ಮುಂಬಯಿ: ನೆರೆಹೊರೆಯವರ ಆರೋಪ: 12ನೇ ಮಹಡಿಯಿಂದ ಕೆಳಕ್ಕೆ ಜಿಗಿದು ತಾಯಿ, ಮಗು ಆತ್ಮಹತ್ಯೆ
ಪತಿಯನ್ನು ಕಳೆದುಕೊಂಡ ನಂತರ ಆಕೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾಳೆ ಎಂದು ವರದಿ ತಿಳಿಸಿದೆ.
Team Udayavani, Jun 23, 2021, 2:31 PM IST
ಮುಂಬಯಿ: 12ನೇ ಮಹಡಿಯಿಂದ ಮಹಿಳೆಯೊಬ್ಬಳು ತನ್ನ ಮಗನೊಂದಿಗೆ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯಲ್ಲಿ ಸೋಮವಾರ(ಜೂನ್ 21) ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:MAHE:ಪ್ರಸಕ್ತ ಶೈಕ್ಷಣಿಕ ವರ್ಷದಿಂದ ‘ಬಿಎ ಇನ್ ಎಸ್ಥೆಟಿಕ್ಸ್ ಆಂಡ್ ಪೀಸ್ ಸ್ಟಡೀಸ್’ ಪ್ರಾರಂಭ
ತನ್ನ ಮಗ ಅತೀ ಗಲಾಟೆ ಮಾಡುತ್ತಿರುವುದಾಗಿ ನೆರೆಹೊರೆಯವರು ಕಿರುಕುಳ ನೀಡಿದ್ದರಿಂದ ಮನನೊಂದು ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಆರೋಪಿಸಿ 44 ವರ್ಷದ ರೇಷ್ಮಾ ಟ್ರೆಂಚಿಲ್ ಡೆತ್ ನೋಟ್ ಬರೆದಿಟ್ಟಿರುವುದಾಗಿ ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಫ್ಲ್ಯಾಟ್ ನ ಕೆಳಅಂತಸ್ತಿನಲ್ಲಿ ವಾಸ್ತವ್ಯ ಹೂಡಿದ್ದ 33ವರ್ಷದ ವ್ಯಕ್ತಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಟ್ರೆಂಚಿಲ್ ಇತ್ತೀಚೆಗೆ ಕೋವಿಡ್ ನಿಂದ ತನ್ನ ಪತಿಯನ್ನು ಕಳೆದುಕೊಂಡಿದ್ದ. ಬಳಿಕ ಚಾಂಡಿವಾಲಿ ಫ್ಲ್ಯಾಟ್ ನಲ್ಲಿ ತನ್ನ ಏಳು ವರ್ಷದ ಮಗನ ಜತೆ ವಾಸವಾಗಿದ್ದರು. ಆದರೆ ಮಗ ಅತೀಯಾದ ಗಲಾಟೆ ಮಾಡುತ್ತಿದ್ದ ಬಗ್ಗೆ ನೆರೆಹೊರೆಯವರು ಕಿರುಕುಳ ನೀಡುತ್ತಿದ್ದರು ಎಂದು ವರದಿ ವಿವರಿಸಿದೆ.
ಟ್ರೆಂಚಿಲ್ ವಾಸಿಸುತ್ತಿದ್ದ ಫ್ಲ್ಯಾಟ್ ನಲ್ಲಿದ್ದ ಅಯೂಬ್ ಖಾನ್ (67), ಪತ್ನಿ ಹಾಗೂ ಮಗ ಶಾದಾಬ್ ವಾಸವಾಗಿದ್ದರು. ಪತಿಯನ್ನು ಕಳೆದುಕೊಂಡ ನಂತರ ಆಕೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾಳೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !