ನೂತನ ಕಟ್ಟಡದೊಂದಿಗೆ ಧರ್ಮಸ್ಥಳ ಪೊಲೀಸ್‌ ಠಾಣೆ ಮೇಲ್ದರ್ಜೆಗೆ


Team Udayavani, Jun 25, 2021, 5:00 AM IST

ನೂತನ ಕಟ್ಟಡದೊಂದಿಗೆ ಧರ್ಮಸ್ಥಳ ಪೊಲೀಸ್‌ ಠಾಣೆ ಮೇಲ್ದರ್ಜೆಗೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್‌ ಠಾಣೆಯ ನೂತನ ಕಚೇರಿ ನಿರ್ಮಾಣಕ್ಕೆ ಸರಕಾರ 2.18 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಿದೆ. ಪೊಲೀಸ್‌ ಹೌಸಿಂಗ್‌ ಕಾರ್ಪೋರೇಶನ್‌ ವಿಭಾಗದಿಂದ ಧರ್ಮಸ್ಥಳದ ಸರ್ವೇ ನಂ.159/1ಎ1 ರಲ್ಲಿ 85 ಸೆಂಟ್ಸ್‌ನಲ್ಲಿ ನೂತನ ಪೊಲೀಸ್‌ ಠಾಣೆ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಸದಾ ಭಕ್ತರಿಂದ ಗಿಜಿಗುಡುವ ಯಾತ್ರಾಸ್ಥಳ. ವರ್ಷಂಪ್ರತಿ ಭಕ್ತರನ್ನು ಆಕರ್ಷಿಸುತ್ತದೆ. ಹೀಗಾಗಿ ಭವಿಷ್ಯದಲ್ಲಿ ಧರ್ಮಸ್ಥಳದಲ್ಲಿ ಪೊಲೀಸ್‌ ವೃತ್ತ ಠಾಣೆ ನಿರ್ಮಿಸುವ ಸನ್ನಿವೇಶ ಎದುರಾದಲ್ಲಿ ಪೂರಕ ವಾತಾವರಣ ಕಲ್ಪಿಸುವಲ್ಲಿ ಮುಂದಾಲೋಚನೆಯಡಿ ಕಟ್ಟಡ ಸಿದ್ಧಗೊಳ್ಳಲಿದೆ.

ಸುಸಜ್ಜಿತ ನೂತನ ಠಾಣೆ:

81 ಗ್ರಾಮವನ್ನು ಹೊಂದಿರುವ ಬೆಳ್ತಂಗಡಿ ತಾಲೂಕಿನಲ್ಲಿ ಬೆಳ್ತಂಗಡಿ ವೃತ್ತಕ್ಕೆ ಸಂಬಂಧಿಸಿದಂತೆ ವೇಣೂರು, ಪೂಂಜಾಲಕಟ್ಟೆ, ಧರ್ಮಸ್ಥಳ ಠಾಣೆಗಳಿವೆ. ಧರ್ಮಸ್ಥಳದಲ್ಲಿ ಪ್ರಸಕ್ತ ತಾ.ಪಂ. ಕಟ್ಟಡದಲ್ಲಿ ಠಾಣೆ ಇದೆ. ಹೀಗಾಗಿ ಹೌಸಿಂಗ್‌ ಕಾರ್ಪೋರೇಶನ್‌ ವಿಭಾಗದಿಂದ ಕಟ್ಟಡ ನಿರ್ಮಾಣಗೊಳ್ಳಲಿದೆ. 2 ಮಹಡಿ ಹೊಂದಿರಲಿದ್ದು, 4,035 ಚದರ ಅಡಿ ವಿಸ್ತೀರ್ಣ ಇರಲಿದೆ. ಕೆಳ ಅಂತಸ್ತು 2905.2 ಹಾಗೂ ಮೇಲಿನ ಅಂತಸ್ತು 1129.8 ಚದರ ಅಡಿ ವಿಸ್ತೀರ್ಣದ 3ಡಿ ನೀಲನಕಾಶೆ ಹಂತದಲ್ಲಿದೆ.

ಹೆಚ್ಚುವರಿ ಬೇಡಿಕೆ:

ಹೆಚ್ಚುವರಿ ಸಿಬಂದಿ ನೇಮಕವಾದಲ್ಲಿ ಕರ್ತವ್ಯ ನಿರ್ವಹಿಸಲು ಅನು ಕೂಲವಾ ಗುವಂತೆ ವಸತಿಗೃಹದ ಆವಶ್ಯಕತೆ ಇದ್ದು, ಸರಕಾರ ಮಂಜೂರುಗೊಳಿಸಬೇಕಾಗಿದೆ. ಅದಕ್ಕೆ ಬೇಕಾದಂತಹ ನಿವೇಶನ ನೇತ್ರಾವತಿ ಸ್ನಾನಘಟ್ಟದ ಬಳಿ 2 ಎಕ್ರೆ ಮಂಜೂ ರಾಗಿದ್ದು, 1 ಎಕ್ರೆ ಜಮೀನು ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.

ಡಾ| ಹೆಗ್ಗಡೆ ಮನವಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು 2016ರಲ್ಲಿ ಧರ್ಮಸ್ಥಳದಲ್ಲಿ ಪೊಲೀಸ್‌ ಠಾಣೆ ತೆರೆಯುವಂತೆ ಆಗಿನ ಗೃಹ ಸಚಿವ ಡಾ| ಜಿ.ಪರಮೇಶ್ವರ್‌ ಹಾಗೂ ಸರಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಯ ಮೇರೆಗೆ ಗ್ರಾಮ ಪಂಚಾಯತ್‌ ಕಟ್ಟಡದಲ್ಲಿ ಪೊಲೀಸ್‌ ಠಾಣೆ ಆರಂಭಿಸಲಾಗಿತ್ತು. ಇದೀಗ ಶಾಸಕ ಹರೀಶ್‌ ಪೂಂಜ ಅವರ ಮುತುವರ್ಜಿಯಿಂದ ನೂತನ ಕಟ್ಟಡಕ್ಕೆ 2.18 ಕೋಟಿ ರೂ. ಅನುದಾನ ಬಿಡುಗಡೆಗೊಂಡು ನೂತನ ಕಟ್ಟಡ ಭಾಗ್ಯ ಒದಗಿಬಂದಿದೆ. ಪ್ರಮುಖ ಕ್ಷೇತ್ರಗಳನ್ನು ಸಂಪರ್ಕಿಸುವ ಕೊಕ್ಕಡದಲ್ಲಿ ಪೊಲೀಸ್‌ ಹೊರಠಾಣೆ ನಿರ್ಮಿಸಬೇಕು ಎಂಬ ಬೇಡಿಕೆ ಇದ್ದು ಅಲ್ಲಿಯೂ 10 ಸೆಂಟ್ಸ್‌  ಜಾಗ ಮೀಸಲಿಡಲಾಗಿದೆ.

ಪೊಲೀಸ್‌ ಸ್ಟೇಷನ್‌ಗೆ ಸಿಬಂದಿ : ಧರ್ಮಸ್ಥಳ ಪೊಲೀಸ್‌ ಠಾಣೆಗೆ ಎಸ್‌ಐ ಸಹಿತ 37 ಸಿಬಂದಿ ಹುದ್ದೆ ಮಂಜೂರಾಗಿದ್ದು 34 ಸಿಬಂದಿ ಕರ್ತವ್ಯದಲ್ಲಿದ್ದಾರೆ. ದೂರದೃಷ್ಟಿ ಚಿಂತನೆಯೊಂದಿಗೆ ಗ್ರೇಡ್‌ 4 ಪೊಲೀಸ್‌ ಠಾಣೆಯಾದಲ್ಲಿ ಅದಕ್ಕೆ ಬೇಕಾದ ಕೊಠಡಿಗಳನ್ನು ಈಗಲೇ ಸಿದ್ಧಪಡಿಸಲಾಗುತ್ತಿದ್ದು, ವೃತ್ತ ನಿರೀಕ್ಷಕರು, ಉಪನಿರೀಕ್ಷಕ 1, ಉಪನಿರೀಕ್ಷಕರ-2(ಕ್ರೈಂ ಹಾಗೂ ಸಿವಿಲ್‌  ವಿಭಾಗ) ಈ ರೀತಿ ಠಾಣೆಯೂ ಮೇಲ್ದರ್ಜೆಗೆ ಏರುವ ನಿಟ್ಟಿನಲ್ಲಿ ಸಂಪೂರ್ಣ ವ್ಯವಸ್ಥೆ ಒಳಗೊಳ್ಳಲಿದೆ.

 

 -ವಿಶೇಷ ವರದಿ

 

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.