ಕೊಡವೂರು ಕಲ್ಮತ್ ಮಸೀದಿಗೆ ಮಂಜೂರು ಮಾಡಿದ ಸರ್ಕಾರಿ ಜಾಗ ಮರಳಿ ಸರ್ಕಾರದ ವಶಕ್ಕೆ
Team Udayavani, Jun 25, 2021, 3:08 PM IST
ಉಡುಪಿ: ಈ ಹಿಂದೆ ವಕ್ಫ್ ಬೋರ್ಡ್ ಮುಖೇನ ಕಲ್ಮತ್ ಮಸೀದಿ ಹೆಸರಿಗೆ ಮಂಜೂರು ಮಾಡಲಾಗಿದ್ದ ಸರ್ವೆ ನಂ 53/6 ರಲ್ಲಿ 0.67 ಸೆಂಟ್ಸ್ ಜಾಗವನ್ನು ಮರಳಿ ಸರ್ಕಾರದ ವಶಕ್ಕೆ ನೀಡಲಾಗಿದೆ.
ಮಸೀದಿಗೆ ಜಾಗ ಮಂಜೂರಾದ ಬಗ್ಗೆ ಸ್ಥಳೀಯವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕ ಕೆ ರಘುಪತಿ ಭಟ್ ಅವರು ಕಂದಾಯ ಸಚಿವರಾದ ಆರ್ ಅಶೋಕ್ ಅವರನ್ನು ಭೇಟಿಯಾಗಿ ಸ್ಥಳೀಯ ಸ್ಥಿತಿಗತಿಯನ್ನು ಮನವರಿಕೆ ಮಾಡಿ ಈ ಜಾಗವನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಲಾಗಿದ್ದು, ಅದನ್ನು ಮರಳಿ ಸರಕಾರದ ವಶಕ್ಕೆ ಪಡೆಯುವಂತೆ ಮನವಿ ಮಾಡಿದ್ದರು.
ಅದರಂತೆ ಕಂದಾಯ ಸಚಿವರ ಸೂಚನೆ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯವರು ಸ್ಥಳೀಯ ಸ್ಥಿತಿಗತಿಗಳ ವರದಿಯನ್ನು ಸಲ್ಲಿಸಿರುವಂತೆ ಈ ಜಾಗವನ್ನು ಮರಳಿ ಸರಕಾರದ ವಶಕ್ಕೆ ಪಡೆದು ಜೂ 22ರಂದು ಸರ್ಕಾರದ ಹೆಸರಿಗೆ ಅಧಿಸೂಚನೆ ಹೊರಡಿಸಲಾಗಿದೆ.
2018 ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂದಿನ ಜಿಲ್ಲಾಧಿಕಾರಿಯವರು ಈ ಜಾಗವನ್ನು ವಕ್ಫ್ ಬೋರ್ಡ್ ಮುಖೇನ ಕಲ್ಮತ್ ಮಸೀದಿ ಇವರ ಹೆಸರಿಗೆ ಮಂಜೂರು ಮಾಡಲು ಶಿಫಾರಸ್ಸು ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್