ದಕ್ಷಿಣ ಕನ್ನಡ ಜಿಲ್ಲೆ : 567 ಮಂದಿ ಗುಣಮುಖ, 375 ಹೊಸ ಪ್ರಕರಣ ದೃಢ; 14 ಮಂದಿ ಸಾವು
Team Udayavani, Jun 26, 2021, 7:21 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ಪ್ರಕರಣ ಕಳೆದ ಎರಡು ದಿನಗಳಿಂದ ತುಸು ಇಳಿಕೆ ಕಾಣುತ್ತಿದೆ. ಆದರೆ ಸಾವಿನ ಸಂಖ್ಯೆ ಏರಿಕೆ ಕಾಣುತ್ತಿದೆ.
ಶನಿವಾರದಂದು ಜಿಲ್ಲೆಯಲ್ಲಿ 375 ಮಂದಿಗೆ ಕೊರೊನಾ ದೃಢಪಟ್ಟಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಮೃತ ಪಟ್ಟವರಲ್ಲಿ 9 ಮಂದಿ ದ.ಕ. ಜಿಲ್ಲೆಯವರು, 5 ಮಂದಿ ಹೊರ ಜಿಲ್ಲೆಯವರು. ಜಿಲ್ಲೆಯಲ್ಲಿ ಶುಕ್ರವಾರವೂ 14 ಮಂದಿ ಮೃತಪಟ್ಟಿದ್ದರು. ಶನಿವಾರದಂದು 567 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,121 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 91,411 ಮಂದಿ ಕೊರೊನಾ ಸೋಂಕಿಗೊಳಗಾಗಿದ್ದು, ಈ ಪೈಕಿ 84,097 ಮಂದಿ ಗುಣಮುಖರಾಗಿದ್ದಾರೆ. ಸದ್ಯ 6,208 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಶೇ.4.60 ರಷ್ಟು ಪಾಸಿಟಿವಿಟಿ ದರ ಇದೆ.
ಇದನ್ನೂ ಓದಿ :ಮಳೆ ನಿರೀಕ್ಷೆ : ಜೂನ್ 29ರಿಂದ ಜುಲೈ 1ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನ ಆರಂಭವಾಗಲಿದೆ.
6 ಕಡೆ ಕಂಟೈನ್ಮೆಂಟ್ ವಲಯ
ದಕ್ಷಿಣ ಕನ್ನಡ ಜಿಲ್ಲೆಯ 6 ಕಡೆಗಳಲ್ಲಿ ಶನಿವಾರ ಕಂಟೈನ್ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಮಂಗಳೂರು ಮತ್ತು ಪುತ್ತೂರು ತಾಲೂಕಿನ 2, ಸುಳ್ತ ಮತ್ತು ಬೆಳ್ತಂಗಡಿ ತಾಲೂಕಿನ ತಲಾ 2 ಕಡೆಗಳಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ
IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ
Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ
Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ
Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ