ಮಳೆಯಾಗದಿದ್ದರೆ ಬೆಳೆಗೆ ಡ್ಯಾಂನಿಂದ ನೀರು
Team Udayavani, Jun 29, 2021, 5:19 PM IST
ಆಲಮಟ್ಟಿ: ಉತ್ತರಕ ರ್ನಾಟಕದ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಿದ್ದು ಈಗಾಗಲೇ ರೈತರು ಬಿತ್ತನೆ ಮಾಡಿದ್ದಾರೆ. ಮಳೆಗಾಲ ಇನ್ನೂ ಮೂರು ತಿಂಗಳಿದ್ದು ಅಷ್ಟರಲ್ಲಿ ಮಳೆಯಾಗದಿದ್ದರೆ ಅಥವಾ ಶಾಸ್ತ್ರಿ ಜಲಾಶಯದಲ್ಲಿ 123 ಟಿಎಂಸಿ ಅಡಿ ನೀರು ತುಂಬಿದ ನಂತರ ರೈತರಿಗೆ ನೀರು ಕೊಡಲಾಗುವದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು.
ಸೋಮವಾರ ಆಲಮಟ್ಟಿಯ ರಾಕ್ ಉದ್ಯಾನದಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಮಧ್ಯ ಭಾಗದಲ್ಲಿರುವ ಆಲಮಟ್ಟಿಯಲ್ಲಿ ಜಂಗಲ್ ಸಫಾರಿ ಮಾಡಿದರೆ ಅವಳಿ ಜಿಲ್ಲೆಗಳು ಅಭಿವೃದ್ಧಿಯಾಗಲಿವೆ. ಈಗಾಗಲೇ ಬೆಳಗಾವಿಯಲ್ಲಿ ಜಂಗಲ್ ಸಫಾರಿ ಮಾಡುವ ಮುಂದಾಲೋಚನೆಯಿಂದ ಹುಲಿ, ಸಿಂಹ ಹಾಗೂ ಜಿಂಕೆಗಳನ್ನು ಬಿಡಲಾಗಿದೆ ಎಂದರು.
ಉತ್ತರ ಕರ್ನಾಟದಲ್ಲಿ ಜೋಳ ವಿತರಣೆ ಮಾಡಲು 6.5 ಲಕ್ಷ ಟನ್ ಜೋಳ ಮತ್ತು ದಕ್ಷಿಣ ಭಾಗದಲ್ಲಿ ರಾಗಿ ವಿತರಣೆ ಮಾಡಲು 6.5 ಲಕ್ಷ ಟನ್ ರಾಗಿ ಅವಶ್ಯಕತೆಯಿದೆ. ಇದರಲ್ಲಿ 80 ಸಾವಿರ ಟನ್ ಜೋಳ ಸಂಗ್ರಹವಿದೆ. ಇನ್ನಷ್ಟು ಜೋಳ ಖರೀದಿಗೆ ಬೆಂಬಲ ಬೆಲೆ ನಿಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ನಂತರ ಜೋಳ ಹಾಗೂ ರಾಗಿಯೊಂದಿಗೆ 2 ಕೆಜಿ ಅಕ್ಕಿಯನ್ನು ಪಡಿತರ ವಿತರಣೆಯಲ್ಲಿ ನೀಡುವ ಚಿಂತನೆಯಿದೆ ಎಂದು ಹೇಳಿದರು. ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ