್ಕವರಂತೆ ಓಡಾಡಿದರು. ರಸ್ತೆಯಲ್ಲಿ ಬ್ಯಾರಿಕೇಡ್ ಇರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ವಾಹನ ಸವಾರರು ಪರದಾಡಬೇಕಾಯಿತು.
ಕೆಲ ಅಂಗಡಿಗಳಿಗೆ ಅನುಮತಿ ಇರದಿದ್ದರೂ ತೆರೆದಿದ್ದವು. ಬಟ್ಟೆ, ಬಂಗಾರದ ಅಂಗಡಿಗಳಿಗೆ ಅನುಮತಿ ಇಲ್ಲದ ಕಾರಣ ಮಂಡಿಪೇಟೆ ಇತರೆ ಭಾಗದಲ್ಲಿ ಕೆಲ ಅಂಗಡಿ ಮಾತ್ರ ತೆರೆದಿದ್ದವು. ಕೃಷಿ ಪರಿಕರ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಮಧ್ಯಾಹ್ನ ಎರಡರ ನಂತರ ಎಲ್ಲ ಚಟುವಟಿಕೆ ಬಂದ್ ಆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ