ಟೆಸ್ಟ್‌ ಸರಣಿ : ಕೌಂಟಿ ವಿರುದ್ಧ ಭಾರತಕ್ಕೆ ಅಭ್ಯಾಸ ಪಂದ್ಯವಿಲ್ಲ


Team Udayavani, Jun 25, 2021, 11:43 PM IST

ಟೆಸ್ಟ್‌ ಸರಣಿ : ಕೌಂಟಿ ವಿರುದ್ಧ ಭಾರತಕ್ಕೆ ಅಭ್ಯಾಸ ಪಂದ್ಯವಿಲ್ಲ

ಲಂಡನ್‌ : ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಟೆಸ್ಟ್‌ ಸರಣಿಗೆ ಸಜ್ಜಾಗಬೇಕಿರುವ ಭಾರತ ತಂಡಕ್ಕೆ ಯಾವುದೇ ಕೌಂಟಿ ವಿರುದ್ಧ ಅಭ್ಯಾಸ ಪಂದ್ಯ ಲಭಿಸುವ ಸಾಧ್ಯತೆ ಇಲ್ಲ ಎಂದು ಇಸಿಬಿ ತಿಳಿಸಿದೆ. ಹೀಗಾಗಿ ತನ್ನದೇ ಆಟಗಾರರ ತಂಡಗಳನ್ನು ಕಟ್ಟಿ ಅಭ್ಯಾಸ ಪಂದ್ಯಗಳನ್ನು ಆಡುವುದು ಅನಿವಾರ್ಯವಾಗಿದೆ.

“ಕೋವಿಡ್‌ ನಿಯಮಾವಳಿಯಂತೆ ಪ್ರವಾಸಿ ಭಾರತಕ್ಕೆ ಕೌಂಟಿ ವಿರುದ್ಧ ಅಭ್ಯಾಸ ಪಂದ್ಯ ಆಡಲು ಸಾಧ್ಯವಾಗದು. ಹೀಗಾಗಿ ಮೊದಲ ಟೆಸ್ಟ್‌ ಪಂದ್ಯಕ್ಕೂ ಮುನ್ನ ಡರ್‌ಹಮ್‌ನ “ರಿವರ್‌ಸೈಡ್‌ ಗ್ರೌಂಡ್‌’ನಲ್ಲಿ ಭಾರತ ತನ್ನ ತಂಡಗಳ ನಡುವೆಯೇ ಚತುರ್ದಿನ ಪಂದ್ಯಗಳನ್ನು ಆಡಬೇಕಿದೆ’ ಎಂದು ಇಸಿಬಿ ತಿಳಿಸಿದೆ. ಭಾರತ ಒಟ್ಟು 24 ಆಟಗಾರರೊಂದಿಗೆ ಇಂಗ್ಲೆಂಡಿಗೆ ತೆರಳಲಿದೆ.

ಟೆಸ್ಟ್‌ ಸರಣಿಗೂ ಮುನ್ನ ಭಾರತ ತಂಡಕ್ಕೆ ಕೆಲವು ಅಭ್ಯಾಸ ಪಂದ್ಯಗಳನ್ನು ಆಯೋಜಿಸುವಂತೆ ಇಸಿಬಿಗೆ ಬಿಸಿಸಿಐ ಮನವಿ ಮಾಡಿತ್ತು. ಸುನೀಲ್‌ ಗಾವಸ್ಕರ್‌ ಮೊದ ಲಾದ ಮಾಜಿಗಳೂ ಇದರ ಪ್ರಸ್ತಾವ ಮಾಡಿದ್ದರು. ಆದರೆ ಇಂಗ್ಲೆಂಡಿನ ಕೌಂಟಿ ಆಟಗಾರರಿಗೆ ಜೈವಿಕ ಸುರಕ್ಷಾ ವ್ಯವಸ್ಥೆ ಕಲ್ಪಿಸುವುದು ಅಸಾಧ್ಯವಾಗಿರುವುದರಿಂದ ಅಭ್ಯಾಸ ಪಂದ್ಯ ಕೂಡ ಸಾಧ್ಯವಿಲ್ಲ ಎಂಬುದು ಇಸಿಬಿ ನಿಲುವು.

ಇದನ್ನೂ ಓದಿ :ವಿಂಬಲ್ಡನ್‌ ಡ್ರಾ : ಮೊದಲ ಸುತ್ತಿನಲ್ಲಿ ಜೊಕೋಗೆ ಸುಲಭ ಎದುರಾಳಿ

ಭಾರತದ ಐಸಿಸಿ ಟೆಸ್ಟ್‌ ವಿಶ್ವಕಪ್‌ ಫೈನಲ್‌ ಸೋಲಿಗೂ ಅಭ್ಯಾಸದ ಕೊರತೆಯೇ ಕಾರಣ ಎಂದು ವಿಶ್ಲೇಷಿ ಸಲಾಗುತ್ತದೆ. ಇಂಗ್ಲೆಂಡ್‌ನ‌ಂಥ ದೇಶಗಳಲ್ಲಿ ಅಲ್ಲಿನ ಟ್ರ್ಯಾಕ್‌ ಪರಿಚಯವಾಗದ ಹೊರತು ನೇರವಾಗಿ ಅಂತಾ ರಾಷ್ಟ್ರೀಯ ಪಂದ್ಯವಾಡಿದರೆ ಹಿನ್ನಡೆ ಕಟ್ಟಿಟ್ಟ ಬುತ್ತಿ ಎಂಬುದು ಸಾಬೀತಾಗಿದೆ.

ಆಯ್ಕೆಗಾರರ ಪ್ರಯಾಣವಿಲ್ಲ
ಟೆಸ್ಟ್‌ ಸರಣಿ ವೇಳೆ ಭಾರತದ ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್‌ ಶರ್ಮ ಮತ್ತು ಹಿರಿಯ ಆಯ್ಕೆಗಾರ ಸುನೀಲ್‌ ಜೋಶಿ ಅವರ ಇಂಗ್ಲೆಂಡ್‌ ಪ್ರಯಾಣದ ಯೋಜನೆ ರದ್ದುಗೊಂಡಿದೆ.

ಇಂಗ್ಲೆಂಡ್‌ನ‌ಲ್ಲಿ ಕಠಿನ ಕ್ವಾರಂಟೈನ್‌ ನಿಯಮ ಇರುವುದರಿಂದ ಹಾಗೂ “ಕೆಂಪು ಪಟ್ಟಿ ವಲಯ’ವಾದ ಭಾರತದಿಂದ ಯುನೈಟೆಡ್‌ ಕಿಂಗ್‌ಡಮ್‌ಗೆ ನೇರ ವಿಮಾನ ಸೌಕರ್ಯ ಇಲ್ಲದಿರುವುದೇ ಇದಕ್ಕೆ ಕಾರಣ. ಆದರೆ ಆಯ್ಕೆ ಸಮಿತಿಯ ಉಳಿದಿಬ್ಬರು ಸದಸ್ಯರಾದ ದೇಬಶಿಷ್‌ ಮೊಹಂತಿ ಮತ್ತು ಅಬೆ ಕುರುವಿಲ್ಲ ಭಾರತದ ಮತ್ತೂಂದು ತಂಡದೊಂದಿಗೆ ಶ್ರೀಲಂಕಾ ಪ್ರವಾಸಕ್ಕೆ ತೆರಳಲಿದ್ದಾರೆ. ಇವರಿಬ್ಬರೂ ಮುಂಬಯಿ ಹೊಟೇಲಿನಲ್ಲಿ ಆಟಗಾರರೊಂದಿಗೆ ಕ್ವಾರಂಟೈನ್‌ ಮುಗಿಸಿದ್ದಾರೆ.

ಇಶಾಂತ್‌ಗೆ ಗಾಯ: ಟೆಸ್ಟ್‌ಗೆ ಸಮಸ್ಯೆ ಇಲ್ಲ
ಸೌತಾಂಪ್ಟನ್‌: ಭಾರತ ತಂಡದ ಅನುಭವಿ ವೇಗಿ ಇಶಾಂತ್‌ ಶರ್ಮ ಅವರ ಬಲಗೈಗೆ ಗಾಯವಾಗಿದ್ದು, ಮೂರು ಹೊಲಿಗೆ ಹಾಕಲಾಗಿದೆ.

ಭಾರತ-ನ್ಯೂಜಿಲ್ಯಾಂಡ್‌ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ವೇಳೆ ಇಶಾಂತ್‌ ಚೆಂಡನ್ನು ತಡೆಯಲೆತ್ನಿಸಿದಾಗ ಬಲಗೈಗೆ ಗಾಯವಾಗಿತ್ತು. ಆದರೆ ಇದರಿಂದ ಭಾರತ- ಇಂಗ್ಲೆಂಡ್‌ ಟೆಸ್ಟ್‌ ಸರಣಿಗೇನೂ ಸಮಸ್ಯೆ ಆಗದು, ಆಗ ಇಶಾಂತ್‌ ಫಿಟ್‌ ಆಗಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.