ನಾಲ್ಕು ಕೆಳಹಂತದ ಸೇತುವೆ ಸಂಚಾರಕ್ಕೆ ಮುಕ್ತ
Team Udayavani, Jun 23, 2021, 5:31 PM IST
ಚಿಕ್ಕೋಡಿ: ಮಹಾರಾಷ್ಟ್ರದ ಜಲಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದ್ದು ಕೃಷ್ಣಾ ನದಿ 4 ಅಡಿ ಮತ್ತು ದೂಧಗಂಗಾ ಮತ್ತು ವೇದಗಂಗಾ ನದಿಗಳಲ್ಲಿ ನೀರಿನ ಮಟ್ಟ 2 ಅಡಿ ಇಳಿಕೆಯಾಗಿದ್ದು, ವೇದಗಂಗಾ ನದಿಗೆ ಅಡ್ಡಲಾಗಿರುವ 4 ಕೆಳಹಂತದ ಸೇತುವೆಗಳು ಸಂಚಾರಕ್ಕೆ ಮುಕ್ತಗೊಂಡಿವೆ.
ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಕುಸಿದಿದ್ದು ರಾಜಾಪೂರ ಬ್ಯಾರೇಜ್ದಿಂದ ಕೃಷ್ಣಾ ನದಿಗೆ 77,625 ಕ್ಯೂಸೆಕ್ ಮತ್ತು ದೂಧಗಂಗಾ ನದಿಗೆ 22,592 ಕ್ಯೂಸೆಕ್ ಹೀಗೆ ಒಟ್ಟು 98,217 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಸೋಮವಾರಕ್ಕಿಂತ 4,361 ಕ್ಯೂಸೆಕ್ ನೀರು ಕಡಿಮೆಯಾಗಿದ್ದರಿಂದ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಸಂಭವನೀಯ ಪ್ರವಾಹ ಆತಂಕ ಕಡಿಮೆಯಾಗಿದೆ.
ವೇದಗಂಗಾ ನದಿಯ ಒಳಹರಿವು ಕಡಿಮೆಯಾಗಿದ್ದರಿಂದ ಭೋಜ-ಹುನ್ನರಗಿ, ಕಾರದಗಾ-ಭೋಜ, ಸಿದ್ನಾಳ-ಅಕ್ಕೋಳ, ಜತ್ರಾಟ-ಭಿವಸಿ, ಭೋಜವಾಡಿ-ಕುನ್ನೂರ ಈ 4 ಬಾಂದಾರಗಳು ಸಂಚಾರಕ್ಕೆ ಮುಕ್ತಗೊಂಡಿದ್ದು, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕೃಷ್ಣಾ ನದಿಯ ಕಲ್ಲೋಳ-ಯಡೂರ ಬಾಂದಾರ ಇನ್ನೂ ಮುಳುಗಡೆಯಾಗಿ ಸಂಚಾರ ಸ್ಥಗಿತ ಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಬಹುತೇಕ ಎಲ್ಲ ಬ್ಯಾರೇಜ್ಗಳು ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…