ಐಸಿಸಿ ವಿಶ್ವಕಪ್‌ ಟೆಸ್ಟ್‌ ಚಾಂಪಿಯನ್‌ಶಿಪ್‌ ನಲ್ಲಿ ಚಾಂಪಿಯನ್ ಆದ ನ್ಯೂಜಿಲ್ಯಾಂಡ್‌


Team Udayavani, Jun 23, 2021, 11:15 PM IST

ಟೆಸ್ಟ್ ಚಾಂಪಿಯನ್ ಆದ ನ್ಯೂಜಿಲ್ಯಾಂಡ್‌

ಸೌತಾಂಪ್ಟನ್‌: ಕೊನೆಗೂ ಮೂರನೇ ಪ್ರಯತ್ನದಲ್ಲಿ ನ್ಯೂಜಿಲ್ಯಾಂಡ್‌ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಕೇನ್‌ ವಿಲಿಯಮ್ಸನ್‌ ಪಡೆ ಭಾರತವನ್ನು 8 ವಿಕೆಟ್‌ಗಳಿಂದ ಮಣಿಸಿ ಚೊಚ್ಚಲ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ ಕಿರೀಟ ಏರಿಸಿಕೊಂಡು ಮೆರೆದಿದೆ. ಸಾಂಪ್ರದಾಯಿಕ ಕ್ರಿಕೆಟಿನ ಮೊದಲ ಸಾಮ್ರಾಟನೆನಿಸಿದೆ.

ಮೀಸಲು ದಿನಕ್ಕೆ ವಿಸ್ತರಿಸಲ್ಪಟ್ಟ ಫೈನಲ್‌ ಹಣಾಹಣಿಯಲ್ಲಿ ಭಾರತದ ದ್ವಿತೀಯ ಇನ್ನಿಂಗ್ಸ್‌ ಪತನ ಎನ್ನುವುದು ಸ್ಪಷ್ಟ ಫಲಿತಾಂಶಕ್ಕೆ ರಹದಾರಿ ಒದಗಿಸಿತು. ಇಲ್ಲವಾದರೆ ಎರಡೂ ತಂಡಗಳು ಒಟ್ಟಿಗೇ ಕಪ್‌ ಗೌರವ ಸಂಪಾದಿಸಬಹುದಿತ್ತು. ಆರನೇ ದಿನದ ಶುಭ್ರ ಹಾಗೂ ಸ್ವತ್ಛಂದ ವಾತಾವರಣದಲ್ಲಿ 139 ರನ್ನುಗಳ ಗುರಿ ಪಡೆದ ನ್ಯೂಜಿಲ್ಯಾಂಡ್‌ 2 ವಿಕೆಟಿಗೆ 140 ರನ್‌ ಬಾರಿಸಿ ನೂತನ ಇತಿಹಾಸ ನಿರ್ಮಿಸಿತು. ಆಗ ವಿಲಿಯಮ್ಸನ್‌ 52 ಮತ್ತು ಟೇಲರ್‌ 47 ರನ್‌ ಮಾಡಿ ಅಜೇಯರಾಗಿದ್ದರು.

 ಕೊಹ್ಲಿ, ಪೂಜಾರ ಫೇಲ್‌ :

ಬುಧವಾರದ ಮೊದಲ ಅವಧಿಯ ಆಟ ಕೈಲ್‌ ಜಾಮೀಸನ್‌ಗೆ ಮೀಸಲಾಯಿತು. ಕಿವೀಸ್‌ ವೇಗಿ ಎರಡು ದೊಡ್ಡ ಬೇಟೆಯ ಮೂಲಕ ಭಾರತದ ಮೇಲೆ ಒತ್ತಡ ಹೇರಿದರು. ನಾಯಕ ವಿರಾಟ್‌ ಕೊಹ್ಲಿ ಮತ್ತು ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ್‌ ಪೂಜಾರ ಅವರನ್ನು “ಜಾಮಿ’ ಸತತ ಓವರ್‌ಗಳಲ್ಲಿ, ಒಂದೇ ರನ್‌ ಅಂತರದಲ್ಲಿ ಪೆವಿಲಿಯನ್ನಿಗೆ ಅಟ್ಟಿದರು. 2ಕ್ಕೆ 64ರಲ್ಲಿದ್ದ ಭಾರತ 72ಕ್ಕೆ ತಲಪುವಷ್ಟರಲ್ಲಿ 4 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಟಕ್ಕೆ ಸಿಲುಕಿತು.

ಕೊಹ್ಲಿ ಗಳಿಕೆ ಕೇವಲ 13 ರನ್‌. ಎರಡೂ ಇನ್ನಿಂಗ್ಸ್‌ಗಳಲ್ಲಿ ಇವರ ವಿಕೆಟ್‌ ಜಾಮೀಸನ್‌ ಪಾಲಾಯಿತು. ಅಂತಿಮ ದಿನ ಕ್ರೀಸಿಗೆ ಬರುವ ಮುನ್ನ ಕೀಪರ್‌ ವಾಟಿÉಂಗ್‌ಗೆ ಶೇಕ್‌ಹ್ಯಾಂಡ್‌ ಮಾಡಿದ್ದ ಕೊಹ್ಲಿ, ತಮ್ಮ ಕ್ಯಾಚನ್ನೂ ವಾಟಿÉಂಗ್‌ಗೇ ನೀಡಿ ವಾಪಸಾದರು. 29 ಎಸೆತ ಎದುರಿಸಿದ ಕೊಹ್ಲಿ ಒಂದೂ ಬೌಂಡರಿ ಶಾಟ್‌ ಬಾರಿಸಲಿಲ್ಲ. ಪೂಜಾರ 80 ಎಸೆತ ನಿಭಾಯಿಸಿದರೂ ಮತ್ತೆ ನಿಧಾನ ಗತಿಯ ಬ್ಯಾಟಿಂಗ್‌ಗೆ ಮೊರೆಹೋದರು. 15 ರನ್ನಿಗೆ 80 ಎಸೆತ ವ್ಯಯಿಸಿದರು. ಹೊಡೆದದ್ದು 2 ಫೋರ್‌.

ಉಪನಾಯಕ ಅಜಿಂಕ್ಯ ರಹಾನೆ ಕೂಡ ರಕ್ಷಣೆಗೆ ನಿಲ್ಲುವಲ್ಲಿ ವಿಫ‌ಲರಾದರು. 40 ಎಸೆತಗಳಿಂದ 15 ರನ್‌ ಮಾಡಿದ ಅವರು ಬೌಲ್ಟ್ ಬಲೆಗೆ ಬಿದ್ದರು. ಆಗ ಭರ್ತಿ 50 ಓವರ್‌ಗಳ ಆಟ ಮುಗಿದಿತ್ತು; ಸ್ಕೋರ್‌ 109 ರನ್‌ ಆಗಿತ್ತು. ಲಂಚ್‌ ವೇಳೆ ಭಾರತ 130ಕ್ಕೆ 5 ವಿಕೆಟ್‌ ಕಳೆದುಕೊಂಡು ಅಪಾಯದ ಸುಳಿಗೆ ಸಿಲುಕಿತ್ತು.

ಆಲ್‌ರೌಂಡರ್‌ ರಿಷಭ್‌ ಪಂತ್‌ ಮತ್ತು ಆಲ್‌ರೌಂಡರ್‌ ರವೀಂದ್ರ ಜಡೇಜ ಒಂದಿಷ್ಟು ಭರವಸೆ ಮೂಡಿಸಿದರು. ಭಾರತ ಕನಿಷ್ಠ 200 ರನ್ನುಗಳ ಗಡಿಯನ್ನಾದರೂ ತಲುಪೀತು ಎಂಬ ನಿರೀಕ್ಷೆ ಹುಟ್ಟುಹಾಕಿದರು. ಪಂತ್‌ ಎಂದಿನ ಬೀಸು ಹೊಡೆತಗಳಿಗೆ ಬದಲಾಗಿ ಕ್ರೀಸ್‌ ಆಕ್ರಮಿಸಿಕೊಳ್ಳುವ ಯೋಜನೆ ಹಾಕಿಕೊಂಡಿದ್ದರು. ಇದರಲ್ಲಿ ಬಹುತೇಕ ಯಶಸ್ವಿಯೂ ಆದರು. 88 ಎಸೆತಗಳಿಂದ 41 ರನ್‌ (4 ಬೌಂಡರಿ) ಮಾಡಿದ ಪಂತ್‌ ಅವರೇ ಭಾರತದ ಟಾಪ್‌ ಸ್ಕೋರರ್‌ ಆಗಿದ್ದರು. ಇಂಥದೊಂದು ಮಹತ್ವದ ಪಂದ್ಯದಲ್ಲಿ ಭಾರತದ ಸರದಿಯಲ್ಲಿ ಒಂದೂ ಅರ್ಧ ಶತಕ ದಾಖಲಾಗದಿದ್ದುದೊಂದು ದುರಂತ.

ಸೌಥಿ 4, ಬೌಲ್ಟ್ 3, ಜಾಮೀಸನ್‌ 2 ಹಾಗೂ ವ್ಯಾಗ್ನರ್‌ ಒಂದು ವಿಕೆಟ್‌ ಕೆಡವಿದರು.

ಸಂಕ್ಷಿಪ್ತ ಸ್ಕೋರ್‌: ಭಾರತ-217 ಮತ್ತು 170. ನ್ಯೂಜಿಲ್ಯಾಂಡ್‌-249 ಮತ್ತು 2 ವಿಕೆಟಿಗೆ 140

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.