ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ
Team Udayavani, Jun 22, 2021, 10:19 PM IST
ವಿಜಯಪುರ : ಅನ್ಯ ಕೋಮಿಗೆ ಸೇರಿದ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತಂದೆಯೋರ್ವ ತನ್ನ ಮಗಳು ಹಾಗೂ ಆಕೆಯ ಪ್ರಿಯಕರನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮರ್ಯಾದಾ ಹತ್ಯೆಗೆ ಬಲಿಯಾದ ಪ್ರೇಮಿಗಳನ್ನು ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಗ್ರಾಮದ ಬಸವರಾಜ ಮಡಿವಾಳಪ್ಪ ಬಡಿಗೇರಿ (19), ಖಾನಾಪುರದ ದವಲಬಿ ಬಂದಗಿಸಾಬ್ ತಂಬದ (18) ಎಂದು ಗುರುತಿಸಲಾಗಿದೆ.
ದವಲಬಿ ತಂಬದ ದಲಿತ ಸಮುದಾಯಕ್ಕೆ ಸೇರಿದ ಬಸವರಾಜ ಎಂಬ ಯುವಕನನ್ನು ಪ್ರೀತಿಸಿದ್ದೇ ಮರ್ಯಾದಾ ಹತ್ಯೆಯ ಜೋಡಿ ಕೊಲೆಗೆ ಕಾರಣವಾಗಿದೆ.
ದವಲಬಿ ಹಾಗೂ ಬಸವರಾಜ ಇವರು ಪರಸ್ಪರ ಪ್ರೀತಿಸುತ್ತಿದ್ದ ವಿಷಯ ಯುವತಿ ಮನೆವರಿಗೆ ತಿಳಿದು, ವಿರೋಧ ವ್ಯಕ್ತಪಡಿಸಿದ್ದರು. ಆದರೆ ಮನೆಯವರ ವಿರೋಧದ ಮಧ್ಯೆಯೂ ಯುವಪ್ರೇಮಿಗಳು ಮಂಗಳವಾರ ಮಧ್ಯಾಹ್ನ ಹೊಲದಲ್ಲಿ ಪರಸ್ಪರ ಭೇಟಿಯಾಗಿದ್ದರು. ಈ ವೇಳೆಯಲ್ಲೇ ಯುವತಿಯ ತಂದೆ ಅಲ್ಲಿಗೆ ಬಂದಿದ್ದು, ಇಬ್ಬರನ್ನು ಕಂಡು ಕುಪಿತನಾಗಿದ್ದಾನೆ. ಅಲ್ಲದೇ ಕಲ್ಲು ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಆದರೆ ಕೃತ್ಯಕ್ಕೆ ಸಂಬಂಧಿಸಿದಂತೆ ಈ ವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಎಸ್ಪಿ ಅನುಪಮ್ ಅಗರವಾಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು