ಇಂದಿನಿಂದ ಭಕ್ತ ರಿಗೆ ಶರಣರ ದರ್ಶನ
Team Udayavani, Jul 5, 2021, 8:48 PM IST
ಕಲಬುರಗಿ: ಈ ಭಾಗದ ಆರಾಧ್ಯದೈವ, ತ್ಯಾಗದ ಸಂಕೇತ, ಮಹಾದಾಸೋಹಿ ಶರಣಬಸವೇಶ್ವರ ದೇಗುಲವು ಸೋಮವಾರದಿಂದ ಭಕ್ತರ ದರ್ಶನಕ್ಕಾಗಿ ತೆರೆಯಲಿದೆ. ದೇವಾಲಯದ ಸ್ವಯಂ ಸೇವಕರು ಮತ್ತು ಸಿಬ್ಬಂದಿ ದೇವಾಲಯ ಮತ್ತು ಸುತ್ತಮುತ್ತಲಿನ ಪ್ರದೇಶ ಮತ್ತು ಶರಣ ಬಸವೇಶ್ವರ ದೇಗುಲದ ವಿಸ್ತಾರವಾದ ಸಂಕೀರ್ಣದಲ್ಲಿಯೂ ಸ್ವತ್ಛತೆ ಕಾರ್ಯ ಕೈಗೊಂಡಿದ್ದಾರೆ.
ಕೋವಿಡ್-19 ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಸರಕಾರ ಹೇರಿದ ನಿರ್ಬಂಧನೆಗಳನ್ನು ಅನುಸರಿಸಿ ಏಪ್ರಿಲ್ 23 ರಿಂದ ದರ್ಶನ ಭಾಗ್ಯ ನಿಲ್ಲಿಸಲಾಗಿತ್ತು. ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾ ದಾಸೋಹ ಪೀಠಾ ಧಿಪತಿಗಳಾದ ಪೂಜ್ಯ ಡಾ| ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ರಾದ ಮಾತೋಶ್ರೀ ಡಾ| ದಾûಾಯಿಣಿ ಅವ್ವ ಅವರು, ರಾಜ್ಯ ಸರಕಾರವು ವಿ ಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಅನು ಸರಿಸಲಾಗುವುದು ಎಂದಿದ್ದಾರೆ.
ಭಕ್ತರು ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಗೊಳಿಸಿ ಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದಿದ್ದಾರೆ. ಪೂಜ್ಯ ಡಾ| ಅಪ್ಪ ಮತ್ತು ಮಾತೋಶ್ರೀ ಡಾ| ಅವ್ವ ಭಕ್ತರಿಗೆ ಶರಣ ಬಸವೇಶ್ವರರ ದರ್ಶನಾಶೀರ್ವಾದ ಪಡೆಯಲು ಮತ್ತು ದೇಗುಲಕ್ಕೆ ಭೇಟಿ ನೀಡುವಾಗ ಸರಕಾರ ನಿಗದಿಪಡಿಸಿದ ಮಾನದಂಡಗಳನ್ನು ಉಲ್ಲಂಘಿ ಸಬಾರದು. ದೇವಾಲಯದಲ್ಲಿ ಅ ಧಿಕಾರಿ ಗಳೊಂದಿಗೆ ಸಹಕರಿಸಿ ಭಕ್ತರ ಸುರಕ್ಷತೆಗಾಗಿ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ. ಇಡೀ ದೇವಾಲಯ ಸಂಕೀರ್ಣ ಮತ್ತು ದೇವಾಲಯವನ್ನು ಸ್ವಯಂಸೇವಕರು ಮತ್ತು ದೇಗುಲದ ಸಿಬ್ಬಂದಿಗಳು ಸ್ವತ್ಛತೆ ಕಾರ್ಯ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
MUST WATCH
ಹೊಸ ಸೇರ್ಪಡೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ
Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
ʼಸಲಾರ್ʼನ ʼಶಿವ್ ಮನ್ನಾರ್ʼಗೂ ʼಕೆಜಿಎಫ್ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್
Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್, ಸಾವಿನ ಸಂಖ್ಯೆ 90ಕ್ಕೆ ಏರಿಕೆ