ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ ಸುತ್ತೂರು ಮಠಕ್ಕೆ ಪ್ರಯಾಣ
Team Udayavani, Jun 25, 2021, 11:39 AM IST
ಬೆಳಗಾವಿ/ಗೋಕಾಕ: ಬಿಜೆಪಿ ಶಾಸಕ, ಗೋಕಾಕನ ಪ್ರಭಾವಿ ರಾಜಕಾರಣಿ ರಮೇಶ್ ಜಾರಕಿಹೊಳಿ ಅವರು ತಮ್ಮ ಸಹೋದರ ಲಖನ್ ಜಾರಕಿಹೊಳಿ ಹಾಗೂ ಅಳಿಯ ಅಂಬಿರಾವ್ ಪಾಟೀಲ ಅವರೊಂದಿಗೆ ಶುಕ್ರವಾರ ಬೆಳಗ್ಗೆ ಮೈಸೂರಿಗೆ ಪ್ರಯಾಣ ಬೆಳೆಸಿದರು.
ಲಖನ್ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿದ ರಮೇಶ ಅವರು ಅವರನ್ನು ಕರೆದುಕೊಂಡು ನೇರವಾಗಿ ಬೆಳಗಾವಿಗೆ ಬಂದರು. ವಿಮಾನ ನಿಲ್ದಾಣದಿಂದ ನೇರವಾಗಿ ಮೈಸೂರಿನ ಸುತ್ತೂರು ಮಠಕ್ಕೆ ತೆರಳಿದರು.
ಇದನ್ನೂ ಓದಿ:ಇಂದು ಸುತ್ತೂರು ಮಠದಲ್ಲಿ ಜಾರಕಿಹೊಳಿ ರಾಜೀನಾಮೆ ಘೋಷಣೆ?
ಸುತ್ತೂರು ದೇಶಿ ಕೇಂದ್ರ ಮಠದ ಸ್ವಾಮೀಜಿ ಅವರ ಜೊತೆ ಸುದೀರ್ಘ ಚರ್ಚೆ ನಡಿಸಿ ಆಶೀರ್ವಾದ ಪಡೆದುಕೊಳ್ಳಲಿದ್ದಾರೆ. ಮಠದಲ್ಲಿಯೇ ತಮ್ಮ ಮುಂದಿನ ರಾಜಕೀಯ ಹೆಜ್ಜೆ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ರಮೇಶ್ ಅವರ ಇಂದಿನ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.