ಜಾರಕಿಹೊಳಿ ಸಿಡಿ ಪ್ರಕರಣ: ಯುವತಿಗೆ ಬಂಧನ ಭೀತಿ
Team Udayavani, Jun 24, 2021, 8:55 AM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ತನ್ನನ್ನು ಬಂಧಿಸದಂತೆ ಎಸ್ಐಟಿಗೆ ನಿರ್ದೇಶಿಸಬೇಕೆಂಬ ಸಂತ್ರಸ್ತ ಯುವತಿಯ ಮನವಿಯನ್ನು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಅವರು ಸದಾಶಿವನಗರ ಪೊಲೀಸ್ ಠಾಣೆಗೆ ದಾಖಲಿಸಿರುವ ದೂರು ರದ್ದುಪಡಿಸುವಂತೆ ಕೋರಿ ಯುವತಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಇದನ್ನೂ ಓದಿ:ಡೆಲ್ಟಾ ಮತ್ತು ಡೆಲ್ಟಾ ಪ್ಲಸ್: ವ್ಯತ್ಯಾಸವೇನು? ಯಾವುದು ಹೆಚ್ಚು ಅಪಾಯಕಾರಿ?
ಈ ವೇಳೆ ಯುವತಿ ಪರ ವಕೀಲ ಸಂಕೇತ್ ಏಣಗಿ ವಾದ ಮಂಡಿಸಿ, ಅತ್ಯಾಚಾರ ಆರೋಪ ಸಂಬಂಧ ಯುವತಿ ದಾಖಲಿಸಿದ ದೂರಿನ ಸಂಬಂಧ ಆರೋಪಿ ರಮೇಶ್ ಜಾರಕಿಹೊಳಿ ಅವರನ್ನು ತನಿಖಾಧಿಕಾರಿಗಳು ಬಂಧಿಸಿಲ್ಲ. ಆದರೆ, ರಮೇಶ್ ಜಾರಕಿಹೊಳಿ ದಾಖಲಿಸಿರುವ ದೂರಿನ ಸಂಬಂಧ ಯುವತಿ ಬಂಧಿಸುವ ಸಾಧ್ಯತೆಯಿದೆ. ಹೀಗಾಗಿ ಆಕೆಗೆಬಂಧನ ಭೀತಿಯಿದ್ದು, ಅರ್ಜಿದಾರ ಯುವತಿಯನ್ನು ಬಂಧಿಸದಂತೆ ತನಿಖಾಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ರಮೇಶ್ ಜಾರಕಿಹೊಳಿ ದಾಖಲಿಸಿರುವ ದೂರನ್ನು ರದ್ದುಪಡಿಸಲು ಕೋರಿ ಸಿಆರ್ಪಿಸಿ 482 ಅಡಿ ಸಲ್ಲಿಸಿದ ಅರ್ಜಿ ಇದಾಗಿದೆ. ಹಾಗಾಗಿ, ಅರ್ಜಿದಾರಳನ್ನು ಬಂಧಿಸದಂತೆ ಈ ಅರ್ಜಿಯಲ್ಲಿ ಸೂಚಿಸಲಾಗುವುದಿಲ್ಲ. ಅಗತ್ಯವಿದ್ದರೆ ನಿರೀಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ