ಎಚ್.ಡಿ.ದೇವೇಗೌಡರಿಗೆ 2 ಕೋಟಿ ರೂ. ದಂಡ
Team Udayavani, Jun 22, 2021, 6:15 PM IST
ಬೆಂಗಳೂರು: ನಂದಿ ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್(ನೈಸ್)ಸಂಸ್ಥೆವಿರುದ್ಧ ಆರೋಪ ಸಾಬೀತುಪಡಿಸುವಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಫಲರಾಗಿದ್ದು, ಹೀಗಾಗಿ ನೈಸ್ ಕಂಪನಿಗೆ ಎರಡು ಕೋಟಿ ರೂ. ಪರಿಹಾರ ಕಟ್ಟಿಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.
2011ರಲ್ಲಿ ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡಅವರು ನೈಸ್ ಸಂಸ್ಥೆ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಈ ಸಂಬಂಧ ಸಂಸ್ಥೆ 10 ಕೋಟಿ ರೂ. ಮಾನನಷ್ಟ ಪರಿಹಾರಕೋರಿ ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಸಿಟಿ ಸಿವಿಲ್ಕೋರ್ಟ್ ನ ನ್ಯಾಯಾಧೀಶರಾದ ಮಲ್ಲನಗೌಡ ಅವರುಎರಡು ಕೋಟಿ ರೂ. ನಷ್ಟ ಪರಿಹಾರ ನೀಡುವಂತೆ ದೇವೇಗೌಡರಿಗೆ ಆದೇಶಿಸಿದ್ದಾರೆ. ಸಂಸ್ಥೆಯ ವಿರುದ್ಧ ಮಾಡಿದ ಆರೋಪಗಳನ್ನು ಸಾಬೀತುಮಾಡುವಲ್ಲಿ ಎಚ್.ಡಿ.ದೇವೇಗೌಡರು ವಿಫಲರಾಗಿರುವ ಹಿನ್ನೆಲೆಯಲ್ಲಿನಷ್ಟ ಪರಿಹಾರಕೊಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು