ಪುಂಜಾಲಕಟ್ಟೆ: ಮಗನನ್ನು ಕಡಿದು ಕೊಂದು ತಂದೆ ಆತ್ಮಹತ್ಯೆ
Team Udayavani, Jun 23, 2021, 3:48 PM IST
ಪುಂಜಾಲಕಟ್ಟೆ: ತಂದೆಯೇ ಮಗನನ್ನು ಕಡಿದು ಕೊಲೆ ಮಾಡಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಪುಂಜಾಲಕಟ್ಟೆ ಯಲ್ಲಿ ಬುಧವಾರ ಸಂಭವಿಸಿದೆ.
ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪದ ಶ್ರೀ ರಾಮ ಭಜನಾ ಮಂದಿರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಬು ನಾಯ್ಕ ( 58) ತನ್ನ ಪುತ್ರ ಸಾತ್ವಿಕ್(15) ನನ್ನು ಕಡಿದು ಕೊಲೆಗೈದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಬಾಬು ನಾಯ್ಕನ ಪತ್ನಿ ಸುಗಂಧಿ ಅವರು ಫ್ಯಾಕ್ಟರಿಯೊಂದಕ್ಕೆ ಕೆಲಸಕ್ಕೆ ತೆರಳಿದ್ದರು. ಸಾತ್ವಿಕ್ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 8 ನೇ ತರಗತಿ ವಿದ್ಯಾರ್ಥಿ ಯಾಗಿದ್ದ.
ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬುಧವಾರ ಮಧ್ಯಾಹ್ನ ಕೂಡಾ ಗಲಾಟೆ ಮಾಡಿದ್ದು ಬಳಿಕ ಮಗ ಸಾತ್ವಿಕ್ನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ. ಬಳಿಕ ಮನೆಯ ಪಕ್ಕಾಸಿಗೆ ಹಗ್ಗ ದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ: ರಸ್ತೆ ಅಪಘಾತ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ; ಮಾನವೀಯತೆ ಮೆರೆದ ಕೋಟಾ ಶ್ರೀನಿವಾಸ್ ಪೂಜಾರಿ
ಸುಗಂಧಿ ಅವರು ಫೋನ್ ಮಾಡಿದಾಗ ಸಾತ್ವಿಕ್ ತೆಗೆಯದಿದ್ದಾಗ ಸಂಶಯಗೊಂಡು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸುದ್ದಿ ತಿಳಿದು ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಸ್ಥಳಕ್ಕೆ ಭೇಟಿ ನೀಡಿದ್ದರು. ಠಾಣಾಧಿಕಾರಿ ಸೌಮ್ಯಾ ಜೆ. ಸ್ಥಳದಲ್ಲಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
Rajinikanth ಬಯೋಪಿಕ್ಗೆ ಭರ್ಜರಿ ತಯಾರಿ; ಬಾಲಿವುಡ್ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ