ಶ್ರೀಧರ ಮುರಡಿ ಹಿರೇಮಠದಲ್ಲಿ ನಿತ್ಯ ಯೋಗ
10 ವರ್ಷಗಳಿಂದ ಯೋಗ ಕಲಿಸುವ ಶ್ರೀ ಬಸವಲಿಂಗೇಶ್ವರ ಸ್ವಾಮೀಜಿ, 850 ಶಿಕ್ಷಕರಿಗೆ ತರಬೇತಿ ನೀಡಿದ ವೈದ್ಯರು
Team Udayavani, Jun 21, 2021, 8:31 PM IST
ವರದಿ: ಮಲ್ಲಪ್ಪ ಮಾಟರಂಗಿ
ಯಲಬುರ್ಗಾ: ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಪೀಠಾಧಿಪತಿ ಶ್ರೀ ಬಸವಲಿಂಗೇಶ್ವರ ಸ್ವಾಮೀಜಿ 10 ವರ್ಷಗಳಿಂದ ತಮ್ಮ ಮಠದಲ್ಲಿ ಉಚಿತ ಯೋಗ ತರಬೇತಿ ಶಿಬಿರ ಆರಂಭಿಸಿದ್ದಾರೆ. ಈ ಮೂಲಕ ಭಕ್ತರಿಗೆ ನಿತ್ಯ ಯೋಗಾಸನ ಮಾಡಿಸುತ್ತಿದ್ದಾರೆ.
ಸ್ವಂತ ಖರ್ಚಿನಲ್ಲಿ ಯೋಗಾಭ್ಯಾಸಕ್ಕೆ ಬೇಕಾಗುವ ಎಲ್ಲ ಸಾಮಗ್ರಿ ನೀಡುತ್ತಿದ್ದಾರೆ. ಶಿಬಿರಾರ್ಥಿಗಳಿಗೆ ಬೆಳಗಿನ ಜಾವ 4:30ಕ್ಕೆ ಕರೆ ಮಾಡಿ ಎಲ್ಲರನ್ನೂ ಒಗ್ಗೂಡಿಸಿ ಯೋಗಾಭ್ಯಾಸ ಕಲಿಸುತ್ತಿದ್ದಾರೆ. ಇವರ ಶಿಬಿರದಲ್ಲಿ ಪಳಗಿದ ಅನೇಕರು ಯೋಗ ಶಿಕ್ಷಕರಾಗಿ ವಿವಿಧೆಡೆ ಸೇವೆ ಮಾಡುತ್ತಿದ್ದಾರೆ. 100ಕ್ಕೂ ಅಧಿ ಕ ಆಸನಗಳನ್ನು ಶಿಬಿರಾರ್ಥಿಗಳಿಗೆ ಹೇಳಿ ಕೊಡುತ್ತಿದ್ದಾರೆ. ಆರೋಗ್ಯ ಹಾಗೂ ಒತ್ತಡದ ಬದುಕಿನಲ್ಲಿ ಕಾಲಕಳೆಯುವ ಜನತೆಯಲ್ಲಿ ಮಾನಸಿಕ ನೆಮ್ಮದಿ,ದೈಹಿಕ ಸದೃಢತೆ ಹೊಂದಲಿ ಎಂಬ ಉದ್ದೇಶದಿಂದ ಯೋಗ ಕಲಿಸಲು ಮುಂದಾಗಿದ್ದಾರೆ. ಇವರ ಬಳಿ ಯೋಗ ಕಲಿತ ಹಲವಾರು ವಿದ್ಯಾರ್ಥಿಗಳು, ಯುವಕರು, ಜಿಲ್ಲಾ- ರಾಜ್ಯಮಟ್ಟದಲ್ಲಿ ನಡೆಯುವ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಸಹ ಮುಡಿಗೇರಿಸಿಕೊಂಡಿದ್ದಾರೆ.
ಪೌಷ್ಟಿಕ ಆಹಾರ ವಿತರಣೆ: ಬೆಳಗ್ಗೆ ಶಿಬಿರಾರ್ಥಿಗಳಿಗೆ ಪೌಷ್ಟಿಕ ಆಹಾರಗಳಾದ ಮೊಳಕೆ ಕಾಳು, ಹಣ್ಣುಗಳನ್ನು ನೀಡುತ್ತಿದ್ದಾರೆ. ಬರೀ ವಿಶ್ವ ಯೋಗ ದಿನಾಚರಣೆ ಸಮಯದಲ್ಲಿ ಅಷ್ಟೇ ಅಲ್ಲ ಶ್ರೀಮಠದಲ್ಲಿ ನಿತ್ಯ ಯೋಗ ಶಿಬಿರ ನಡೆಯುತ್ತದೆ. ಶಿಬಿರದಲ್ಲಿ ಪಟ್ಟಣ ವ್ಯಾಪ್ತಿಯ 120ಕ್ಕೂ ಹೆಚ್ಚು ಜನತೆ ಪಾಲ್ಗೊಳ್ಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ