ಶಾಸಕ ಈಶ್ವರ ಖಂಡ್ರೆಗೆ ಶ್ರೀಗಳಿಂದ ಸನ್ಮಾನ
ಮೊದಲ ಬಾರಿಗೆ ಇಷ್ಟು ದಿನ ಕ್ಷೇತ್ರದ ಜನರಿಂದ ದೂರ ಉಳಿಯುವಂತಾಯಿತು ಎಂದು ವಿಷಾದ ವ್ಯಕ್ತಪಡಿಸಿದರು.
Team Udayavani, Jun 22, 2021, 7:36 PM IST
ಭಾಲ್ಕಿ: ಮಠಾಧಿಧೀಶರ ಆಶೀರ್ವಾದ ಹಾಗೂ ಕ್ಷೇತ್ರದ ಕಾರ್ಯಕರ್ತರ, ಅಭಿಮಾನಿಗಳ ಪ್ರಾರ್ಥನೆ, ಹಾರೈಕೆಯಿಂದ ಕೋವಿಡ್ ಸೋಂಕಿನಿಂದ ಗುಣಮುಖನಾಗಿ ಮತ್ತೆ ಜನರ ಸೇವೆ ಮರಳಿದ್ದೇನೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಶನಿವಾರ ಶಾಸಕ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಉಭಯ ಶ್ರೀಗಳಿಂದ ಆಶೀರ್ವಾದ ಪಡೆದು ಮಾತನಾಡಿದರು. ಇಷ್ಟೊಂದು ಸುದೀರ್ಘ ಅವ ಧಿ ಎಂದು ನಾನು ಕ್ಷೇತ್ರ ಬಿಟ್ಟವನಲ್ಲ. ಆದರೇ ಕೋವಿಡ್ ಸೋಂಕಿತನಾಗಿ ತಿಂಗಳುಗಟ್ಟಲೇ ಆಸ್ಪತ್ರೆ ಸೇರಿದ ಪರಿಣಾಮ ಇದೇ ಮೊದಲ ಬಾರಿಗೆ ಇಷ್ಟು ದಿನ ಕ್ಷೇತ್ರದ ಜನರಿಂದ ದೂರ ಉಳಿಯುವಂತಾಯಿತು ಎಂದು ವಿಷಾದ ವ್ಯಕ್ತಪಡಿಸಿದರು.
ಕೋವಿಡ್ ಸೋಂಕಿತನಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮಠಾಧೀಶರು ಕರೆ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಕಾರ್ಯಕರ್ತರು, ಅಭಿಮಾನಿಗಳು ವಿವಿಧ ಕಡೆಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ.
ಎಲ್ಲರ ಹಾರೈಕೆ, ಪ್ರಾರ್ಥನೆಯಿಂದ ಗುಣಮುಖನಾಗಿದ್ದೇನೆ ಎಂದರು. ಡಾ| ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಚನ್ನಬಸವ ಬಳತೆ, ರವಿ ಬೋರ್ವೆಲ್ಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು