ಮಾತೇ ಮುತ್ತು ಮಾತೇ ಮೃತ್ಯು..!


Team Udayavani, Jun 21, 2021, 2:45 PM IST

ಮಾತೇ ಮುತ್ತು ಮಾತೇ ಮೃತ್ಯು..!

ನಾಲಗೆ ಒಳ್ಳೆಯದಿದ್ದರೆ ನಾಡೆಲ್ಲ ಒಳ್ಳೆಯದು ಎಂಬ ತ್ರಿಕಾಲ ಸತ್ಯವಾದ ಮಾತನ್ನು ನಾವು ಚೆನ್ನಾಗಿ ಅರ್ಥೈಸಿಕೊಂಡಿದ್ದಾದರೆ ಖಂಡಿತವಾಗಿಯೂ ನಾವು ಶ್ರೇಷ್ಠ ವ್ಯಕ್ತಿಗಳಾಗಿ ಈ ಸಮಾಜದಲ್ಲಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಭಾರತೀಯ ಸಂಪ್ರದಾಯದಲ್ಲಿ ಮಾತನ್ನು ಸರಸ್ವತಿ ಸ್ವರೂಪ ಎಂದು ಪರಿಗಣಿಸಲಾಗಿದೆ. ಹಾಗಾಗಿ ಮಾತನಾಡಲು ಒಳ್ಳೆಯ ಜ್ಞಾನ, ಕೌಶಲ, ತಿಳಿವಳಿಕೆ ಹಾಗೂ ಪರಿಪೂರ್ಣತೆ ಬೇಕೇಬೇಕು.

ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು ಎನ್ನುವ ಹಾಗೆ ನಾವು ಮಾತನಾಡುವಾಗ ತುಂಬಾ ಎಚ್ಚರಿಕೆಯಿಂದ ಮಾತನಾಡಬೇಕು. ನಮ್ಮ ಮಾತುಗಳು ಇನ್ನೊಬ್ಬರಿಗೆ ಸಂತಸವನ್ನುಂಟು ಮಾಡದಿದ್ದರೂ ಪರವಾಗಿಲ್ಲ ಆದರೆ ನೋವು, ದುಃಖ, ಸಂಕಟಗಳನ್ನುಂ

ಟು ಮಾಡುವಂತಿರಬಾರದು. ಬೇಕಿದ್ದರೆ ಒಂದೆರಡು ಒಳ್ಳೆಯ ಮಾತುಗಳನ್ನಾಡಬೇಕು, ಇಲ್ಲದಿದ್ದರೆ ಮೌನಕ್ಕೆ ಶರಣಾಗಿ ಬಿಡಬೇಕು. ಕೆಟ್ಟ, ಅಸಂಬದ್ಧ ಮಾತುಗಳಿಂದ ಅದೆಷ್ಟೋ ಸಂಬಂಧಗಳು ಮುರಿದು ಬಿದ್ದಿವೆ. ಹಾಗಾಗಿ ನಾವು ಅವಸರವಸರದಲ್ಲಿಯೋ, ಕೋಪದಲ್ಲಿಯೋ ಅಥವಾ ದುಡುಕಿಯೋ ಕೆಟ್ಟದಾಗಿ ಮಾತನಾಡಿಬಿಟ್ಟರೆ ಒಂದೊಳ್ಳೆಯ ಸಂಬಂಧ ಹಾಳಾಗಲು ಅದು ಕಾರಣವಾಗಿಬಿಡುತ್ತದೆ.

ಇನ್ನೊಬ್ಬರನ್ನು ಗೇಲಿ ಮಾಡುವ, ಮೂದಲಿಸುವ, ಟೀಕಿಸುವ ಮಾತುಗಳಿಂದ ಅವರಲ್ಲಿನ ಆತ್ಮವಿಶ್ವಾಸ ಕುಗ್ಗಿ ಜುಗುಪ್ಸೆ ಹೊಂದಿ ತಳಮಳಗೊಳ್ಳುವಂತೆ ಮಾಡುತ್ತದೆ. ಅದರ ಬದಲಾಗಿ ಸ್ಫೂರ್ತಿದಾಯಕ, ಪ್ರೋತ್ಸಾಹದ ಮತ್ತು ಹಿತಕರವಾದ ಮಾತುಗಳಿಂದ ನಾವು ಮತ್ತೂಬ್ಬರ ಬಾಳಿನಲ್ಲಿ ಬೆಳಕಾಗಿ ಪ್ರಜ್ವಲಿಸುತ್ತೇವೆ. ಆದ್ದರಿಂದ ವ್ಯಕ್ತಿಗತವಾದ, ಸಾಮೂಹಿಕವಾದ ನಿಂದನೆ ಮಾಡಿ ಅನಾಹುತಗಳನ್ನು ತಮ್ಮ ಕೈಯಾರೆ ತಾವೇ ತಂದುಕೊಂಡು ಕೊರಗಿ ಕೊರಗಿ ಸಾಯುವುದಕ್ಕಿಂತ ಪೂರ್ವದಲ್ಲಿಯೇ ಚೆನ್ನಾಗಿ ಅರಿತು ಮಾತನಾಡಬೇಕು.

ಕೆಲವು ಸಂದರ್ಭ ಮಾತನಾಡುವಾಗ ನಮ್ಮನ್ನು ನಾವೇ ತುಂಬಾ ಪೇಚಿಗೆ ಸಿಲುಕಿಸಿಕೊಂಡ ತಾಗುತ್ತದೆಯಲ್ಲವೇ? ಅದಕ್ಕೆ ಮುಖ್ಯ ಕಾರಣ ನಮಗೆ ಗೊತ್ತಿಲ್ಲದ ವಿಷಯದ ಬಗ್ಗೆ ಮಾತನಾಡಲು ಹೋಗುವುದು. ಇದರಿಂದ ಅವಮಾನ ಅನುಭವಿಸಬೇಕಾಗುತ್ತದೆ. ಕೆಲವು ಜನರ ಸ್ವಭಾವ ಹೇಗಿರುತ್ತದೆಯೆಂದರೆ ಏನೂ ಗೊತ್ತಿಲ್ಲದಿದ್ದರೂ ಎಲ್ಲವೂ ಗೊತ್ತಿದೆ ಎಂದು ತೋರ್ಪಡಿಸಿಕೊಳ್ಳಲು ಪ್ರಯತ್ನಿಸಿ ತಮ್ಮ ಅಜ್ಞಾನವನ್ನು ತಾವೇ ಹರಾಜಿಗಿಟ್ಟಂತಾಗುತ್ತದೆ. ನಾನು ಜಾಣ, ಬುದ್ದಿವಂತ ಎಂದು ನಾವು ತೋರಿಸಿಕೊಳ್ಳುವುದಕ್ಕಿಂತ ನಾವು ಆಡುವ ಮಾತುಗಳೇ ನಮ್ಮನ್ನು ಜಾಣರೆಂದು ಪ್ರತಿಬಿಂಬಿಸುವಂತಿರಬೇಕು. ಬೇರೆಯವರು ಮಾತನಾಡುವಾಗ ಮಧ್ಯದಲ್ಲಿ ಬಂದು ಮೂಗು ತೂರಿಸುವ ಕೆಲಸ ಮಾಡಿದ್ದಾದರೆ ಅದು ಮೂರ್ಖತನದ ಪರಮಾವಧಿಯಾದೀತು, ಜೋಕೆ. ಎಲ್ಲಿ ನಮ್ಮ ಮಾತಿಗೆ ಬೆಲೆ, ಗೌರವ ಇರುತ್ತದೆಯೋ ಅಂಥ ಕಡೆಗಳಲ್ಲಿ ಮಾತ್ರ ಹದವರಿತು ಮಾತನಾಡಬೇಕು.

ಸಂದರ್ಭಕ್ಕೆ ತಕ್ಕಂತೆ ಮಾತನಾಡಿದರೆ ನಮ್ಮನ್ನು ಪ್ರತಿಯೊಬ್ಬರೂ ಸ್ಮರಿಸಿಕೊಳ್ಳುವಂತಾಗುತ್ತದೆ. ಅನಗತ್ಯವಾಗಿ, ಅನಾವಶ್ಯಕವಾಗಿ, ಅನುಚಿತವಾಗಿ ಮಾತನಾಡಿದರೆ ಅದು ಕ್ಷುಲ್ಲಕವಾಗಿ ಹಲವರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇರುತ್ತದೆ. ಒಂದು ನಿಷ್ಪ್ರಯೋಜಕವಾದ, ನೋವುಂಟುಮಾಡುವ ಮಾತಿನಿಂದ ಒಬ್ಬ ಒಳ್ಳೆಯ ವ್ಯಕ್ತಿಯನ್ನು ದೂರ ಮಾಡಿದಂತಾಗಬಹುದು. ಹೀಗಾಗಿ ನಮಗೆ ಸಂಬಂಧವೇ ಇಲ್ಲದ ಗೊಡ್ಡು ವಾದವನ್ನು ಮಾಡಿ ಸಮಯ ಹಾಗೂ ಸಂಬಂಧಗಳನ್ನು ಹಾಳು ಮಾಡಿಕೊಳ್ಳುವ ಬದಲು ತಟಸ್ಥರಾಗಿ ಉಳಿದುಬಿಡುವುದು ಒಳ್ಳೆಯದಲ್ಲವೇ? ಆ ಒಂದು ಗೊಡ್ಡು ವಾದದಲ್ಲಿ ಸೋತರೂ ಚಿಂತೆಯಿಲ್ಲ, ಒಂದೊಳ್ಳೆಯ ಸಂಬಂಧಕ್ಕೆ ಬೆಲೆ ಕೊಟ್ಟ ನಿಮ್ಮ ದೊಡ್ಡ ಗುಣ ಆದರ್ಶಪ್ರಾಯವಾಗಿರುತ್ತದೆ.

ನಗುನಗುತ್ತಾ ಮಾತನಾಡುವ ಶೈಲಿ ನಿಮ್ಮದಾಗಿದ್ದರೆ ಖಂಡಿತವಾಗಿಯೂ ನೀವು ಅಪಾರವಾದ ಮನಸ್ಸುಗಳನ್ನು ಗೆದ್ದಿರುತ್ತೀರಿ. ಅಂತಹ ಮಾತಿನಲ್ಲಿ ಸ್ಪಷ್ಟತೆ, ನಿಖರತೆ ಹೆಚ್ಚಾಗಿರುತ್ತದೆ. ಅಲ್ಲಿರುವ ಆತ್ಮವಿಶ್ವಾಸವೂ ಕೂಡ ಸೆಳೆಯುವಂತೆ ಮಾಡುತ್ತದೆ. ಮುಖವನ್ನು ಗಂಟಿಕ್ಕಿ, ಗಂಭೀರವಾಗಿ ಮಾತನಾಡುವ ಜನರನ್ನು ಈ ಜಗತ್ತಿನಲ್ಲಿ ಯಾರೂ ಇಷ್ಟಪಡಲಾರರು. ನಮ್ಮ ಮಾತಿನಲ್ಲಿ ತಿಳಿಹಾಸ್ಯವಿದ್ದರೆ ನಾವು ಜಗತ್ತನ್ನೇ ಗೆಲ್ಲಬಹುದೇನೋ? ತಮಾಷೆಯ ನೆಪದಲ್ಲಿ ಇನ್ನೊಬ್ಬರ ಮನಸ್ಸು ನೋಯಿಸುವ ಮಾತುಗಳು ಬೇಡವೇ ಬೇಡ. ಆ ಒಂದು ಮಾತು ನಮಗೆ ತಮಾಷೆಯಾಗಿರಬಹುದು, ಅದು ಹಲವರಿಗೆ ಅತ್ಯಂತ ಹೆಚ್ಚಿನ ನೋವು ತಂದು ಹತಾಶೆಯನ್ನುಂಟುಮಾಡಬಹುದು.

ನಾವು ಅಹಂಕಾರದಿಂದಾಗಲಿ, ಸೊಕ್ಕಿನಿಂದಾಗಲಿ ಮಾತನಾಡಿದರೆ ಯಾರೂ ನಮ್ಮ ಹತ್ತಿರ ಕೂಡ ಸುಳಿಯಲಾರರು. ಅಹಂಕಾರಕ್ಕೆ ಅಹಂಕಾರಿಗಳನ್ನು ಅಲಕ್ಷಿಸುತ್ತಾ ಮುನ್ನಡೆಯುತ್ತಾರೆ. ಆದ್ದರಿಂದ ಸಂಕುಚಿತ ಮನೋಭಾವ ಬಿಟ್ಟು ವಿಶಾಲ ಮನಸ್ಸಿನಿಂದ ಮಾತನಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಬೇಕು. ನಮ್ಮಲ್ಲಿರುವ ಹಣ, ಆಸ್ತಿ, ಅಂತಸ್ತುಗಳ ಶ್ರೀಮಂತಿಕೆಯನ್ನು ತೋರಿಸಿಕೊಳ್ಳುವ ಬದಲು ಹೃದಯ ಶ್ರೀಮಂತಿಕೆಯನ್ನು ಸಾರುವ ಪ್ರೀತಿಯ ಮಾತುಗಳು ನಮ್ಮನ್ನು ಆಗರ್ಭ ಶ್ರೀಮಂತರನ್ನಾಗಿಸುತ್ತವೆ. ಏರು ಧ್ವನಿಯಲ್ಲಿ ಅಥವಾ ಪಿಸುಪಿಸು ಮಾತಿನಿಂದ ನಾವು ಮಾತಿನ ದಾಟಿಯನ್ನು ಕಳೆದುಕೊಳ್ಳುತ್ತೇವೆ. ಇನ್ನೊಬ್ಬರಿಗೆ ತೊಂದರೆಯಾಗದ ಹಾಗೆ ಸೂಕ್ಷ್ಮವಾಗಿ, ಸಂವೇದನಾಶೀಲತೆಯಿಂದ ಮಾತನಾಡಬೇಕು.

 

ಶ್ರೀನಿವಾಸ ಎನ್‌.ದೇಸಾಯಿ

ಮದ್ಲೂರ, ಕೊಪ್ಪಳ

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.