ಬೆಳ್ಳಗೆ ಹರಿಯುತ್ತಿದ್ದ ಘಟಪ್ರಭೆಗೆ ಕಪ್ಪುಕಳಂಕ

ರೈತರ ಜೀವನಾಡಿಯ ಮಡಿಲಲ್ಲಿ ಕಪ್ಪು ಕೊಳೆ | ಒದ್ದಾಡಿ ಸಾಯುತ್ತಿವೆ ಜಲಚರಗಳು | ಜನ-ಜಾನುವಾರು ಕುಡಿಯಲು ಹಿಂದೇಟು  

Team Udayavani, Jul 4, 2021, 8:36 PM IST

2kldg-1a

ವರದಿ: ಚಂದ್ರಶೇಖರ ಹಡಪದ

ಕಲಾದಗಿ: ನಿರಂತರವಾಗಿ ಬೆಳ್ಳಗೆ, ಮಳೆಯಾದರೆ ನಸು ಕೆಂಪಾಗಿ (ರಾಡಿನೀರು) ಹರಿಯುತ್ತಿದ್ದ, ಅನೇಕ ಹಳ್ಳಿಗಳ ಜನ-ಜಾನುವಾರು, ರೈತರಿಗೆ ಜೀವನಾಡಿ ಘಟಪ್ರಭೆ ಯಾಕೋ ಏನೋ ಕಳೆದ ಮೂರು ದಿನಗಳಿಂದ “ಕಪ್ಪಾಗಿ’ ಹರಿಯುತ್ತಿದ್ದು, ಈ ಭಾಗದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಿಂದೆಂದೂ ಕಪ್ಪಾಗಿ ಹರಿಯದ ಘಟಪ್ರಭೆ ಇತ್ತೀಚಿನ ದಿನಗಳಲ್ಲಿ ಕಪ್ಪಾಗಿ ಮಲೀನಗೊಂಡು ಹರಿಯುತ್ತಿರುವುದಕ್ಕೆ ಕಾರ್ಖಾನೆಗಳಿಂದ ನದಿಗೆ ಬಿಡುತ್ತಿರುವ ತ್ಯಾಜ್ಯವೇ ಕಾರಣ ಎನ್ನಲಾಗುತ್ತಿದೆ.

ಉದಗಟ್ಟಿ, ಶಾರದಾಳ, ಅಂಕಲಗಿ, ಕಲಾದಗಿ, ಚಿಕ್ಕಸಂಶಿ ಮುಂತಾದ ಊರುಗಳ ಸಮೀಪ ಘಟಪ್ರಭೆಯ ನದಿಯ ಹರಿವಿನಲ್ಲಿ ಕಣ್ಣು ಹಾಯಿಸಿದರೆ ನೀರು ಕಪ್ಪು ಕಪ್ಪಾಗಿ ಕಾಣುತ್ತಿದೆ. ಇದರಿಂದಾಗಿ ನದಿ ನೀರನ್ನು ಜಾನುವಾರುಗಳಿಗೆ ಕುಡಿಸಲು ಜನ ಹಿಂದೇಟು ಹಾಕುತ್ತಿದ್ದಾರೆ.

ಒದ್ದಾಡಿ ಸಾಯುತ್ತಿವೆ ಜಲಜೀವಿಗಳು: ನದಿ ನೀರು ಕಪ್ಪಾಗಿರುವುದರಿಂದ ಮೀನು, ಕಪ್ಪೆ, ಹಾವು, ಏಡಿ ಇನ್ನಿತರೆ ಜಲಜೀವಿಗಳು ವಿಲ ವಿಲ ಒದ್ದಾಡಿ ಸಾಯುತ್ತಿವೆ. ಸಣ್ಣ ಸಣ್ಣ ಮೀನುಗಳು, ಏಡಿಗಳು ಸತ್ತು ನದಿ ದಂಡೆ ಬಳಿ ಬಿದ್ದಿವೆ. ಇವುಗಳನ್ನು ನೋಡಿ ಜನ ಮತ್ತಷ್ಟು ಆತಂಕಗೊಂಡಿದ್ದಾರೆ. ಕುಡಿಯುವ ನೀರೂ ವಿಷ: ನದಿ ನೀರು ಕಪ್ಪಾಗಿ ಹರಿಯುತ್ತಿರುವುದರಿಂದ ಅಂತರ್ಜಲ ವಿಷಕಾರಿಯಾಗುವುದನ್ನು ತಳ್ಳಿ ಹಾಕುವಂತಿಲ್ಲ ಎನ್ನುತ್ತಾರೆ ನದಿ ಪಾತ್ರದ ಜನ.

ನದಿ ಪಾತ್ರದ ಗ್ರಾಮದಲ್ಲಿ ಕುಡಿಯುನ ನೀರಿನ ಕೊಳವೆ ಬಾವಿಗಳು ನದಿ ಜಲಮೂಲದಿಂದಲೇ ಅಂತರ್ಜಲ ಮಟ್ಟ ಹೆಚ್ಚಿಸಕೊಳ್ಳುತ್ತವೆ. ಬಾವಿಗಳಿಂದ ನದಿ ಸ್ವಲ್ಪ ದೂರದಲ್ಲಿಯೇ ಇದೆ. ಇದರಿಂದ ಕುಡಿಯುವ ನೀರಿನ ಕೊಳವೆ ಬಾವಿಗಳಲ್ಲಿ ತಾಜ್ಯ ವಿಷಯುಕ್ತ ನೀರು ಮಿಶ್ರಣವಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ.

ಎಚ್ಚೆತ್ತುಕೊಳ್ಳಬೇಕಿದೆ: ಘಟಪ್ರಭೆಯ ನೀರಿನಿಂದ ಏನಾದರೂ ಜನ-ಜಾನುವಾರುಗಳಿಗೆ ಅನಾಹುತಗಳು ಸಂಭವಿಸುವ ಮೊದಲೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಮುಖ್ಯವಾಗಿ ಜಲ ಮಾಲಿನ್ಯ ನಿಯಂತ್ರಣಾ ಮಂಡಳಿ ಅಧಿಕಾರಿಗಳು ಘಟಪ್ರಭೆಯ ಒಡಲು ಹೀಗೆ ಕಪ್ಪಾಗಿರುವುದಕ್ಕೆ ಕಾರಣ ಗುರುತಿಸಬೇಕು. ಕಾರ್ಖಾನೆ ತ್ಯಾಜ್ಯ ನದಿಗೆ ಬಿಡುತ್ತಿರುವುದೇ ನಿಜವಾದರೆ ಕೂಡಲೆ ಅದನ್ನು ತಡೆಯುವ ಪ್ರಯತ್ನವನ್ನು ಜಿಲ್ಲಾಡಳಿತ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.