ಲಸಿಕೆಗೆ ಕೊರೊನಾ ಟೆಸ್ಟ್‌ ಕಡ್ಡಾಯ!


Team Udayavani, Jul 4, 2021, 8:48 PM IST

Davanagere

„ಎಚ್‌.ಕೆ. ನಟರಾಜ

ದಾವಣಗೆರೆ: ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಲಸಿಕಾ ಕೇಂದ್ರಕ್ಕೆ ಬಂದವರು ಕಡ್ಡಾಯವಾಗಿ ಕೊರೊನಾ ಸೋಂಕು ಪರೀಕ್ಷೆಯನ್ನೂ ಮಾಡಿಸಿಕೊಳ್ಳುವಂತೆ ಆರೋಗ್ಯ ಸಿಬ್ಬಂದಿ ಸಾರ್ವಜನಿಕರ ಮೇಲೆ ಒತ್ತಡ ಹೇರುತ್ತಿರುವುದು ಬೆಳಕಿಗೆ ಬಂದಿದೆ.

ಆರೋಗ್ಯ ಇಲಾಖೆ ಕೊರೊನಾ ಲಕ್ಷಣಗಳಿದ್ದರೆ ಮಾತ್ರ ಕೆಲ ದಿನ ಲಸಿಕೆ ಬೇಡ ಎಂದಿದೆಯೇ ಹೊರತು ಕೊರೊನಾ ಲಸಿಕೆ ಪಡೆಯಲು ಕೊರೊನಾ ಸೋಂಕು ಪರೀಕ್ಷೆ ಕಡ್ಡಾಯ ಎಂದು ಎಲ್ಲಿಯೂ ಆದೇಶ ಹೊರಡಿಸಿಲ್ಲ. ಆದರೆ ಲಸಿಕಾ ಕೇಂದ್ರದ ಆರೋಗ್ಯ ಸಿಬ್ಬಂದಿ ಮಾತ್ರ ಲಸಿಕೆಗೆ ಬಂದವರನ್ನು ಕಡ್ಡಾಯವಾಗಿ ಕೊರೊನಾ ಸೋಂಕು ಪರೀಕ್ಷೆಗೊಳಪಡಿಸಿ ಗಂಟಲು ದ್ರವ ಸಂಗ್ರಹಿಸುತ್ತಿರುವುದು ಸಾರ್ವಜನಿಕರಿಗೆ ಕಿರಿಕಿರಿಯನ್ನುಂಟು ಮಾಡಿದೆ.

ಲಸಿಕೆ ಹಾಕಿಸಿಕೊಳ್ಳಲು ಬರುವ ಜನರನ್ನು ಅನಗತ್ಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ಬಗ್ಗೆ ಯಾರಾದರೂ ಪ್ರಶ್ನಿಸಿದರೆ, ಸೋಂಕು ಪರೀಕ್ಷೆಗೊಳಪಡಿಸಲು ಹಿರಿಯ ಅಧಿಕಾರಿಗಳಿಂದ ಮೌಖೀಕ ಆದೇಶವಿದೆ ಎನ್ನುತ್ತಿದ್ದಾರೆ. ಸಿಬ್ಬಂದಿಯ ಈ ನಡೆಯಿಂದ ಲಸಿಕೆ ಹಾಕಿಸಿಕೊಳ್ಳಲು ಕೆಲವರು ಹಿಂದೇಟು ಹಾಕುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಇದು ಮುಂದೆ ಲಸಿಕೆ ಗುರಿ ಸಾಧನೆಗೂ ಹಿನ್ನಡೆ ತರುವ ಅಪಾಯವೂ ಇದೆ ಎಂಬುದನ್ನು ಅಧಿಕಾರಿ ವರ್ಗ ಅರಿಯಬೇಕಾಗಿದೆ.

ಗುರಿ ಸಾಧನೆಗಾಗಿ ಪರೀಕ್ಷೆ: ಜಿಲ್ಲೆಯಲ್ಲಿ ಪ್ರತಿದಿನ ನಾಲ್ಕೈದು ಸಾವಿರ ಕೊರೊನಾ ಸೋಂಕು ಪರೀಕ್ಷೆಯಾಗುತ್ತಿತ್ತು. ಈಗ ಸೋಂಕು ಕಡಿಮೆಯಾಗುತ್ತಿದ್ದಂತೆ ಪರೀಕ್ಷೆಗೆ ಯಾರೂ ಮುಂದೆ ಬಾರದೇ ಇರುವುದರಿಂದ ಪ್ರತಿ ದಿನ ಒಂದು ಸಾವಿರ ಪರೀಕ್ಷೆ ಸಹ ಆಗುತ್ತಿಲ್ಲ.

ಕೊರೊನಾ ಪಾಸಿಟಿವ್‌ ಬಂದವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಸೇರಿಸಿ ಪರೀಕ್ಷೆಗೊಳಪಡಿಸಿದರೂ ಕನಿಷ್ಠ 2500 ಗುರಿ ತಲುಪಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಗುರಿ ಸಾಧನೆಗಾಗಿ ಕೊರೊನಾ ಲಸಿಕೆಗೆ ಬಂದವರನ್ನು ಕೋವಿಡ್‌ ಪರೀಕ್ಷೆಗೊಳಪಡಿಸುತ್ತಿದ್ದಾರೆ.

ಈ ರೀತಿಯ ಒತ್ತಡದ ಹಾಗೂ ಅನಗತ್ಯ ಸೋಂಕು ಪರೀಕ್ಷೆ ಅನೇಕರಿಗೆ ಕಿರಿಕಿರಿಯಾಗಿ ಪರಿಣಮಿಸಿದೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.