ನೇಮಕಾತಿ ಹಗರಣ: ಹತ್ತು ವರ್ಷ ಜೈಲುಶಿಕ್ಷೆ ಬಳಿಕ ಮಾಜಿ ಸಿಎಂ ಚೌಟಾಲಾ ತಿಹಾರ್ ನಿಂದ ಬಿಡುಗಡೆ
ಈ ಹಿನ್ನೆಲೆಯಲ್ಲಿ ಉಳಿದ ಶಿಕ್ಷೆಯನ್ನು ವಿನಾಯ್ತಿ ಮಾಡಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
Team Udayavani, Jul 2, 2021, 2:50 PM IST
ನವದೆಹಲಿ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಹತ್ತು ವರ್ಷಗಳ ಕಾಲ ಜೈಲುಶಿಕ್ಷೆಗೊಳಗಾಗಿದ್ದ ಹರ್ಯಾಣ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರನ್ನು ಜೈಲು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಶುಕ್ರವಾರ(ಜುಲೈ 02) ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಯಿತು.
ಇದನ್ನೂ ಓದಿ:ಚಿಕ್ಕಮಗಳೂರು ಡಿಸಿ ಕಚೇರಿ ಎದುರು ಮಾಜಿ ಶಾಸಕ ವೈ.ಎಸ್.ವಿ ದತ್ತ ಮೌನ ಪ್ರತಿಭಟನೆ
ಪ್ರಕರಣದಲ್ಲಿ ಪೆರೋಲ್ ಮೇಲೆ ಹೊರಗಿದ್ದ 86ವರ್ಷದ ಚೌಟಾಲಾ ಶುಕ್ರವಾರ ತಿಹಾರ್ ಜೈಲು ಅಧಿಕಾರಿಗಳನ್ನು ಭೇಟಿಯಾಗಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಬಿಡುಗಡೆಗೊಳಿಸಲಾಯಿತು ಎಂದು ತಿಹಾರ್ ಜೈಲಿನ ಅಧಿಕಾರಿ ತಿಳಿಸಿದ್ದಾರೆ.
ಅಗತ್ಯ ಕಾನೂನು ಪ್ರಕ್ರಿಯೆ ಮುಗಿದ ನಂತರ ಚೌಟಾಲಾ ಅವರನ್ನು ತಿಹಾರ್ ಜೈಲಿನಿಂದ ಬಿಡುಗಡೆ ಮಾಡಿದ ನಂತರ ಅವರ ಬೆಂಬಲಿಗರು ಅವರನ್ನು ಸ್ವಾಗತಿಸಿರುವುದಾಗಿ ತಿಹಾರ್ ಕಾರಾಗೃಹದ ಡೈರೆಕ್ಟರ್ ಜನರಲ್ ಸಂದೀಪ್ ಗೋಯೆಲ್ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
ಕೋವಿಡ್ ಸೋಂಕು ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರವು ಕಳೆದ ತಿಂಗಳು ಹತ್ತು ವರ್ಷಗಳ ಜೈಲುಶಿಕ್ಷೆಯಲ್ಲಿ ಒಂಬತ್ತು ವರ್ಷ ಆರು ತಿಂಗಳ ಕಾಲ ಜೈಲುವಾಸ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಉಳಿದ ಆರು ತಿಂಗಳ ಕಾಲ ವಿಶೇಷ ವಿನಾಯ್ತಿ ನೀಡಿ ಜೈಲುಶಿಕ್ಷೆಯನ್ನು ಕಡಿತಗೊಳಿಸಿ ನಿರ್ಣಯ ಕೈಗೊಂಡು ತಿಹಾರ್ ಜೈಲಿಗೆ ಆದೇಶ ರವಾನಿಸಿತ್ತು.
ಶಿಕ್ಷಕರ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಒಪಿ ಚೌಟಾಲಾ ಅವರು 2013ರಿಂದ ಜೈಲುಶಿಕ್ಷೆ ಅನುಭವಿಸುತ್ತಿದ್ದರು. ಕೋವಿಡ್ ಸೋಂಕು ಹಿನ್ನೆಲೆಯಲ್ಲಿ 2020ರ ಮಾರ್ಚ್ 26ರಿಂದ ಚೌಟಾಲಾ ಪೆರೋಲ್ ನಲ್ಲಿದ್ದು, 2021ರ ಫೆಬ್ರುವರಿ 21ರಂದು ಜೈಲಿಗೆ ಶರಣಾಗಲು ಸೂಚಿಸಲಾಗಿತ್ತು. ಏತನ್ಮಧ್ಯೆ ದೆಹಲಿ ಹೈಕೋರ್ಟ್ ಪೆರೋಲ್ ಅನ್ನು ವಿಸ್ತರಿಸಿ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಉಳಿದ ಶಿಕ್ಷೆಯನ್ನು ವಿನಾಯ್ತಿ ಮಾಡಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ