ಸಹಕಾರಿ ಧುರೀಣ ಎನ್.ಎಸ್. ಗೋಖಲೆ ಇನ್ನಿಲ್ಲ
Team Udayavani, Jul 1, 2021, 7:13 AM IST
ಬೆಳ್ತಂಗಡಿ: ಸಹಕಾರಿ ಧುರೀಣ ಬಹು ಪ್ರತಿಭೆಯ ಎನ್. ಎಸ್. ಗೋಖಲೆ (75 ವ) ಹೃದಯಾಘಾತದಿಂದ ಜೂ.30ರಂದು ಮುಂಡ್ರುಪಾಡಿಯ ತಮ್ಮ ಮೂಲ ಮನೆಯಲ್ಲಿ ನಿಧನರಾದರು.
ಸಹಕಾರಿ ತತ್ವದ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಅವರು ಜಿಲ್ಲೆಯ ಹಲವು ಸಂಘ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಮುಂಚೂಣಿ ಯಲ್ಲಿದ್ದರು.
ನಿಧನರಾದ ಎನ್. ಎಸ್. ಗೋಖಲೆ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.
ಮೂಲತಃ ಕೃಷಿಕರು. ಜತೆಗೆ ಸಾಮಾಜಿಕ – ಧಾರ್ಮಿಕ ಕ್ಷೇತ್ರದಲ್ಲಿ ಅಪ್ರತಿಮವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಎನ್.ಎಸ್ ಗೋಖಲೆ ಅವರು, ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರೂ ಆಗಿ ಕ್ರಿಯಾಶೀಲ ಸೇವೆ ಸಲ್ಲಿಸಿದ್ದರು. ಶತಮಾನೋತ್ಸವ ಸಂಭ್ರಮ ಆಚರಿಸಿದ್ದ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಿಂದೆ ಅಧ್ಯಕ್ಷರೂ ಆಗಿದ್ದ ಅವರು ಅಭಿವೃದ್ದಿಯ ಮಹಾಕನಸು ಕಂಡಿದ್ದರು.
ಇದನ್ನೂ ಓದಿ:ಜೂನ್ನಲ್ಲಿ ವಾಡಿಕೆಗಿಂತ ಶೇ.10ರಷ್ಟು ಹೆಚ್ಚು ಮಳೆ : ಹವಾಮಾನ ಇಲಾಖೆ ಪ್ರಕಟನೆ
ಸಹಕಾರಿ ಕ್ಷೇತ್ರದಲ್ಲಿ ದೀರ್ಘ ಮತ್ತು ಆಳವಾದ ಅನುಭವ ಹೊಂದಿದ್ದ ಅವರು ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಮಾಸ್ ಲಿಮಿಟೆಡ್, ಟಿಎಪಿಸಿಎಂಎಸ್, ಕ್ಯಾಂಪ್ಕೋ ಸಹಿತ ವಿವಿಧ ಸಂಸ್ಥೆಗಳಲ್ಲಿ ಹೆಜ್ಜೆ ಗುರುತು ಮೂಡಿಸಿದ್ದರು.
ಕೃಷಿಕರನ್ನು ಋಣಮುಕ್ತರನ್ನಾಗಿಸುವ ದೂರದೃಷ್ಟಿಯ ಯೋಜನೆ ಪರಿಕಲ್ಪಿಸಿದ್ದ ಅವರು ತಾನು ಮುಂಡಾಜೆ ಸಹಕಾರಿ ಸಂಸ್ಥೆಯ ಅಧ್ಯಕ್ಷರಾಗಿದ್ದಾಗ ಪ್ರತ್ಯೇಕ ನಿಧಿ ಸ್ಥಾಪಿಸಿದ್ದರು. ಸಾಲ ತೀರುವಳಿ ಯೋಜನೆ ಎಂಬ ಅವರ ಆಲೋಚನೆಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದಲೇ ಬಜೆಟ್ ಮೂಲಕ ನಿಧಿ ದೊರೆಯುವಂತೆ ಮಾಡಲು ಅನೇಕ ಪ್ರಯತ್ನಗಳನ್ನು ಮಾಡಿದ್ದರು.
ಅಪೂರ್ವ ಸಂಘಟಕರೂ ಆಗಿದ್ದ ಎನ್.ಎಸ್ ಗೋಖಲೆ ಅವರು ಯಕ್ಷಗಾನ ತಾಳಮದ್ದಳೆ ಕ್ಷೇತ್ರದಲ್ಲೂ ಗುರುತಿಸಿಕೊಂಡು ಉತ್ತಮ ಅರ್ಥದಾರಿಯಾಗಿಯೂ ಪಾತ್ರ ನಿರ್ವಹಿಸುತ್ತಿದ್ದರು. ಎನ್.ಎಸ್ ಗೋಖಲೆ ಅವರಿಗೆ ಜಿಲ್ಲಾರಾಜ್ಯೋತ್ಸವ ಪುರಸ್ಕಾರ ಲಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ
Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು
ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್ನಲ್ಲೇ ಹೆಚ್ಚು
Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ
Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್’ ಅಲ್ಲ!
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?
T20 ವಿಶ್ವಕಪ್: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್ಗೆ
Swimwear ಫ್ಯಾಶನ್ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!