ಸುಬ್ರಹ್ಮಣ್ಯ: ಜಿ.ಪಂ ಮಾಜಿ ಸದಸ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್ ನಿಧನ
Team Udayavani, Jul 3, 2021, 11:42 AM IST
ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಯೇನೆಕಲ್ಲು ನಿವಾಸಿ ಮಾಜಿ ಜಿ.ಪಂ. ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್ (55ವರ್ಷ) ಅವರು ಜು. 3ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕೆ.ಎಸ್.ದೇವರಾಜ್ ಅವರು ಪ್ರಭಾವಿ ಮುಖಂಡರಾಗಿದ್ದರು. ರಾಜಕೀಯ, ಸಾಮಾಜಿಕ, ಸಹಕಾರಿ, ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಏನೆಕಲ್ಲು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಸುಬ್ರಹ್ಮಣ್ಯದ ಬಿಳಿನೆಲೆ ಕೈಕಂಬ ಎಂಬಲ್ಲಿ ಪೆಟ್ರೋಲ್ ಪಂಪ್ ಹೊಂದಿರುವ ಇವರು ಕೈಕಂಬದಲ್ಲಿ ವಾಸ್ಯವ್ಯವಾಗಿದ್ದರು.