ವಾದ- ಪ್ರತಿವಾದ ಮುಗಿದಿದೆ, ಜಡ್ಜ್ ಮೆಂಟ್ ನಿರೀಕ್ಷೆ ಇದೆ: ಸಚಿವ ಯೋಗೇಶ್ವರ್
Team Udayavani, Jun 29, 2021, 11:03 AM IST
ಕಲಬುರಗಿ: ರಾಜ್ಯ ಬಿಜೆಪಿಯಲ್ಲಿನ ವಾದ- ಪ್ರತಿವಾದ ಮುಗಿದಿದೆ. ಈಗ ಜಡ್ಜ್ ಮೆಂಟ್ ನಿರೀಕ್ಷೆಯಲ್ಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಮಾರ್ಮಿಕವಾಗಿ ಹೇಳಿಕೆ ನೀಡಿದ್ದಾರೆ.
ಮಂಗಳವಾರ ವಿಜಯಪುರಕ್ಕೆ ತೆರಳಲೆಂದು ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಕೋವಿಡ್ ಮಾರ್ಗಸೂಚಿಯಂತೆ ನಮ್ಮ ಸುಪ್ರೀಂ (ಬಿಜೆಪಿ ಹೈಕಮಾಂಡ್) ನವರು ಮಾರ್ಗಸೂಚಿ ಕೊಡುತ್ತಾರೆ ಎನ್ನುವ ಆಶಾ ಭಾವನೆ ಇದೆ ಎಂದರು.
ನನ್ನ ಭಾವನೆಗಳನ್ನು ಹೈಕಮಾಂಡ್ ಮುಂದೆ ಹೇಳಿಕೊಂಡಿದ್ದೇನೆ. ಜಡ್ಜ್ ಮೆಂಟ್ ಏನು ಬರುತ್ತೋ ಕಾಯೋಣ. ರಮೇಶ ಜಾರಕಿಹೊಳಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದಲ್ಲಿ ಯಾವ ರೀತಿ ಗೊಂದಲಗಳಿಲ್ಲ. ಏನಾದರೂ ಸಮಸ್ಯೆಗಳಿದ್ದರೆ ನಾವೆಲ್ಲ ಸರಿಪಡಿಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ:ಪರೀಕ್ಷೆ ವಿಚಾರಕ್ಕೆ ಸುರೇಶ್ ಕುಮಾರ್- ಸುಧಾಕರ್ ಜಟಾಪಟಿ: ಗೊಂದಲ ಬೇಡವೆಂದ ಸಿಎಂ ಬಿಎಸ್ ವೈ
ಕಾಂಗ್ರೆಸ್ ನಲ್ಲಿ ಈಗಲೇ ಮುಂದಿನ ಸಿಎಂ ಚರ್ಚೆ ಶುರುವಾಗಿದೆ. ಆದರೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರಿಗೂ ಸಿಎಂ ಆಗುವ ಅವಕಾಶ ಕೊಡಲ್ಲ ಎಂದರು.
ಪಾಪ ಶಿವಕುಮಾರ್ ಸಿಎಂ ಆಗಬೇಕೆಂದು ಬಹಳಷ್ಟು ಕನಸು ಕಾಣುತ್ತಿದ್ದಾರೆ. ಆದರೆ, ಅವರಿಗೆ ಶಾಸಕರ ಬೆಂಬಲ ಇದ್ದಂಗೆ ಕಾಣುವುದಿಲ್ಲ. ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಆಗಬೇಕೆಂದು ಕಳೆದ ಸರ್ಕಾರದಲ್ಲೂ ಪ್ರಯತ್ನ ನಡೆದಿತ್ತು. 70 ವರ್ಷಗಳಿಂದ ದಲಿತ ಸಮುದಾಯ ಕಾಂಗ್ರೆಸ್ ಪರ ಇತ್ತು. ಅವರಿಗೆ ಅನ್ಯಾಯ ಆಗಿದೆ. ಹೀಗಾಗಿ ಮತ್ತೆ ಆ ನಿಟ್ಟಿನಲ್ಲಿ ಧ್ವನಿ ಪ್ರಾರಂಭವಾಗಿದೆ. ಇನ್ನು ಎರಡು ವರ್ಷ ಇದೆ. ಮುಂದೆ ಏನಾಗುತ್ತೋ ಕಾದು ನೋಡೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ