ಗದ್ದೆಗಿಳಿದು ನೇಜಿ ನೆಟ್ಟು ಶಾಸಕ ಡಾ.ಭರತ್ ಶೆಟ್ಟಿ ವೈ
Team Udayavani, Jun 30, 2021, 1:14 PM IST
ಸುರತ್ಕಲ್: ಹಡಿಲು ಗದ್ದೆಯಲ್ಲಿ ಕೃಷಿಗೆ ಉತ್ತೇಜನ ನೀಡುತ್ತಿರುವ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಸುರತ್ಕಲ್ ರಥ ಬೀದಿಯಲ್ಲಿರುವ ಬಾಕಿಮಾರು ಗದ್ದೆಯಲ್ಲಿ ಇಳಿದು ಇತರರೊಂದಿಗೆ ತಾವೂ ನೇಜಿ ನೆಟ್ಟು ಸಂಭ್ರಮಪಟ್ಟರು.
ಈ ಸಂದರ್ಭ ಮಾತನಾಡಿದ ಅವರು, ನಮ್ಮ ಮಣ್ಣಿನ ಸಂಪ್ರದಾಯವನ್ನು ಉಳಿಸುವ ಕೆಲಸವನ್ನು ಸ್ಥಳೀಯರು, ಭಕ್ತರು ಮಾಡುತ್ತಿದ್ದು, ಇದು ಪ್ರಶಂಸನೀಯ.ಗದ್ದೆಯನ್ನು ಉಳಿಸಿಕೊಂಡ ಮುಂದೆಯೂ ನಿರಂತರವಾಗಿ ಈ ಕಾಯಕ ಇಲ್ಲಿ ಮಾತ್ರವಲ್ಲದೆ ಎಲ್ಲಡೆಯೂ ನಡೆಯಬೇಕು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ವತಃ ಹಡಿಲು ಭೂಮಿಯನ್ನು ಗುರುತಿಸಿ ಭತ್ತ ನಾಟಿಗೆ ಕ್ರಮಕೈಗೊಂಡಿದ್ದು ಕೃಷಿ ಕಾರ್ಯ ಪ್ರಗತಿಯಲ್ಲಿದೆ. ಇದರ ಜತೆಗೆ ಕೃಷಿ ಕಾರ್ಯಕ್ಕೆ ಎಲ್ಲೆಡೆ ಉತ್ತೇಜನ ಸಿಗುವಂತೆ ಕೆಲಸವನ್ನು ಸರಕಾರವೂ ಮಾಡುತ್ತಿದೆ ಎಂದು ನುಡಿದರು.
ಇದನ್ನೂ ಓದಿ: ರಮೇಶ ಜಾರಕಿಹೊಳಿ ಸರಕಾರಕ್ಕೆ ಮುಜುಗರ ತರುವ ಕೆಲಸ ಮಾಡುತ್ತಿಲ್ಲ : ಭೈರತಿ ಬಸವರಾಜ್
ಈ ಸಂದರ್ಭ ಪುರಾತನ ಶ್ರೀ ಮಾರಿಯಮ್ಮ ,ವೀರಭದ್ರ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಕಾರ್ಪೋರೇಟರ್ ಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ