ಮೀಸಲಾತಿಯಿಂದ ಕೆಲವರಿಗೆ ಬರಸಿಡಿಲು

ಜಿಲ್ಲೆಯ 24 ಜಿಪಂ ಕ್ಷೇತ್ರಗಳ ಪೈಕಿ ಬಹುತೇಕ ಕಡೆ ಮೀಸಲಾತಿ ಬದಲು­ಪುನರಾಯ್ಕೆ ಆಸೆಗೆ ಎಳ್ಳು ನೀರು

Team Udayavani, Jul 4, 2021, 9:07 PM IST

969446565555656

ವೀರೇಂದ್ರ ನಾಗಲದಿನ್ನಿ

ಗದಗ: ಮುಂಬರುವ ಜಿಪಂ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಜಿಪಂ ಕ್ಷೇತ್ರಗಳ ಮೀಸಲಾತಿಯಿಂದ ಜಿಪಂ ಮಾಜಿ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷರಿಗೆ ಬರಸಿಡಿಲು ಬಡಿದಂತಾಗಿದೆ.

ಜಿಲ್ಲೆಯ 24 ಕ್ಷೇತ್ರಗಳ ಪೈಕಿ ಬಹುತೇಕ ಕ್ಷೇತ್ರಗಳ ಮೀಸಲಾತಿ ಬದಲಾವಣೆಯಾಗಿದ್ದು, ಬಹುತೇಕರು ಜಿಪಂಗೆ ಪುನರಾಯ್ಕೆ ಆಸೆಯನ್ನೇ ಕೈಬಿಡುವಂತಾಗಿದ್ದರೆ, ಇನ್ನಿತರರು ಕ್ಷೇತ್ರ ಹುಡುಕಾಡುವಂತಾಗಿದೆ. ಮೀಸಲಾತಿ ಸಂಕಟ: ಶತಾಯಗತಾಯ ಈ ಬಾರಿ ಜಿಪಂ ಪ್ರವೇಶಿಸಬೇ ಕೆಂದು ಕನಸು ಕಂಡವರಿಗೆ ಮೀಸಲಾತಿ ಸಂಕಟ ಎದುರಾಗಿದೆ.

ಗದಗ ಜಿಪಂ ವ್ಯಾಪ್ತಿಯ ಒಟ್ಟು 24 ಕ್ಷೇತ್ರಗಳಲ್ಲಿ 13 ಕ್ಷೇತ್ರಗಳು ಮಹಿಳೆಯರಿಗೆ ಮೀಸಲಾಗಿವೆ. ಜತೆಗೆ ಸಾಮಾನ್ಯ 12 ಸ್ಥಾನಗಳಲ್ಲಿ 6 ಕ್ಷೇತ್ರಗಳು ಮಹಿಳೆಯರ ಪಾಲಾಗಿವೆ. ಅನುಸೂಚಿತ ಜಾತಿಗೆ ಒಟ್ಟು 4 ಕ್ಷೇತ್ರಗಳು ಲಭ್ಯವಾಗಿದ್ದು, ಅದರಲ್ಲಿ 3 ಕ್ಷೇತ್ರಗಳು ಮಹಿಳೆಯರಿಗೆ ಮೀಸಲಾಗಿವೆ. ಅನುಸೂಚಿತ ಪಂಗಡದ 2 ಕ್ಷೇತ್ರಗಳಲ್ಲಿ 1ಮಹಿಳಾ ಮೀಸಲಾಗಿದೆ. ಹಿಂದುಳಿದ ವರ್ಗ “ಅ’ ಸಮುದಾಯದವರಿಗೆ 5 ಕ್ಷೇತ್ರಗಳಲ್ಲಿ 2 ಮಹಿಳೆಯರಿಗೆ ಲಭಿಸಿವೆ. ಹಿಂದುಳಿದ ವರ್ಗ “ಬ’ ಕ್ಕೆ ಸಿಕ್ಕಿರುವ ಒಂದೇ ಒಂದು ಕ್ಷೇತ್ರ ಮಹಿಳೆಗೆ ಮೀಸಲಾಗಿದೆ.

ಕ್ಷೇತ್ರ ಹುಡುಕುವ ಅನಿವಾರ್ಯತೆ: 2016-2021ರ ಜಿಪಂ ಅಧಿ ಕಾರ ಅವ ಧಿಯಲ್ಲಿ ಬಹುಮತ ಪಡೆದಿದ್ದ ಕಾಂಗ್ರೆಸ್‌ ಪಕ್ಷದಿಂದ ಐವರು ಜಿಪಂ ಅಧ್ಯಕ್ಷ-ಉಪಾಧ್ಯಕ್ಷರಾಗಿದ್ದರು. ವಾಸಣ್ಣ ಕುರಡಗಿ, ಎಸ್‌.ಪಿ.ಬಳಿಗಾರ, ಸಿದ್ದು ಪಾಟೀಲ, ರಾಜೂಗೌಡ ಕೆಂಚನಗೌಡ್ರ, ಈರಪ್ಪ ಈಶ್ವರಪ್ಪ ನಾಡಗೌಡ್ರ ಅವರು ಅಧ್ಯಕ್ಷರಾಗಿದ್ದರು. ಇದೇ ಅವಧಿ ಯಲ್ಲಿ ಕ್ರಮವಾಗಿ ರೂಪಾ ಅಂಗಡಿ, ಶಕುಂತಲಾ ರವೀಂದ್ರ ಮೂಲಿಮನಿ, ಮಲ್ಲವ್ವ ಬಿಚ್ಚಾರ, ಮಂಜಳಾ ಹುಲ್ಲಣ್ಣವರ ಅವರು ಉಪಾಧ್ಯಕ್ಷರಾಗಿದ್ದರು. ಅದರೊಂದಿಗೆ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು, ವಿಪಕ್ಷ ಸ್ಥಾನದಲ್ಲಿ ಗುರುತಿಸಿಕೊಂಡಿದ್ದವರಿಗೂ ಕ್ಷೇತ್ರ ಕೈತಪ್ಪಿದಂತಾಗಿದೆ. ಹೀಗಾಗಿ ಕೆಲವರು ತಮಗೆ ಅನುಕೂಲಕರವಾದ ಕ್ಷೇತ್ರಗಳತ್ತ ಪಲಾಯನ ಬಯಸಿದ್ದಾರೆ. ಇನ್ನು ಕೆಲವರು ಮಹಿಳಾ ಮೀಸಲಾತಿಯ ತಮ್ಮ ಕ್ಷೇತ್ರಗಳಿಗೆ ಕುಟುಂಬದ ಮಹಿಳಾ ಸದಸ್ಯರನ್ನು ಚುನಾವಣಾ ಅಖಾಡಕ್ಕಿಳಿಸಲು ಚಿಂತನೆ ಆರಂಭಿಸಿದ್ದಾರೆ. ಈ ಬಗ್ಗೆ ಕುಟುಂಬಸ್ಥರೊಂದಿಗೆ ಚರ್ಚೆಗಳು ಬಿರುಸಾಗಿ ಸಾಗಿವೆ ಎಂದೇ ಹೇಳಲಾಗಿದೆ.

ಮೀಸಲು ತಂದ ಅದೃಷ್ಟ: ಈ ಬಾರಿ ಜಿಪಂ ಚುನಾವಣೆಗೆ ಉದ್ದೇಶಿತ ಕರಡು ಮೀಸಲಾತಿ ಕೆಲವರ ಪಾಲಿಗೆ ಅದೃಷ್ಟ ಮತ್ತೂಮ್ಮೆ ಮನೆ ಬಾಗಿಲಿಗೆ ಬಂದಂತಾಗಿದೆ. ಕಳೆದ ಬಾರಿ ಹಿಂದುಳಿದ “ಬ’ ವರ್ಗಕ್ಕೆ ಮೀಸಲಾಗಿದ್ದ ಶಿಗ್ಲಿ ಜಿಪಂ ಕ್ಷೇತ್ರ ಈ ಬಾರಿ “ಸಾಮಾನ್ಯ’ವಾಗಿದೆ. ಹೆಬ್ಟಾಳ ಸಾಮಾನ್ಯ ಕ್ಷೇತ್ರ ಈಗ ಇಟಗಿ(ಹೆಬ್ಟಾಳ) ಸಾಮಾನ್ಯ ಕ್ಷೇತ್ರವಾಗಿದೆ. ಕಳೆದ ಬಾರಿ ಸಾಮಾನ್ಯ ಮಹಿಳೆಯಾಗಿದ್ದ ಬೆಳ್ಳಟ್ಟಿ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಇದು ಆಯಾ ಕ್ಷೇತ್ರದ ಪ್ರತಿನಿಧಿಗಳಿಗೆ ಅನುಕೂಲಕರವಾಗಿದ್ದರೆ, ಇನ್ನಿತರರ ಕಣ್ಣು ಕೆಂಪಾಗಿಸಿರುವುದು ಸುಳ್ಳಲ್ಲ.

ಟಾಪ್ ನ್ಯೂಸ್

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.