ಗಡಿಯಲ್ಲಿ ಕಟ್ಟೆಚ್ಚರ-ವ್ಯಾಕ್ಸಿನ್‌ ಗೆ ಒತ್ತು


Team Udayavani, Jun 26, 2021, 7:25 PM IST

eರತಯುಇಉಯತರೆಡಟ

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ನಿಟ್ಟುಸಿರುವ ಬಿಡುವ ಮುನ್ನವೇ ಜನರ ನಿರ್ಲಕ್ಷé ಎದ್ದು ಕಾಡುತ್ತಿದೆ. ಸಾಮಾಜಿಕ ಅಂತರ ಪಾಲನೆಯನ್ನೇ ಸಾರ್ವಜನಿಕರು ಮರೆತಂತಿದ್ದಾರೆ.

ಮೇಲಾಗಿ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ ಈಗಿನಿಂದಲೇ ಎಚ್ಚರಿಕೆ ಕ್ರಮ ವಹಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸಾ °ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ನಾಲ್ಕು ವಾರಗಳಿಂದ ಕೊರೊನಾ ಸೋಂಕಿನ ಪ್ರಮಾಣ ತಗ್ಗಿದೆ.

ನಿತ್ಯ ಸರಾಸರಿ 20ರಿಂದ 25 ಹೊಸ ಪ್ರಕರಣ ಮಾತ್ರ ಕಂಡುಬರುತ್ತಿವೆ. ಆದರೆ, ಕಳೆದ ವಾರದಲ್ಲಿ ಮೂರು ದಿನ 30ಕ್ಕೂ ಹೆಚ್ಚು ಹೊಸ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಇದೊಂದು ಎಚ್ಚರಿಕೆ ಗಂಟೆ ಮತ್ತು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದರು. ಜಿಲ್ಲೆಯ ಜನರಿಗೆ ಕೊರೊನಾದಿಂದ ರಕ್ಷಿಸಿಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳ ಅರಿವು ಇದೆ. ಆದರೆ, ಅನ್‌ ಲಾಕ್‌ ಪ್ರಕ್ರಿಯೆ ಆರಂಭವಾದ ನಂತರ ಎಲ್ಲೆಂದರಲ್ಲಿ ಗುಂಪುಗೂಡುವುದು ಹೆಚ್ಚಾಗಿದೆ. ಸಾಮಾಜಿಕ ಅಂತರವನ್ನೇ ಪಾಲಿಸುತ್ತಿಲ್ಲ. ಇದು ಅಪಾಯಕ್ಕೆ ಆಹ್ವಾನ ನೀಡುವ ಸಾಧ್ಯತೆಯೂ ಇದೆ.

ಇದೇ ವೇಳೆ ನೆರೆಯ ಮಹಾರಾಷ್ಟ್ರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಜಿಲ್ಲೆಯ ಗಡಿಗೆ ಹೊಂದಿಕೊಂಡ ಸೊಲ್ಲಾಪುರದಲ್ಲಿ ಪ್ರತಿ ದಿನ 300ರಿಂದ 400 ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಆದ್ದರಿಂದ ಗಡಿ ಭಾಗದಲ್ಲಿ ಈಗಿನಿಂದಲೇ ಮತ್ತೆ ಬಿಗಿ ಕ್ರಮಗಳೊಂದಿಗೆ ಲಸಿಕೆ ವಿತರಣೆಗೂ ಒತ್ತು ನೀಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ತೀರ ಹೆಚ್ಚೇನಿಲ್ಲ.

ಆದರೆ, ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಅಫಜಲಪುರ, ಆಳಂದ ತಾಲೂಕಿನಲ್ಲಿ ಎಚ್ಚರ ವಹಿಸಬೇಕಾಗಿದೆ. ಮಹಾರಾಷ್ಟ್ರದ ಗಡಿಗಳ ಮೂಲಕ ಜಿಲ್ಲೆ ಪ್ರವೇಶಿಸುವವರಿಗೆ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ ಮಾಡಲಾಗಿದೆ. ಈ ನಿಟ್ಟಿನಲ್ಲಿ ಎರಡೂ ತಾಲೂಕುಗಳ ಐದು ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ಕ್ರಮ ಅನುಸರಿಸಲಾಗುತ್ತಿದೆ. ಮಹಾರಾಷ್ಟ್ರದಿಂದ ಬರುವವರೆಗೆ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯಗೊಳಿಸಲಾಗಿದೆ.

ನೆಗೆಟಿವ್‌ ಇಲ್ಲದವರ ವಾಹನಗಳನ್ನು ಮರಳಿ ಕಳಿಸಲಾಗುತ್ತಿದೆ ಎಂದರು. ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ ಸಂಬಂಧ ಈಗಾಗಲೇ ಜಿಲ್ಲಾಡಳಿತದಿಂದ ಮಹಾ ರಾಷ್ಟ್ರದ ಸೊಲ್ಲಾಪುರ, ಉಸ್ಮಾನಾಬಾದ್‌ ಜಿಲ್ಲಾಡಳಿತಕ್ಕೆ ಪತ್ರ ಬರೆಯಲಾಗಿದೆ. ಇದೇ ವೇಳೆ ನಿತ್ಯ ಕೆಲಸ ಕಾರ್ಯಗಳಿಗೆ ಓಡಾಡುವ ಜಿಲ್ಲೆಯ ಜನರಿಗೆ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ಕೊರೊನಾ ಲಸಿಕೆಗೆ ಪ್ರಮುಖ್ಯತೆ ನೀಡಲು ನಿರ್ಧರಿಸಲಾಗಿದೆ. ಗಡಿ ಗ್ರಾಮದ ಜನ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರೆ, ಅಂತವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.