ಸಿಇಟಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪ್ರಾಧಿಕಾರಕ್ಕೆ 2 ಲಕ್ಷ ಸರ್ಜಿಕಲ್ ಮಾಸ್ಕ್ ಕೊಡುಗೆ
Team Udayavani, Jun 29, 2021, 5:13 PM IST
ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ರೈನ್ ಬೋ ಆಸ್ಪತ್ರೆ ಹಾಗೂ ಎಇಎಸ್ (ಅಡ್ವಾನ್ಸ್ಡ್ ಎಜ್ಯುಕೇಷನಲ್ ಸರ್ವೀಸ್) ಸಂಸ್ಥೆ ಸೇರಿ ಈ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ವಿದ್ಯಾರ್ಥಿಗಳಿಗೆ ಕೋವಿಡ್ ರಕ್ಷಣೆಗಾಗಿ 2 ಲಕ್ಷ ಸರ್ಜಿಕಲ್ ಮಾಸ್ಕ್ಗಳನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರಕ್ಕೆ ಕೊಡುಗೆಯಾಗಿ ನೀಡಿವೆ.
ಬೆಂಗಳೂರಿನಲ್ಲಿಂದು ಈ ಸಂಸ್ಥೆಗಳ ಉನ್ನತ ಪ್ರತಿನಿಧಿಗಳು ಸಾಂಕೇತಿಕವಾಗಿ ಸರ್ಜಿಕಲ್ ಮಾಸ್ಕ್ಗಳನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಹಸ್ತಾಂತರ ಮಾಡಿದರು.
ಇದನ್ನೂ ಓದಿ:ಶ್ಯಾಮಪ್ರಸಾದ ಮುಖರ್ಜಿ ಸ್ಮರಣಾರ್ಥ ಬಿಜೆಪಿಯಿಂದ 11 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಡಿಸಿಎಂ
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, “ಖಾಸಗಿ ಆಸ್ಪತ್ರೆಗಳು ಹಾಗೂ ಸಂಘ ಸಂಸ್ಥೆಗಳು ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿವೆ. ಇದು ಅತ್ಯಂತ ಸಂತಸದ ಸಂಗತಿ. ಅದರಲ್ಲೂ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರೈನ್ ಬೋ ಆಸ್ಪತ್ರೆ, ಬ್ರೈಟ್ ರೈಟ್ ಹಾಗೂ ಎಇಎಸ್ (ಅಡ್ವಾನ್ಸ್ಡ್ ಎಜ್ಯುಕೇಷನಲ್ ಸರ್ವೀಸ್) ಸಂಸ್ಥೆಗಳು ಸರ್ಜಿಕಲ್ ಮಾಸ್ಕ್ಗಳನ್ನು ದಾನ ಮಾಡಿರುವುದು ಸಾರ್ಥಕ ಕಾರ್ಯ” ಎಂದರು.
ಪರೀಕ್ಷೆ ಕಾಲದಲ್ಲಿ ವಿದ್ಯಾರ್ಥಿಗಳು ಸೋಂಕಿನಿಂದ ಪಾರಾಗಲು ಈ ಮಾಸ್ಕ್ಗಳು ಪರಿಣಾಮಕಾರಿಯಾಗಿ ನೆರವಾಗುತ್ತವೆ ಎಂದರು.
ಈ ಸಂದರ್ಭದಲ್ಲಿ ಎಇಎಸ್ ಸಂಸ್ಥಾಪಕ ನಿರ್ದೇಶಕಿ ದೀಪ್ತಿ ಅಶೋಕ್, ರೈನ್ ಬೋ ಮಕ್ಕಳ ಆಸ್ಪತ್ರೆ ಹಾಗೂ ಬ್ರೈಟ್ ರೈಟ್ನ ಉಪಾಧ್ಯಕ್ಷ ಅಕ್ಷಯ್ ಓಲೇಟಿ ಮುಂತಾದವರು ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ