“ಸೇತುಬಂಧ’ದಲ್ಲೂ ಮಾರ್ಪಾಡಿಗೆ ಸಿದ್ಧತೆ


Team Udayavani, Jun 25, 2021, 6:10 AM IST

“ಸೇತುಬಂಧ’ದಲ್ಲೂ ಮಾರ್ಪಾಡಿಗೆ ಸಿದ್ಧತೆ

ಸಾಂದರ್ಭಿಕ ಚಿತ್ರ

ದಾವಣಗೆರೆ: ಕೋವಿಡ್‌ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಸರಕಾರಿ ಪ್ರಾಥಮಿಕ ಶಾಲೆ ಗಳ ಸೇತುಬಂಧ (ಬ್ರಿಡ್ಜ್ ಕೋರ್ಸ್‌) ಕಲಿಕಾ ಪದ್ಧತಿಯಲ್ಲೇ ಮಾರ್ಪಾಡು ತಂದು ಮಕ್ಕಳ ಸ್ವಕಲಿಕೆಗೆ ಉತ್ತೇಜನ ನೀಡಲು ಮುಂದಾಗಿದ್ದು,  ಹೊಸ ವಿನ್ಯಾಸದ ಕ್ಯೂಆರ್‌ ಕೋಡ್‌ ಇರುವ ಅಭ್ಯಾಸ ಮತ್ತು ಚಟುವಟಿಕೆ ಹಾಳೆ ಸಿದ್ಧವಾಗಿದೆ.

60 ದಿನಗಳ ನಲಿ-ಕಲಿ ಸೇತುಬಂಧ ಕಲಿಕಾ ಮಾದರಿಗೆ ಪೂರಕವಾಗಿ ವಿಷಯವಾರು, ತರಗತಿ ವಾರು ಅಗತ್ಯವಿರುವ ಸ್ವಕಲಿಕಾ ಆಧಾರಿತ ಚಟು ವಟಿಕೆ ಮತ್ತು ಅಭ್ಯಾಸದ ಹಾಳೆಗಳನ್ನು  ರಾಜ್ಯ ನಲಿ-ಕಲಿ ಸಂಪನ್ಮೂಲ ವ್ಯಕ್ತಿಗಳ ನೆರವಿನೊಂದಿಗೆ ವಿನ್ಯಾಸಗೊಳಿಸಲಾಗಿದೆ.

ಅಭ್ಯಾಸ ಮತ್ತು ಚಟುವಟಿಕೆಯ ಈ ಹೊಸ ವಿನ್ಯಾಸದ ಕೆಲವು ಹಾಳೆಗಳಲ್ಲಿ ಕ್ಯೂಆರ್‌ ಕೋಡ್‌ ಅಳವಡಿಸಿರುವುದು ವಿಶೇಷ. ವೀಡಿಯೋ ಮತ್ತು ಆಡಿಯೋಗಳನ್ನು ಬಳಸಿ ಮಕ್ಕಳು ಹೆಚ್ಚಿನ ಕಲಿಕಾ ಅನುಭವ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜತೆಗೆ ರೇಡಿಯೋ, ದೂರದರ್ಶನ ಪಾಠ ಪ್ರಸಾರದ ಬಳಕೆಗೂ ಇದು ನೆರವಾಗಲಿದೆ.

ಅಭ್ಯಾಸ ಹಾಳೆ ಬಳಕೆ ಕಡ್ಡಾಯ:

ಅಭ್ಯಾಸ ಹಾಳೆಗಳಲ್ಲಿರುವ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಬಗ್ಗೆ ಪೋಷಕರಿಗೆ ಅಥವಾ ಮಕ್ಕಳ ಮನೆಯಲ್ಲಿರುವವರಿಗೆ ಆನ್‌ಲೈನ್‌ ಇಲ್ಲವೇ ದೂರವಾಣಿ ಮೂಲಕ ಮಾರ್ಗದರ್ಶನ ನೀಡಲು ಇಲಾಖೆ ಯೋಜನೆ ಹಾಕಿಕೊಂಡಿದೆ. ಈ ಹಾಳೆಗಳನ್ನು ಸೇತುಬಂಧ ಮಾದರಿಯೊಂದಿಗೆ ಎಲ್ಲ ಶಾಲೆಗಳ ಶಿಕ್ಷಕರಿಗೆ ತಲುಪಿಸಲಿದೆ. ಪ್ರತಿ ಮಗುವೂ ವಿನ್ಯಾಸಗೊಳಿಸಿದ ಅಭ್ಯಾಸದ ಹಾಳೆಗಳನ್ನು (ವರ್ಕ್‌ ಶೀಟ್‌) ಬಳಸುವುದನ್ನು ಕಡ್ಡಾಯ ಮಾಡಲಾಗಿದೆ.

ಸೇತುಬಂಧ ಕಲಿಕೆಗೆ ಸಂಬಂಧಿಸಿ ಮೌಲ್ಯಮಾಪನಕ್ಕೆ ಕಲಿಕಾ ಅಭ್ಯಾಸದ ಹಾಳೆಗಳನ್ನೇ ಬಳಸಲು ಶಿಕ್ಷಕರಿಗೆ ಸೂಚಿಸಲಾಗಿದೆ. ಅಭ್ಯಾಸ ಪೂರ್ಣಗೊಳಿಸಿದ ಹಾಳೆ ಗಳನ್ನು ಮಕ್ಕಳಿಂದ ನೇರವಾಗಿ ಇಲ್ಲವೇ ಆನ್‌ಲೈನ್‌ ಮೂಲಕ ಮರಳಿ ಪಡೆದು ಕಲಿಕೆಯ ಸಾಧನೆಯನ್ನು ಮೌಲ್ಯಮಾಪನಕ್ಕೆ ಒಳಪಡಿಸಬೇಕು. ಪೂರ್ಣ ಸರಿ ಉತ್ತರ ಇದ್ದರೆ  “ಎ’ ಎಂದೂ, ತಪ್ಪಾದ ಉತ್ತರ ಇದ್ದರೆ   “ಬಿ’ ಎಂದೂ ಶ್ರೇಣಿಗಳನ್ನು ನೀಡಬೇಕು.   “ಬಿ’ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಸೂಕ್ತ ಹಿಮ್ಮಾಹಿತಿ ನೀಡುವ ಮೂಲಕ ಪೂರಕ ಚಟುವಟಿಕೆ ಮಾಡಿಸಿ ಕಲಿಕಾ ಕೊರತೆ ನೀಗಿಸಬೇಕು.  ಈ  ಹಾಳೆಗಳನ್ನು ಮಕ್ಕಳ ಪೋರ್ಟ್‌ ಪೋಲಿಯೋದಲ್ಲಿ ಇಟ್ಟುಕೊಳ್ಳಬೇಕು. ಸೇತುಬಂಧ ಕಲಿಕೆಗೆ ನಿರ್ದಿಷ್ಟಪಡಿಸಿದ ಕಲಿಕಾ ದಿನಗಳು ಪೂರ್ಣ ಗೊಂಡ ಬಳಿಕವೇ ಪ್ರತಿ ಮಗು ತರಗತಿವಾರು ಪ್ರಸಕ್ತ ಸಾಲಿನ ಕಲಿಕೆಗೆ ಪ್ರವೇಶ ಪಡೆದುಕೊಳ್ಳಬೇಕು.

ಶಿಕ್ಷಕರಿಗೆ ತರಬೇತಿ :

ಅಭ್ಯಾಸ ಹಾಳೆಗಳ ಬಳಕೆ ಸಂದರ್ಭದಲ್ಲಿ ಮಕ್ಕಳ ಕಲಿಕೆಗೆ ನೆರವು ನೀಡಲು ಅಗತ್ಯವಿರುವ ಸೂಚನೆ, ಮಾರ್ಗದರ್ಶನಗಳನ್ನು  ಪೋಷಕ ರಿಗೂ ಸ್ಪಷ್ಟಪಡಿಸಬೇಕು. ಈ  ಹಾಳೆಗಳನ್ನು ಮಕ್ಕಳಿಗೆ ನೀಡಿರುವ ಮತ್ತು ಹಿಂಪಡೆದಿರುವ ಬಗ್ಗೆ ಸೂಕ್ತ ದಾಖಲೆಯನ್ನು ಶಿಕ್ಷಕರು ನಿರ್ವಹಿ ಸಬೇಕು.  ಹಾಳೆಗಳ ಬಳಕೆ ಬಗ್ಗೆ ಶಿಕ್ಷಕರಿಗೆ ಕ್ಲಸ್ಟರ್‌ ಹಂತದಲ್ಲಿ ಗೂಗಲ್‌, ಝೂಮ್‌, ವೀಡಿಯೊ ಮಾಧ್ಯಮ ಆಧಾರಿತ ಸಭೆಗಳ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ.

ಆನ್‌ಲೈನ್‌ ಮತ್ತು ಆಫ್‌ಲೈನ್‌ ಮಾದರಿಯಲ್ಲಿ ಸಮಗ್ರ ಶಿಕ್ಷಣ ವತಿ ಯಿಂದ ಹೊಸದಾಗಿ ಅಭ್ಯಾಸ ಮತ್ತು ಚಟುವಟಿ ಕೆಯ ಹಾಳೆಗಳನ್ನು ವಿನ್ಯಾಸಗೊಳಿಸಲಾಗಿದೆ. ಈ ಹಾಳೆಗಳು ಸೇತುಬಂಧ ಹೊಸ ಕಲಿಕಾ ಮಾದರಿಯೊಂದಿಗೆ ಬರಲಿದೆ. ಇದರ ಬಳಕೆ ಕುರಿತು ಈಗಾಗಲೇ ಶಿಕ್ಷಕರಿಗೆ ಆನ್‌ಲೈನ್‌ ಮೂಲಕ ತರಬೇತಿ ನೀಡಲಾಗುತ್ತಿದೆ.– ಎಚ್‌.ಕೆ. ಲಿಂಗರಾಜು,ಪ್ರಾಚಾರ್ಯರು, ಡಯಟ್‌, ದಾವಣಗೆರೆ

 

-ಎಚ್‌.ಕೆ.ನಟರಾಜ

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.