ಅಷ್ಟಾಂಗ ಯೋಗದಿಂದ ಮೋಕ್ಷ ಪ್ರಾಪ್ತಿ


Team Udayavani, Jun 22, 2021, 6:45 PM IST

ಅಷ್ಟಾಂಗ ಯೋಗದಿಂದ ಮೋಕ್ಷ ಪ್ರಾಪ್ತಿ

ಶಿವಮೊಗ್ಗ: ಅಷ್ಟಾಂಗ ಯೋಗದಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ. ಯೋಗ, ಉತ್ತಮ ಕರ್ಮ ಮತ್ತು ಸದ್ವಿಚಾರಗಳನ್ನು ಪಾಲಿಸುವವರು ಎಲ್ಲರಿಗೂ ಒಳ್ಳೆಯದನ್ನು ಬಯಸುವವರು ಯೋಗಿಗಳಾಗುತ್ತಾರೆ. ಅಹಂಕಾರ ಇಲ್ಲದ ವರ್ತನೆಯಿಂದ ಮಾನವನ ಉದ್ಧಾರವಾಗುತ್ತದೆ ಎಂದು ಅವಧೂತರಾದ ಗೌರಿಗದ್ದೆಯ ವಿನಯ್‌ ಗುರೂಜಿ ಹೇಳಿದರು.

ವಿನೋಬ ನಗರದ ಕಲ್ಲಹಳ್ಳಿಯ ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಸಚಿವ ಈಶ್ವರಪ್ಪ ದೇಣಿಗೆಯಿಂದ ನಿರ್ಮಿಸಿದ ಮುಖ್ಯದ್ವಾರದ ಸ್ವಾಗತ ಕಮಾನಿನ ಲೋಕಾರ್ಪಣೆ ಹಾಗೂ ಅಂತಾರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ನಾನು ನನ್ನದು’ ಎಂಬ ಅಹಂಕಾರದ ವರ್ತನೆಯನ್ನು ಬಿಡುವುದೇ ಯೋಗ. ಯೋಗದಿಂದಲೇ ಭಾರತ ಇಂದು ವಿಶ್ವಗುರುವಾಗಿದೆ. ಮೊದಲು ನಿನ್ನಲ್ಲಿರುವ ಶಕ್ತಿಯನ್ನು ಜಾಗೃತಗೊಳಿಸಿ ನಾಡಿ ಶುದ್ಧೀಕರಣದಿಂದ ದೇಹಕ್ಕೆ ಮತ್ತು ಮನಸ್ಸಿಗೆ ಅಗತ್ಯವಾದ ಉತ್ತಿಷ್ಠ ಮತ್ತು ಜಾಗೃತ ಸ್ಥಿತಿಯನ್ನು ಯೋಗದಿಂದ ತಲುಪಬಹುದು. 40 ವರ್ಷದ ಮಹಿಳೆಯೊಬ್ಬರು ಯಾವುದೇ ಆಹಾರವನ್ನು ಸೇವಿಸದೇ ಯೋಗದಿಂದಲೇ ಬದುಕಿದ ಉದಾಹರಣೆ ಇದೆ. ನಮ್ಮ ದೇಶದಲ್ಲಿ ನೂರಾರು ಯೋಗ ಸಾಧಕರು ಅಸಾಮಾನ್ಯ ಸಾಧನೆ ಮಾಡಿದ್ದಾರೆ. “ಸೋಹಂ ಧ್ಯಾನ ನಾನು ನೀನೇ’ ಎಂದು ಪರಮಾತ್ಮನನ್ನು ಧ್ಯಾನಿಸುವುದೇ ಯೋಗವಾಗಿದೆ ಎಂದು ಹೇಳಿದರು.

ಸಮಚಿತ್ತದಲ್ಲಿರಲು ಯೋಗ ಬಿಟ್ಟರೆ ಬೇರೆ ಹಾದಿ ಇಲ್ಲ. ಭಜನೆಯಿಂದ ಭಾವಶುದ್ಧಿಯಾಗುತ್ತದೆ. ಯೋಗದಿಂದ ದೇಹ ಶುದ್ಧವಾಗುತ್ತದೆ. ಮಾತೆಯರು ಸಣ್ಣವರಿದ್ದಾಗಲೇ ಯೋಗಾಭ್ಯಾಸ ಆರಂಭಿಸಿ ತಮ್ಮ ಮಕ್ಕಳಿಗೂ ಉತ್ತಮ ಸಂಸ್ಕಾರ ನೀಡಬೇಕು. ಯಾರ ಸಹವಾಸವನ್ನು ಜಾಸ್ತಿ ಮಾಡುತ್ತೇವೆಯೋ ಅವರ ಗುಣವೇ ಬರುತ್ತದೆ. ಸಂಸ್ಕಾರದಿಂದ ಮಾತ್ರ ಭಾರತ ಇಷ್ಟು ದೊಡ್ಡ ಮಟ್ಟಿಗೆ ನಿಂತಿದೆ. ಜೀವನವನ್ನು ಯೋಗದಿಂದ ಪೂರ್ಣದ ಕಡೆಗೆ ತೆಗೆದುಕೊಂಡು ಹೋಗಬಹುದು ಎಂದರು.

ಕಂಡವರ ವಿಚಾರ ಮಾತನಾಡಿದರೆ ಅದು ಮೈಲಿಗೆಯಾಗುತ್ತದೆ. ಅದನ್ನು ಬಿಟ್ಟು ಎಲ್ಲರನ್ನೂ ಒಂದುಗೂಡಿಸುವ ಯೋಗದೆಡೆಗೆ ಮನಸ್ಸು ಮಾಡಿ ಎಂದು ತಿಳಿಸಿದರು. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಬೇಡವಾದ್ದನ್ನು ಬಿಟ್ಟು ಬೇಕಾಗಿರುವುದನ್ನು ಮಾತ್ರ ಸ್ವೀಕರಿಸಿ. ಪಂಚೇಂದ್ರಿಯಗಳು ಉಪಕಾರದ ಜೊತೆಗೆ ಅಪಕಾರ ಮಾಡುತ್ತವೆ. ಅದನ್ನು ಹಿಡಿತದಲ್ಲಿಟ್ಟುಕೊಂಡು ಮನಸ್ಸನ್ನು ಯೋಗದೆಡೆಗೆ ಕೇಂದ್ರೀಕರಿಸಿದಾಗ ಸಾಧನೆ ಮಾಡಬಹುದು ಎಂದರು.

ಶಾಸಕ ಎಸ್‌. ರುದ್ರೇಗೌಡ, ಶಿವಗಂಗಾ ಯೋಗಕೇಂದ್ರದ ಯೋಗಾಚಾರ್ಯ ಡಾ| ಸಿ.ವಿ. ರುದ್ರಾರಾಧ್ಯ, ಸೂಡಾ ಅಧ್ಯಕ್ಷ ಎಸ್‌.ಎಸ್‌. ಜ್ಯೋತಿಪ್ರಕಾಶ್‌, ಪಾಲಿಕೆಸದಸ್ಯೆ ಅನಿತಾ ರವಿಶಂಕರ್‌, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ, ಎಸ್‌.ವೈ. ಅರುಣಾದೇವಿ ಇನ್ನಿತರರು ಇದ್ದರು

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.