ಇಂಗಾಲ ಭಾರ ಇಳಿಸಿದ ವರ್ಕ್‌ ಫ್ರಂ ಹೋಂ!

ಹೆಚ್ಚಿನ ಸಿಬಂದಿಗೆ ಕಚೇರಿ-ಮನೆ ನಡುವಿನ ಪ್ರಯಾಣವಿಲ್ಲ

Team Udayavani, Jun 30, 2021, 6:20 PM IST

ಇಂಗಾಲ ಭಾರ ಇಳಿಸಿದ ವರ್ಕ್‌ ಫ್ರಂ ಹೋಂ!

ಭಾರತೀಯ ಐಟಿ ಕಂಪೆನಿಗಳ ಶೇ.95ರಷ್ಟು ಜನರು ಮನೆಗಳಿಂದಲೇ ಕೆಲಸ ಮಾಡುತ್ತಿ ರುವುದರಿಂದ ಇಂಗಾಲ ಹೊರ ಸೂಸುವಿಕೆ ಪ್ರಮಾಣ ಶೇ. 85ರಷ್ಟು ಕಡಿಮೆಯಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಇದರಿಂದ ಐಟಿ ಕಂಪೆನಿಗಳು ತಮ್ಮ ಸಿಬಂದಿ ಪಿಕ್‌ಅಪ್‌/ಡ್ರಾಪ್‌ಗಾಗಿ ವ್ಯಯಿಸುತ್ತಿದ್ದ ಹಣ ಅಗಾಧವಾಗಿ ಇಳಿಕೆಯಾಗಿದೆ. ಟಾಪ್‌ 5 ಕಂಪೆನಿಗಳಾದ ಟಾಟಾ ಸರ್ವೀಸಸ್‌, ಇನ್ಫೋಸಿಸ್‌, ಎಚ್‌ಸಿಎಲ್‌, ವಿಪ್ರೊ, ಟೆಕ್‌ ಮಹೀಂದ್ರಾ ಸಂಸ್ಥೆಗಳನ್ನು ಅಧ್ಯಯನ ಮಾಡಿ ಈ ವರದಿ ತಯಾರಿಸಲಾಗಿದೆ.

ಹೊರೆ ಇಳಿಕೆಗೆ ಪ್ರಮುಖ ಕಾರಣ
1)ಶೇ. 95ರಷ್ಟು ಸಿಬಂದಿಗೆ ಮನೆಯಿಂದಲೇ ಕೆಲಸ

2)ಹೆಚ್ಚಿನ ಸಿಬಂದಿಗೆ ಕಚೇರಿ-ಮನೆ ನಡುವಿನ ಪ್ರಯಾಣವಿಲ್ಲ

3)ಸಿಬಂದಿ ನೇಮಕಾತಿಯೂ ಆನ್‌ಲೈನ್‌ ಆಧಾರಿತ

ಅಧ್ಯಯನದ ಸಲಹೆಗಳು
ಸಾಂಕ್ರಾಮಿಕ ಕಾಲಘಟ್ಟವು ಮುಗಿದು ಎಲ್ಲ ಐಟಿ ಸಿಬಂದಿಯೂ ಕಚೇರಿಗೆ ಬಂದು ಹೋಗುವಂತಾದಾಗಲೂ ಇಂಗಾಲ ಹೊರಸೂಸುವಿಕೆ ಹಾಗೂ ಕಂಪೆನಿಗಳ ಮೇಲೆ ಬೀಳುವ ಸಿಬಂದಿ ಪ್ರಯಾಣ ಖರ್ಚುಗಳನ್ನು ಗಣನೀಯವಾಗಿ ಇಳಿಕೆ ಮಾಡಬಹುದು ಎಂದು ಅಧ್ಯಯನ ತಿಳಿಸಿದೆ.

ವರದಿಯಲ್ಲೇನಿದೆ?
ಇಂಗಾಲ ಸೂಸುವಿಕೆಯಲ್ಲಿ ಇಳಿಕೆ ಸುಮಾರು 44 ಲಕ್ಷದಷ್ಟಿರುವ ಐಟಿ ಸಿಬಂದಿಯಲ್ಲಿ ಕೇವಲ ಶೇ.4-5 ರಷ್ಟು ಸಿಬಂದಿ ಮಾತ್ರ ಕಚೇರಿಗೆ ಹೋಗುತ್ತಿದ್ದು, ಉಳಿದವರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಅಂದಾಜು ಶೇ.95-96 ರಷ್ಟು ಸಿಬಂದಿ ಕಚೇರಿಗಳಿಗೆ  ಹೋಗುತ್ತಿಲ್ಲವಾದ್ದರಿಂದ 2021 ರಲ್ಲಿ ಇಂಗಾಲದ ಹೊರಸೂಸುವಿಕೆ ಪ್ರಮಾಣ ಶೇ.85ರಷ್ಟು ಇಳಿಮುಖವಾಗಿದೆ. 2020ರಲ್ಲಿ 20 ಲ. ಟನ್‌ ಗಳಷ್ಟಿದ್ದ ಇಂಗಾಲ ಹೊರಸೂಸುವಿಕೆ, 2021ರಲ್ಲಿ ಶೇ.85ರಷ್ಟು ಕಡಿಮೆಯಾಗಿದೆ.

ಪ್ರಯಾಣ ಖರ್ಚಿನಲ್ಲೂ ಉಳಿತಾಯ
ಟಾಪ್‌ 5 ಕಂಪೆನಿಗಳ ಮೇಲಿದ್ದ ಸಿಬಂದಿ ಪ್ರಯಾಣದ ಖರ್ಚಿನಲ್ಲಿ ಭಾರೀ ಉಳಿತಾಯವಾಗಿದೆ. ಸಿಬಂದಿ ಪ್ರಯಾಣಕ್ಕಾಗಿ ಈ ಕಂಪೆನಿಗಳು ಭರಿಸುತ್ತಿದ್ದ ಪ್ರಯಾಣ ವೆಚ್ಚ 2021ರಲ್ಲಿ ಶೇ.75ರಷ್ಟು ಕಡಿತವಾಗಿದೆ. 2020ರಲ್ಲಿ 10,240 ಕೋಟಿ ರೂ.ಗಳಷ್ಟಿದ್ದ ಈ ಹೊರೆ, 2021ರಲ್ಲಿ 2,706 ಕೋಟಿ ರೂ.ಗಳಿಗೆ ಇಳಿದಿದೆ. ಭಾರತೀಯ ಸಮಗ್ರ ಐಟಿ ವಲಯವು ತಮ್ಮ ಸಿಬಂದಿಯ ಪ್ರಯಾಣಕ್ಕಾಗಿ 2019-20ರಲ್ಲಿ 21,000 ಕೋಟಿ ರೂ.ಗಳನ್ನು ವ್ಯಯಿಸಿದ್ದರೆ, ಪ್ರಸಕ್ತ ವರ್ಷದಲ್ಲಿ 5,400 ಕೋಟಿ ರೂ.ಗಳನ್ನು ಮಾತ್ರ ವ್ಯಯಿಸಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.