ಜಮ್ಮು-ಕಾಶ್ಮೀರ ಕುತೂಹಲಕ್ಕೆ ಇಂದು ತೆರೆ
Team Udayavani, Jun 24, 2021, 7:40 AM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನವೋ ಅಥವಾ ವಿಧಾನಸಭೆ ಚುನಾವಣೆ ನಡೆಸುವ ಸಲುವಾಗಿ ಕ್ಷೇತ್ರ ಪುನರ್ವಿಂಗಡಣೆ ಕುರಿತಂತೆ ಚರ್ಚೆಯೋ…!
ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದ 14 ರಾಜಕೀಯ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು, ಅದರಲ್ಲಿ ಈ ಕುತೂಹಲಕ್ಕೆ ತೆರೆ ಬೀಳಲಿದೆ.
ಗುಪRರ್ನಿಂದ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಮೂವರು, ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪ್ರಾದೇಶಿಕ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ 48 ಗಂಟೆಗಳ ಬಿಗಿ ಬಂದೋಬಸ್ತ್ ಜಾರಿಗೊಳಿಸಲಾಗಿದೆ. ಅಲ್ಲದೇ ಶುಕ್ರವಾರದ ವರೆಗೆ ಇಂಟರ್ನೆಟ್ ಸೌಲಭ್ಯಕ್ಕೆ ಕತ್ತರಿ ಹಾಕುವ ಸಾಧ್ಯತೆ ಇದೆ.
ಸಭೆಯ ಅಜೆಂಡಾ ಏನು? :
ಕೇಂದ್ರ ಸರಕಾರ ಇದುವರೆಗೆ ಸಭೆಯ ಅಜೆಂಡಾ ಏನು ಎಂಬ ಬಗ್ಗೆ ತುಟಿ ಬಿಚ್ಚಿಲ್ಲ. ಆದರೂ ಆಂಗ್ಲ ಮಾಧ್ಯಮಗಳಲ್ಲಿನ ವರದಿ ಪ್ರಕಾರ, ಈ ಸಭೆ ಕರೆದಿರುವುದು ಕ್ಷೇತ್ರ ಮರುವಿಂಗಡಣೆ ಬಗ್ಗೆ ಚರ್ಚಿಸುವ ಸಲುವಾಗಿ. ಇನ್ನೂ ಕೆಲವು ಮಾಧ್ಯಮಗಳು, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಸಲುವಾಗಿ ಈ ಸಭೆ ಕರೆಯಲಾಗಿದೆ ಎಂದು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ