ಕಬ್ಬಿನ ಗದ್ದೆಯಲ್ಲಿ 8 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ; ಅತ್ಯಾಚಾರ ಶಂಕೆ
Team Udayavani, Jun 22, 2021, 11:37 AM IST
ಲಕ್ನೋ: ಎಂಟು ವರ್ಷದ ಬಾಲಕಿಯ ಮೃತದೇಹವು ಕತ್ತು ಹಿಸುಕಿದ ರೀತಿಯಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ಪತ್ತೆಯಾಗಿದ್ದು, ಪೊಲೀಸರು ಅತ್ಯಾಚಾರ ಶಂಕೆ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಖೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಲಕ್ನೋದಿಂದ 130 ಕಿ.ಮೀ ದೂರದಲ್ಲಿರುವ ಖೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ನಾಪತ್ತೆಯಾಗಿ ಕೆಲವು ಗಂಟೆಗಳ ಬಳಿಕ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಾಲಕಿಯ ಮೈಮೇಲಿನ ಗಾಯಗಳ ಆಧಾರದಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ.
ಅವಳು ಧರಿಸಿದ್ದ ಬಟ್ಟೆಗಳಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ.
ಇದನ್ನೂ ಓದಿ:ದೆಹಲಿ: ಬ್ಯಾಂಕ್ ಗೋಡೆ ಕೊರೆದು 55 ಲಕ್ಷ ರೂಪಾಯಿ ನಗದು ದೋಚಿದ ಕಳ್ಳರು
ಗ್ರಾಮಸ್ಥರ ಹೇಳಿಕೆಗಳ ಪ್ರಕಾರ ಬಾಲಕಿ ತಮ್ಮ ಹೊಲದಲ್ಲಿ ಆಡುಗಳನ್ನು ಮೇಯಿಸಲು ಅಜ್ಜಿ ಜೊತೆ ಭಾನುವಾರ ಬೆಳಿಗ್ಗೆ ಮನೆಯಿಂದ ಹೋಗಿದ್ದಳು. ಮಧ್ಯಾಹ್ನದ ಹೊತ್ತಿಗೆ ಹೊಲದಿಂದ ಅವಳು ಮನೆಗೆಂದು ಮರಳಿದ್ದಾಳೆ. ಆದರೆ ಸಂಜೆಯಾದರೂ ಬಾಲಕಿ ಮನೆಗೆ ಹಿಂತಿರುಗದಿದ್ದಾಗ, ಕುಟುಂಬವು ಅವಳನ್ನು ಹುಡುಕಲು ಪ್ರಾರಂಭಿಸಿತ್ತು.
“ನಾನು ದಣಿದಿದ್ದೇನೆ, ಮನೆಗೆ ಹೋಗಬೇಕು ಎಂದು ಹುಡುಗಿ ಹೇಳಿದ್ದಳು. ಹಾಗಾಗಿ ನಾನು ‘ನೀನು ಮನೆಗೆ ಹೋಗು ನಾನು ಆಡುಗಳನ್ನು ಮೇಯಿಸುತ್ತೇನೆ’ ಎಂದು ಹೇಳಿದೆ. ನಾನು ಆಡುಗಳೊಂದಿಗೆ ಸಂಜೆ ಮನೆಗೆ ಬಂದೆ. ಆಗ ಅವಳು ಮನೆಗೆ ತಲುಪಿಲ್ಲ ಎಂದು ತಿಳಿಯಿತು. ಸ್ಥಳೀಯ ವಿವಾಹಕ್ಕೆ ಸಮಾರಂಭದ ಕಡೆ ಹೋಗಿರಬಹುದು ಎಂದು ಭಾವಿಸಿದೆವು. ಆದರೆ ಅವಳು ಅಲ್ಲಿ ಕೂಡ ಇರಲಿಲ್ಲ. ನಂತರ ಹುಡುಕಾಟ ನಡೆಸಿದಾಗ ಆಕೆಯ ದೇಹವು ಪತ್ತೆಯಾಗಿದೆ. ಅವಳ ಕಾಲುಗಳನ್ನು ಕಟ್ಟಲಾಗಿತ್ತು ಮತ್ತು ಎಲ್ಲೆಡೆಯೂ ಸಾಕಷ್ಟು ರಕ್ತ ಇತ್ತು “ಎಂದು ಹುಡುಗಿಯ ಅಜ್ಜಿ ಸುದ್ದಿಗಾರರಿಗೆ ತಿಳಿಸಿದರು.
ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ