ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹಾರಿದ ತಾಯಿ: ಮೂವರು ಸಾವು
Team Udayavani, Jun 24, 2021, 2:09 PM IST
ತುಮಕೂರು: ತೋಟದಲ್ಲಿದ್ದ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಮಕ್ಕಳನ್ನು ರಕ್ಷಿಸಲೂ ಬಾವಿಗೆ ಹಾರಿದ ತಾಯಿಯೂ ಮೃತಪಟ್ಟಿರುವ ಘಟನೆ ಗುರುವಾರ ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ತಾಲೂಕಿನ ಕೋರಾ ಠಾಣೆ ವ್ಯಾಪ್ತಿಯ ತಿರುಮಲ ಪಾಳ್ಯದ ಬಳಿ ಇರುವ ತೋಟದಲ್ಲಿ ತೆರೆದ ಬಾವಿಗೆ ಬಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ
ಹೇಮಲತಾ ಅವರು ತೋಟದ ಕೆಲಸಕ್ಕೆ ಬೆಳಿಗ್ಗೆ ಮಕ್ಕಳೊಡನೆ ಬಂದಿದ್ದರು. ಅಲ್ಲಿಯೇ ಸೀಬೆ ಗಿಡದ ಬಳಿ ಆಟ ಆಡುತ್ತಿದ್ದ ಮೂರು ವರ್ಷದ ಮಗಳು ಪೂರ್ವಿಕಾ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದಿದ್ದಾಳೆ. ಇದನ್ನು ಕಂಡು ಮತ್ತೊಬ್ಬಳು ಮಗಳು ಆರು ವರ್ಷದ ಮಾನಸ ಸಹ ಬಾವಿಗೆ ಬಿದ್ದಿದ್ದಾಳೆ. ಇಬ್ಬರು ಮಕ್ಕಳು ಬಾವಿಗೆ ಬಿದ್ದಿದ್ದನ್ನು ಕಂಡು ತಾಯಿ ಹೇಮಲತಾ 38 ಸಹ ಮಕ್ಕಳನ್ನು ರಕ್ಷಿಸಲು ಬಾವಿಗೆ ಹಾರಿದ್ದು, ಬಾವಿಯಿಂದ ಮೂವರು ಹೊರಬರಲಾಗದೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್, ಶಹಾಪುರವಾಡ್ ಡಿವೈಎಸ್ಪಿ ಸಿಪಿಐ ಎಚ್.ಶ್ರೀನಿವಾಸ್ ಕೋರಾ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ