ದಾವಣಗೆರೆ ಜಿಲ್ಲೆಯಲ್ಲಿ 150 ಮಂದಿ ಗುಣಮುಖ : 176 ಹೊಸ ಪ್ರಕರಣ ಪತ್ತೆ
Team Udayavani, Jun 21, 2021, 8:20 PM IST
ದಾವಣಗೆರೆ: ಜಿಲ್ಲೆಯಲ್ಲಿ ಸೋಮವಾರ ಕೊರೊನಾದಿಂದ 150 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 77 , ಹರಿಹರದಲ್ಲಿ 8, ಜಗಳೂರಿನಲ್ಲಿ 2, ಚನ್ನಗಿರಿಯಲ್ಲಿ 37, ಹೊನ್ನಾಳಿಯಲ್ಲಿ 33 ಹಾಗೂ ಹೊರ ಜಿಲ್ಲೆಯ 9 ಜನರು ಒಳಗೊಂಡಂತೆ 150 ಸೋಂಕಿತರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸೋಮವಾರ 176 ಜನರಲ್ಲಿ ಸೋಂಕು ಪತ್ತೆಯಾಗಿದೆ. ದಾವಣಗೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ 77 ಪ್ರಕರಣ ಪತ್ತೆಯಾಗಿವೆ. ಹರಿಹರದಲ್ಲಿ 15, ಜಗಳೂರಿನಲ್ಲಿ 9 , ಚನ್ನಗಿರಿಯಲ್ಲಿ 46, ಹೊನ್ನಾಳಿಯಲ್ಲಿ 16 ಹಾಗೂ ಹೊರ ಜಿಲ್ಲೆಯ 13 ಜನರು ಒಳಗೊಂಡಂತೆ 176 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.
ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 25728, ಹರಿಹರದಲ್ಲಿ 6699 , ಜಗಳೂರಿನಲ್ಲಿ 2637, ಚನ್ನಗಿರಿಯಲ್ಲಿ 6059, ಹೊನ್ನಾಳಿಯಲ್ಲಿ 6138, ಹೊರ ಜಿಲ್ಲೆಯ 1447 ಜನರು ಸೇರಿದಂತೆ ಈವರೆಗೆ ಒಟ್ಟು 48,708 ಜನರು ಸೋಂಕಿಗೆ ಒಳಗಾಗಿದ್ದಾರೆ.
ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ 24521, ಹರಿಹರದಲ್ಲಿ 6191, ಜಗಳೂರಿನಲ್ಲಿ 2655, ಚನ್ನಗಿರಿಯಲ್ಲಿ 5853, ಹೊನ್ನಾಳಿಯಲ್ಲಿ 5646, ಹೊರ ಜಿಲ್ಲೆಯ 1339 ಜನರು ಸೇರಿದಂತೆ 46,505 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1702 ಸಕ್ರಿಯ ಪ್ರಕರಣಗಳಿವೆ.
ಇದನ್ನೂ ಓದಿ :ರಾಯಚೂರು: ವ್ಯಾಪಾರ-ವಹಿವಾಟು ಮುಕ್ತ, ಮುಂಜಾಗ್ರತೆ ವಹಿಸಲು ಸಲಹೆ
ಜಿಲ್ಲೆಯಲ್ಲಿ ಸೋಮವಾರ ಕೊರೊನಾದಿಂದ ಏಳು ಜನರು ಮೃತಪಟ್ಟಿದ್ದಾರೆ. ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ 59 ವರ್ಷದ ವ್ಯಕ್ತಿ, ಹೊನ್ನಾಳಿ ತಾಲೂಕಿನ ಶಿಂಗಟಗೆರಿ ಗ್ರಾಮದ 84 ವರ್ಷದ ವಯೋವೃದ್ಧ, ಸಾಸ್ವೇಹಳ್ಳಿ ಗ್ರಾಮದ 70 ವರ್ಷದ ವೃದ್ಧ, ದಾವಣಗೆರೆಯ ಶಾಂತಿನಗರದ 58 ವರ್ಷದ ವ್ಯಕ್ತಿ, ಬಾಷಾ ನಗರದ 54 ವರ್ಷದ ಮಹಿಳೆ, ದಾವಣಗೆರೆ ತಾಲೂಕಿನ ಮತ್ತಿ ಗ್ರಾಮದ 45 ವರ್ಷದ ವ್ಯಕ್ತಿ, ಆಲೂರು ಗ್ರಾಮದ 65 ವರ್ಷದ ವೃದ್ಧ ಮೃತಪಟ್ಟವರು. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಜಿಲ್ಲೆಯಲ್ಲಿ 501 ಜನರು ಸಾವನ್ನಪ್ಪಿದ್ದಂತಾಗಿದೆ.
ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 107 ಸೋಂಕಿತರು ಸಾಮಾನ್ಯ, 403 ಸೋಂಕಿತರು ಆಕ್ಸಿಜನ್, 16 ಸೋಂಕಿತರು ಎನ್ಐವಿ, 49 ಸೋಂಕಿತರು ವೆಂಟಿಲೇಟರ್ 23 ಸೋಂಕಿತರು ವೆಂಟಿಲೇಟರ್ ರಹಿತ, 356ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 412 ಸೋಂಕಿತರು ಕೋವಿಡ್ ಕೇರ್ ಸೆಂಟರ್ನಲ್ಲಿ ಇದ್ದಾರೆ.
ಮೂವರಲ್ಲಿ ಬ್ಯ್ಲಾಕ್ ಫಂಗಸ್
ಜಿಲ್ಲೆಯಲ್ಲಿ ನಿನ್ನೆ ಮೂವರಲ್ಲಿ ಬ್ಯ್ಲಾಕ್ ಫಂಗಸ್ ಕಂಡು ಬಂದಿದೆ. ಈವರೆಗೆ ಜಿಲ್ಲೆಯಲ್ಲಿ 94 ಜನರಲ್ಲಿ ಬ್ಯ್ಲಾಕ್ ಫಂಗಸ್ ಕಂಡು ಬಂದಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ 29, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ 17, ಬಾಪೂಜಿ ಆಸ್ಪತ್ರೆಯಲ್ಲಿ ಒಬ್ಬರು ಒಳಗೊಂಡಂತೆ 47 ಜನರು ಗುಣಮುಖರಾಗಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ28, ಎಸ್.ಎಸ್. ಹೈಟೆಕ್ನಲ್ಲಿ 17, ಬಾಪೂಜಿ ಮತ್ತು ಕಾಲೇಜ್ ಆಫ್ ಡೆಂಟಲ್ ಸೈನ್ಸೆಸ್ನಲ್ಲಿ ತಲಾ ಒಬ್ಬರು ಒಳಗೊಂಡಂತೆ 47 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು