ನೀರಿನ ಹೊಂಡಕ್ಕೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು
Team Udayavani, Jun 22, 2021, 12:03 AM IST
ಬೆಳಗಾವಿ: ಖಾನಾಪುರ ತಾಲೂಕಿನ ಗಣೇಬೈಲ್ ದಲ್ಲಿ ಶಾಲಾ ವಿದ್ಯಾರ್ಥಿಗಳಿಬ್ಬರು ನೀರಿನ ಹೊಂಡದಲ್ಲಿ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.
ಗಣೇಬೈಲ್ ಮರಾಠಿ ಪ್ರಾಥಮಿಕ ಶಾಲೆ ಆರನೇ ತರಗತಿ ವಿದ್ಯಾರ್ಥಿ ಝಾಡ ಅಂಕಲೆ ಗ್ರಾಮದ ವಿಠ್ಠಲ ಪರುಶರಾಮ ನಿಲಜಕರ ಹಾಗೂ ಝಾಡ ಅಂಕಲೆ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭೂತನಾಥ ದೀಪಕ ನಿಲಜಕರ ಎಂಬ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ತನ್ನ ಅಜ್ಜಿಯೊಂದಿಗೆ ಎಮ್ಮೆ ತೊಳೆಯಲು ವಿದ್ಯಾರ್ಥಿಗಳು ಹೋಗಿದ್ದರು. ಎಮ್ಮೆ ತೊಳೆದು ಅಜ್ಜಿ ಮನೆಗೆ ವಾಪಸ್ ಬಂದಿದ್ದಾಳೆ. ಆದರೆ ಇಬ್ಬರೂ ವಿದ್ಯಾರ್ಥಿಗಳು ನೀರಿನತ್ತ ಹೋಗಿದ್ದರು. ಇದೇ ನೀರಿನ ಹೊಂಡದಲ್ಲಿ ಒಂದುದಿನ ಹಿಂದೆಯಷ್ಟೇ ಎಮ್ಮೆಯೊಂದು ಬಿದ್ದಿದ್ದ ಜಾಗ ನೋಡಲು ಈ ಇಬ್ಬರು ವಿದ್ಯಾರ್ಥಿಗಳು ಹೋಗಿದ್ದರು. ಒಬ್ಬ ಮುಂದೆ ಹೋದಾಗ ಕಾಲು ಜಾರಿ ರಾಡಿ ತುಂಬಿದ ನೀರಿನಲ್ಲಿ ಬಿದ್ದಿದ್ದಾನೆ. ಈತನನ್ನು ಹಿಡಿಯಲು ಇನ್ನೊಬ್ಬ ಹೋಗಿ ಇಬ್ಬರೂ ನೀರು ಪಾಲಾಗಿದ್ದಾರೆ. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!