ಹೈಕೋರ್ಟ್ ಆದೇಶದ ಬೆನ್ನಲ್ಲೇ ಚಾರ್ ಧಾಮ್ ಯಾತ್ರೆ ಮುಂದೂಡಿದ ಉತ್ತರಾಖಂಡ್ ಸರ್ಕಾರ
ಚಮೋಲಿ ಜಿಲ್ಲೆಯ ಸ್ಥಳೀಯರಿಗೆ ಬದರಿನಾಥ್ ಯಾತ್ರೆ ಕೈಗೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.
Team Udayavani, Jun 29, 2021, 3:36 PM IST
ನವದೆಹಲಿ: ಉತ್ತರಾಖಂಡ್ ಹೈಕೋರ್ಟ್ ಆದೇಶದ ಮೇರೆಗೆ ತಕ್ಷಣಕ್ಕೆ ಜಾರಿಗೆ ಬರುವಂತೆ ಉತ್ತರಾಖಂಡ್ ಸರ್ಕಾರ ಮಂಗಳವಾರ(ಜೂನ್ 29) ಚಾರ್ ಧಾಮ್ ಯಾತ್ರೆಯನ್ನು ಮುಂದೂಡಿರುವುದಾಗಿ ತಿಳಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಷ್ಕೃತ ಎಪ್ ಒಪಿ (ಮಾರ್ಗಸೂಚಿ) ಯನ್ನು ಹೊರಡಿಸಿದೆ.
ಇದನ್ನೂ ಓದಿ:ವಾರದಲ್ಲಿ ಉಡುಪಿ ಜಿಲ್ಲೆ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ ಪೂರ್ಣ – ಸಚಿವ ಕೋಟ
ಹೈಕೋರ್ಟ್ ಆದೇಶದಿಂದಾಗಿ ಈಗಾಗಲೇ ಜುಲೈ 1ರಿಂದ ಪ್ರಾರಂಭವಾಗಬೇಕಿದ್ದ ಉದ್ದೇಶಿತ ಚಾರ್ ಧಾಮ್ ಯಾತ್ರೆಯನ್ನು
ರದ್ದುಗೊಳಿಸಿರುವುದಾಗಿ ತಿಳಿಸಿದೆ. ರಾಜ್ಯ ಸರ್ಕಾರ ಈ ಹಿಂದೆ ತೀರ್ಥಯಾತ್ರೆಗಾಗಿ ಹೊರಡುವ ಯಾತ್ರಾರ್ಥಿಗಳಿಗಾಗಿ ಕೋವಿಡ್ 19
ಮಾರ್ಗಸೂಚಿಯನ್ನು ಹೊರಡಿಸಿತ್ತು.
ಚಾರ್ ಧಾಮ್ ಯಾತ್ರೆಯ ಎರಡನೇ ಹಂತ ಜುಲೈ1ರಿಂದ ಪ್ರಾರಂಭವಾಗಲಿದೆ. ಕಡಿಮೆ ಪ್ರಮಾಣದ ಯಾತ್ರಾರ್ಥಿಗಳಿಗೆ ಚಾರ್ ಧಾಮಕ್ಕೆ ಭೇಟಿ ನೀಡಲು ಅನುಮತಿ ನೀಡಲು ಸಚಿವ ಸಂಪುಟದಲ್ಲಿ ನಿರ್ಧಾರ ತೆದುಕೊಳ್ಳಲಾಗಿತ್ತು. ಅಲ್ಲದೇ ಚಾರ್ ಧಾಮ್ ದೇವಾಲಯದ ಪೂಜೆಯನ್ನು ನೇರ ಪ್ರಸಾರ ಮಾಡುವಂತೆ ಆದೇಶ ನೀಡಿತ್ತು.
ಈ ಹಿನ್ನೆಲೆಯಲ್ಲಿ ರುದ್ರಪ್ರಯಾಗ್, ಚಮೋಲಿ ಮತ್ತು ಉತ್ತರ್ ಕಾಶಿ ನಿವಾಸಿಗಳಿಗೆ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಹೊರಡಿಸಿತ್ತು. ರುದ್ರಪ್ರಯಾಗ್ ನಿವಾಸಿಗಳಿಗೆ ತೀರ್ಥಯಾತ್ರೆ ಕ್ಷೇತ್ರವಾದ ಕೇದಾರನಾಥಕ್ಕೆ ಭೇಟಿ ನೀಡಲು ಅವಕಾಶ ನೀಡಿದೆ. ಅಲ್ಲದೇ ಚಮೋಲಿ ಜಿಲ್ಲೆಯ ಸ್ಥಳೀಯರಿಗೆ ಬದರಿನಾಥ್ ಯಾತ್ರೆ ಕೈಗೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್