ಲಾಕ್‌ ಡೌನ್‌ ಟೈಮಲ್ಲೊಂದು ‘ಅನಿರೀಕ್ಷಿತ’ ಸಿನಿಮಾ! ಮಿಮಿಕ್ರಿ ದಯಾನಂದ್ ನಿರ್ದೇಶನ


Team Udayavani, Jun 26, 2021, 2:59 PM IST

anireekshitha kannada new movie

ನಟನಾಗಿ, ಮಿಮಿಕ್ರಿ ಕಲಾವಿದನಾಗಿ ಪರಿಚಿತರಾಗಿರುವ ದಯಾನಂದ್‌ ಇದೀಗ ಸದ್ದಿಲ್ಲದೆ ಸಿನಿಮಾವೊಂದನ್ನು ನಿರ್ದೇಶಿಸಿ, ಅದನ್ನು ತೆರೆಗೆ ತರುವ ತಯಾರಿಯಲ್ಲಿದ್ದಾರೆ. ಅಂದಹಾಗೆ, ಆ ಸಿನಿಮಾದ ಹೆಸರು “ಅನಿರೀಕ್ಷಿತ’.

ಜೀವನದಲ್ಲಿ ಸಿಗುವ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ, ಯಾರೂ ಕಲಿಸದಂಥ ಪಾಠವನ್ನುಕಲಿಸುತ್ತವೆ. ಇಂಥದ್ದೇ ತಾತ್ವಿಕ ಎಳೆಯೊಂದನ್ನು ಇಟ್ಟುಕೊಂಡು ಮಿಮಿಕ್ರಿ ದಯಾನಂದ್‌ ಆ್ಯಂಡ್‌ ಟೀಮ್‌ ಈ ಸಿನಿಮಾವನ್ನು ತೆರೆಗೆ ತರುತ್ತಿದೆ

ಲಾಕ್‌ಡೌನ್‌ ಸಮಯ ವ್ಯರ್ಥ ಮಾಡದ ಹದಿಮೂರು ಜನ ಪ್ರತಿಭಾವಂತರ ತಂಡದ ಪರಿಶ್ರಮದ ಫ‌ಲವಾಗಿ ಈ ಚಿತ್ರ ಮೂಡಿಬಂದಿದ್ದು, ಕೇವಲ ಎರಡು ಪಾತ್ರಗಳನ್ನು ಇಟ್ಟುಕೊಂಡು ಒಂದೇ ಚಿತ್ರೀಕರಣ ಸ್ಥಳದಲ್ಲಿ ನಾಲ್ಕು ಲೊಕೇಶನ್‌ ಗಳಂತೆ ಬಳಸಿ ಇಡೀ ಚಿತ್ರವನ್ನು ಚಿತ್ರೀಕರಿಸಲಾಗಿದೆ. ಇಡೀ ಚಿತ್ರದಲ್ಲಿ ಕೇವಲ ಎರಡು ಪಾತ್ರಗಳಿದ್ದು, ಮಿಮಿಕ್ರಿ ದಯಾನಂದ್‌ ಹಾಗೂ ಭಾಮ ಆ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಎಸ್‌.ಕೆ.ಟಾಕೀಸ್‌’ ಬ್ಯಾನರ್‌ನಲ್ಲಿ ಶಾಂತ ಕುಮಾರ್‌ ನಿರ್ಮಿಸಿರುವ “ಅನಿರೀಕ್ಷಿತ’ ಚಿತ್ರಕ್ಕೆ ಸಂತೋಷ್‌ ಕೊಡಂಕೇರಿ, ರಘು ಎಸ್‌ ಹಾಗೂ ಮಿಮಿಕ್ರಿ ದಯಾನಂದ್‌ ಸಹ ನಿರ್ಮಾಣವಿದೆ. ಮಿಮಿಕ್ರಿ ದಯಾನಂದ್‌ ಕಥೆ, ಚಿತ್ರಕಥೆ ನಿರ್ದೇಶನವಿರುವ ಈ ಚಿತ್ರಕ್ಕೆ ನೆಳ್ಳುಳ್ಳಿ ರಾಜಶೇಖರನ್‌ ಸಂಭಾಷಣೆ ಇದೆ. ಚಿತ್ರದ ಹಾಡುಗಳಿಗೆ ಗುರುಕಿರಣ್‌ ಸಂಗೀತ ಸಂಯೋಜಿಸಿದ್ದು, ಜೀವನ್‌ ಗೌಡ ಛಾಯಾಗ್ರಹಣ ಹಾಗೂ ರಘು ಸಂಕಲನವಿದೆ.

ಸದ್ಯ “ಅನಿರೀಕ್ಷಿತ’ ಚಿತ್ರದ ಶೂಟಿಂಗ್‌, ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಚಿತ್ರದ ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇತ್ತೀಚೆಗೆ “ಅನೀರಿಕ್ಷಿತ’ ಚಿತ್ರದ ಮೊದಲ ಪೋಸ್ಟರನ್ನು ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಬಿಡುಗಡೆ ಮಾಡಿದರು. ಚಿತ್ರದ ಎರಡು ಹಾಗೂ ಮೂರನೇ ಪೋಸ್ಟರನ್ನು ಗಿರಿಜಾ ಲೋಕೇಶ್‌ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್‌ ಅನಾವರಣಗೊಳಿಸಿದ್ದಾರೆ. ಚಿತ್ರಮಂದಿರಗಳು ತೆರೆಯುತ್ತಿದ್ದಂತೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.