ಆರ್.ಆರ್.ನಗರದ ಅನರ್ಘ್ಯ ರತ್ನ ಮುನಿರತ್ನ : ಕಲ್ಲಡ್ಕ ಪ್ರಭಾಕರ್ ಭಟ್

ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಮೆಚ್ಚಿದ ಕಲ್ಲಡ್ಕ ಪ್ರಭಾಕರ್ ಭಟ್

Team Udayavani, Jun 21, 2021, 8:40 PM IST

968

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅನರ್ಘ್ಯ ರತ್ನ ಎಂದು ಹೇಳಿರುವ ಸಂಘ ಪರಿವಾರದ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಯಶವಂತಪುರದಲ್ಲಿ ನಿರ್ಮಿಸುತ್ತಿರುವ 400 ಹಾಸಿಗೆಗಳ ಕೋವಿಡ್ ಆಸ್ಪತ್ರೆ ನಿರ್ಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸೋಮವಾರ (ಜೂನ್ 21) ಇಲ್ಲಿನ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಗಣೇಶ ಪ್ರತಿಮೆ ಪೀಠ ಸ್ಥಾಪನೆ ಕರ‍್ಯಾರಂಭಿಸಿದ ಅವರು, ಆಸ್ಪತ್ರೆಯ ಖುದ್ದು ಪರಿಶೀಲನೆ ನಡೆಸಿದರು.

ಜಾಗತಿಕ ಸಾಂಕ್ರಾಮಿಕ ಕರೋನಾ ವೈರಸ್ ಪಸರಿಸುತ್ತಿರುವ ಈ ಸಂದರ್ಭದಲ್ಲಿ ಕೋವಿಡ್‌ಗೆ ಮೀಸಲಾದ ಹೈಟೆಕ್ ಆಸ್ಪತ್ರೆ ಮತ್ತು ಆಸ್ಪತ್ರೆಗೆ ರೋಗಿಗಳನ್ನು ತ್ವರಿತವಾಗಿ ಕರೆ ತರಲು ಅನುವಾಗುವಂತೆ ‘ವೇಗದ ಮಾರ್ಗ’ ನಿರ್ಮಿಸುತ್ತಿರುವುದು ಸಕಾಲಿಕ ಕ್ರಮ ಎಂದು ಹೇಳಿದರು.

“ಮುನಿರತ್ನ” ಎಂಬ ಹೆಸರನ್ನು ಉಲ್ಲೇಖಿಸಿದ ಪ್ರಭಾಕರ್ ಭಟ್ ಅವರು, “ಮುನಿ ಎಂದರೆ ಋಷಿ, ರತ್ನ ಎಂದರೆ ಋಷಿಗಳಲ್ಲಿ ಶ್ರೇಷ್ಠರು, ತಮ್ಮ ಸುಖಃವನ್ನು ತ್ಯಜಿಸಿ ಲೋಕ ಕಲ್ಯಾಣಕ್ಕೆ ಶ್ರಮಿಸುವವರೇ ಋಷಿ ಮುನಿಗಳು, ಹೆಸರಿಗೆ ತಕ್ಕಂತೆ ಮುನಿರತ್ನ ಸಹ ತಮ್ಮ ಕ್ಷೇತ್ರದ ಜನತೆ ಒಳಿತಿಗೆ ಶ್ರಮಿಸುತ್ತಿದ್ದಾರೆ” ಎಂದು ಶ್ಲಾಘಿಸಿದರು.

ಕರೋನಾ- ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಈಡಾಗಿರುವ ತಮ್ಮ ಕ್ಷೇತ್ರದ ಜನತೆಗೆ ಆಹಾರ ಮತ್ತು ತರಕಾರಿ ಕಿಟ್ ವಿತರಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಂಘ ಪರಿವಾರದ ಹಿರಿಯ, ಆರ್.ಆರ್.ನಗರದಲ್ಲಿ ಆಹಾರ ಕಿಟ್ ವಿತರಣೆ ನಡೆಯುತ್ತಿದ್ದ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಖುದ್ದು ವೀಕ್ಷಿಸಿದರು.

ಅಕ್ಕಿ, ಬೇಳೆ, ಎಣ್ಣೆ, ಗೋಧಿಹಿಟ್ಟು, ರವೆ, ಟೂತ್ ಪೇಸ್ಟ್, ಸೋಪುಗಳು ಸೇರಿದಂತೆ ತಾಜಾ ತರಕಾರಿಗಳನ್ನು ವಿತರಿಸುತ್ತಿರುವುದು ಮತ್ತು ಈ ಸಂದರ್ಭದಲ್ಲಿ ನೂಕು ನುಗ್ಗಲು ಆಗದಂತೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಮೊಬೈಲ್- ಓಟಿಪಿ ತಂತ್ರಜ್ಞಾನದ ಮೂಲಕ ಶಿಸ್ತುಬದ್ಧವಾಗಿ ದಿನಸಿ ಕಿಟ್‌ಗಳನ್ನು ನೀಡುತ್ತಿರುವುದನ್ನು ಪರಿಶೀಲಿಸಿದ ಅವರು, ಇತರೆ ಜನಪ್ರತಿನಿಧಿಗಳಿಗೆ ಮುನಿರತ್ನ ಮಾದರಿಯಾಗಿದ್ದಾರೆ. ಎಲ್ಲ ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನತೆಯನ್ನು ಇದೇ ರೀತಿ ಪ್ರೀತಿ ಅಭಿಮಾನಗಳಿಂದ ಕಂಡರೆ ದೇಶಕ್ಕೆ ಒಳಿತಾಗಲಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಶಾಸಕ ಮುನಿರತ್ನ, ಪ್ರಭಾಕರ್ ಭಟ್ ಅವರಿಗೆ ಆಹಾರ ಪದಾರ್ಥಗಳ ವಿತರಣೆ ಮತ್ತು ಆಸ್ಪತ್ರೆ ಕಾಮಗಾರಿ ಬಗ್ಗೆ ಖುದ್ದು ಮಾಹಿತಿ ನೀಡಿದರು.

ಹೈಟೆಕ್ ಆಸ್ಪತ್ರೆ!

ಆರ್.ಆರ್.ನಗರ ಕ್ಷೇತ್ರದ ಶಾಸಕ ಮುನಿರತ್ನ ಒತ್ತಾಸೆಗೆ ಪ್ರತಿಯಾಗಿ ಯಶವಂತಪುರ ಕ್ಷೇತ್ರದಲ್ಲಿ ನಿರ್ಮಿಸಲಾಗುತ್ತಿರುವ 400 ಹಾಸಿಗೆಗಳ ಕೋವಿಡ್ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಿದ್ದು ಈ ಮೂಲಕ ಆಸ್ಪತ್ರೆ ಆಗು ಹೋಗುಗಳ ಬಗ್ಗೆ ದಿನದ 24 ಗಂಟೆಯೂ ತಾವೇ ಖುದ್ದು ನಿಗಾ ಇರಿಸುವಂತಹ ವ್ಯವಸ್ಥೆ ಮಾಡಿದ್ದಾರೆ.

ಹಳೆಯ ಹೆರಿಗೆ ಆಸ್ಪತ್ರೆ ಕಟ್ಟಡಕ್ಕೆ ಅತ್ಯಾಧುನಿಕ ಆಸ್ಪತ್ರೆ ಸೌಲಭ್ಯಗಳನ್ನು ಒದಗಿಸುತ್ತಿರುವ ಅವರು, ಲಿಫ್ಟ್, ಆಕ್ಸಿಜನ್ ಘಟಕ, ಎಕ್ಸ್ರೆ ಘಟಕಗಳನ್ನು ಈಗಾಗಲೇ ಅಳವಡಿಸಿದ್ದು, ಇನ್ನೂ ಒಂದು ಹೆಜ್ಜೆ ಮುಂದೆ ಸಾಗಿ “ಆನ್‌ಲೈನ್ ನಿಗಾ” ವ್ಯವಸ್ಥೆಯನ್ನು ಅಳವಡಿಸುತ್ತಿದ್ದಾರೆ.

ಕರೋನಾ ಸಂದರ್ಭದಲ್ಲಿ ರೋಗಿಗಳ ಸಂಕಷ್ಟವನ್ನು ಖುದ್ದು ವೀಕ್ಷಿಸಿ ನಿಗಾ ವಹಿಸಿ ಸ್ಥಳದಲ್ಲಿರುವ ವೈದ್ಯರು- ದಾದಿಯರಿಗೆ ಸೂಕ್ತ ನಿರ್ದೇಶನ- ಮಾರ್ಗದರ್ಶನ ನೀಡುವ ಸಲುವಾಗಿ ಆಸ್ಪತ್ರೆಯಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ.

ಆತ್ಯಾಧುನಿಕ ಮಾದರಿಯ ಚಲಿಸುವ ಕ್ಯಾಮರಾಗಳು ಇದ್ದಾಗಿದ್ದು, ಶಾಸಕರು ತಮ್ಮ ಮೊಬೈಲ್‌ನಲ್ಲಿ ಆಸ್ಪತ್ರೆಯನ್ನು ವೀಕ್ಷಿಸುವ ವ್ಯವಸ್ಥೆಗೆ ನಾಂದಿಹಾಡಿದ್ದಾರೆ. ಇದರಿಂದ ರೋಗಿಗಳ ದೂರಿಗೆ ಕ್ಷಣದಲ್ಲಿ ಸ್ಪಂಧಿಸುವ ಜತೆಗೆ ಸಿಬ್ಬಂದಿ ಸಹ ಎಚ್ಚರಿಕೆಯಿಂದ ಕೆಲಸ ಮಾಡಲು ಸಾಧ್ಯವಾಗಲಿದೆ.

ಒಟ್ಟಾರೆ ಯಶ್ವಂತಪುರದಲ್ಲಿ ಭರದಿಂದ ನಿರ್ಮಾಣವಾಗುತ್ತಿರುವ ಕೋವಿಡ್ ಆಸ್ಪತ್ರೆ ಕಾಮಗಾರಿ ಹೊಸ ವ್ಯವಸ್ಥೆಗೆ ನಾಂದಿಹಾಡಲಿದೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.