ಆನ್ ಲೈನ್ ತರಗತಿಗೆ ನೆಟ್ ವರ್ಕ್ ಸಮಸ್ಯೆ:ಪರಿಹಾರ ಕಂಡುಕೊಳ್ಳಲು ಸಿಎಂಗೆ ಸುರೇಶ್ ಕುಮಾರ್ ಮನವಿ
Team Udayavani, Jun 21, 2021, 4:52 PM IST
ಬೆಂಗಳೂರು: ಕೋವಿಡ್ ಕಾಲಘಟ್ಟದಲ್ಲಿ ಶಾಲಾ ಕಾಲೇಜು ತರಗತಿಗಳು ಆನ್ಲೈನ್ ಮೂಲಕ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಇಂಟರ್ನಟ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಈ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ನೆಟ್-ವರ್ಕ್ ದೊರೆಯದೇ ಗ್ರಾಮೀಣ ಪ್ರದೇಶದ ಮಕ್ಕಳು ಬೆಟ್ಟ ಗುಡ್ಡಗಳನ್ನು ಹತ್ತಿ ಕುಳಿತು ಆನ್-ಲೈನ್ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಮಳೆಗಾಲವಾದ್ದರಿಂದ ಬೆಟ್ಟದ ಮೇಲೆ ಕುಳಿತು ಪಾಠದಲ್ಲಿ ತೊಡಗಿಸಿಕೊಂಡ ಮಕ್ಕಳನ್ನು ಮಳೆಯಿಂದ ರಕ್ಷಿಸಲು ಪೋಷಕರು ಛತ್ರಿ ಹಿಡಿದು ಮಳೆಯಲ್ಲಿ ನಿಂತುಕೊಂಡ ಫೋಟೋಗಳು ಪತ್ರಿಕೆಗಳಲ್ಲಿ ಮತ್ತು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ನೆಟ್ ವರ್ಕ್ ಸಮಸ್ಯೆಗೆ ಕೊನೆ ಹಾಡಲು ಆಪರೇಟರ್ ಗಳ ಸಭೆ ನಡೆಸಿ ಪರಿಹಾರ ರೂಪಿಸಬೇಕೆಂದು ಅವರು ಮುಖ್ಯಮಂತ್ರಿಯವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ‘ಕುಶಲ ಕೋಶ’ ಆ್ಯಪ್ ಲೋಕಾರ್ಪಣೆ ಮಾಡಿದ ನಾರಾಯಣ ಗೌಡ
ಇಂದಿನ ಸಂದರ್ಭವನ್ನು ಗಮನಿಸಿದರೆ ಈ ಕೋವಿಡ್ ಕಾಲಘಟ್ಟದಲ್ಲಿ ಆನ್ ಲೈನ್ ತರಗತಿಗಳೇ ಸಾಮಾನ್ಯವಾಗಬಹುದಾಗಿದೆ. ಕೋವಿಡ್ ಪೂರ್ವದ ಸಹಜ ಸಾಮಾಜಿಕ ಸ್ಥಿತಿಗತಿಗಳು ಸದ್ಯಕ್ಕೆ ಹಿಂದಿರುಗಲು ಸಾಧ್ಯವಿಲ್ಲವೆಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಈ ಹೊಸ ಸ್ಥಿತಿಗೆ ಹೊಂದಿಕೊಳ್ಳದೇ ಅನ್ಯದಾರಿ ಇಲ್ಲವಾದ್ದರಿಂದ ನಾವು ಅಂತರ್ಜಾಲ ನೆಟ್ ವರ್ಕ್ ಸಮಸ್ಯೆಯನ್ನು ಪರಿರಿಸಿಕೊಳ್ಳಲೇಬೇಕಿದೆ ಎಂದು ಸಚಿವರು ತಿಳಿಸಿದ್ದಾರೆ.
ಮೊಬೈಲ್ ನೆಟ್-ವರ್ಕ್ ಸಿಗದೇ ವಿದ್ಯಾರ್ಥಿನಿಯೊಬ್ಬಳು ಮೊಬೈಲ್ ಕಲಿಕಾ ಪ್ರಯತ್ನದಲ್ಲಿ ಮೊಬೈಲ್ ನೆಟ್ ವರ್ಕ್ ದೊರೆಯದೇ ಗುಡ್ಡದ ಮೇಲೆ ಮಳೆ ಹನಿಯಲ್ಲಿ ಪುಸ್ತಕ ಮತ್ತು ಮೊಬೈಲ್ ಹಿಡಿದು ಹತಾಶಳಾಗಿ ಕುಳಿತ ದೃಶ್ಯವೊಂದನ್ನು ಉಲ್ಲೇಖಿಸಿರುವ ಸಚಿವರು, ಆನ್-ಲೈನ್ ಶಿಕ್ಷಣ ಅನಿವಾರ್ಯವಾಗುತ್ತಿರುವ ಈ ದಿನಮಾನಗಳಲ್ಲಿ ವಿಶೇಷ ನೀತಿನಿರೂಪಣೆ ಮಾಡಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ನೆಟ್ ವರ್ಕ್ ಆಪರೇಟರ್ ಗಳ ಸಭೆಯನ್ನು ಶೀಘ್ರವೇ ಆಯೋಜಿಸಿ ಸಮರೋಪಾದಿಯಲ್ಲಿ ನೆಟ್-ವರ್ಕ್ ಸಮಸ್ಯೆಯನ್ನು ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಸುರೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ