ಕಾವೇರಿ ಮೇಲಿನ ಮೋಹ ಹೆಚ್ಚಿಸಿಕೊಳ್ಳುತ್ತಿರುವ ತಮಿಳುನಾಡು


Team Udayavani, Jul 6, 2021, 6:20 AM IST

ಕಾವೇರಿ ಮೇಲಿನ ಮೋಹ ಹೆಚ್ಚಿಸಿಕೊಳ್ಳುತ್ತಿರುವ ತಮಿಳುನಾಡು

ಕಾವೇರಿ ನದಿ ನೀರು ವಿಚಾರದಲ್ಲಿ ಸದಾ ಕರ್ನಾಟಕವೂ ಸೇರಿದಂತೆ ನೆರೆ ರಾಜ್ಯಗಳ ಜತೆ ಜಗಳವಾಡಿಕೊಂಡು ಬಂದಿರುವ ತಮಿಳುನಾಡು ಸರಕಾರಕ್ಕೆ ಮಾತುಕತೆ ಎಂಬುದು ರುಚಿಸಲ್ಲ. ಇದು ಈಗಲ್ಲ, ಮೊದಲಿನಿಂದಲೂ ಆ ರಾಜ್ಯದ ವಿಚಾರದಲ್ಲಿ ಹೇಳಬಹುದಾದ ಅತ್ಯಂತ ನಿಖರವಾದ ಮಾತು. ತೀರಾ ಉತ್ಪ್ರೇಕ್ಷೆಯಾಗಿ ಹೇಳುವುದಾದರೆ, ಜಗತ್ತಿನ ಯಾವುದೇ ಜಲವಿವಾದಗಳನ್ನು ಬೇಕಾದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು. ಆದರೆ ತಮಿಳುನಾಡು ಮಾತ್ರ, ಕಾವೇರಿ ಎಂದ ಕೂಡಲೇ ಮೋಹಕ್ಕೆ ಬಿದ್ದವರಂತೆ ವರ್ತಿಸುತ್ತದೆ. ಹೀಗಾಗಿಯೇ ಈ ರಾಜ್ಯಕ್ಕೆ ಮಾತುಕತೆ ಎಂದಿಗೂ ಅಪ್ಯಾಯಮಾನವಾಗದು.

ಅಲ್ಲಿ ಸರಕಾರಗಳು ಬದಲಾದರೂ ಕಾವೇರಿ ವಿಚಾರದಲ್ಲಿನ ಧೋರಣೆ ಮಾತ್ರ ಬದಲಾಗಲ್ಲ. ಅಲ್ಲಿನ ರಾಜಕೀಯ ಪಕ್ಷಗಳ ರೆ ಎಲ್ಲ ವಿಷಯಗಳ ಸಂಬಂಧ ವೈರುಧ್ಯಗಳಿದ್ದರೂ ಕಾವೇರಿ ನದಿ ವಿಚಾರದಲ್ಲಿ ಮಾತ್ರ ಒಂದೇ ಧೋರಣೆ ಇರಿಸಿಕೊಂಡಿರುತ್ತವೆ. ಅಷ್ಟೇ ಅಲ್ಲ, ಕೆಲವೊಮ್ಮೆ ಕಾವೇರಿ ಜಲ ವಿವಾದವನ್ನೇ ಮುಂದಿಟ್ಟುಕೊಂಡು ಅಲ್ಲಿನ ಪಕ್ಷಗಳು ಚುನಾವಣೆಯಲ್ಲಿ ಗೆದ್ದು ಬಂದ ಉದಾಹರಣೆಗಳೂ ಇವೆ.

ಇಂಥ ಹೊತ್ತಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಮೇಕೆದಾಟು ಜಲಾಶಯದ ವಿಚಾರದಲ್ಲಿ ದ್ವಿಪಕ್ಷೀಯ ಮಾತುಕತೆ ಮೂಲಕವೇ ವಿವಾದ ಬಗೆಹರಿಸಿಕೊಳ್ಳೋಣ. ನೀವು ಈ ಯೋಜನೆಗೆ ವಿರೋಧ ಮಾಡಬೇಡಿ. ಇದರಿಂದ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಉಪಯೋಗವಾಗುತ್ತದೆ. ಬೆಂಗಳೂರಿಗೆ ಕುಡಿಯುವ ನೀರು ಪೂರೈಸಿದಂತೆಯೂ ಆಗುತ್ತದೆ. ಒಪ್ಪಿಗೆ ನೀಡಿ ಎಂದು ಪತ್ರ ಮುಖೇನ ಮನವಿ ಮಾಡಿದ್ದರು. ಆದರೆ ಪತ್ರ ತಲುಪಿದ ಮಾರನೇ ದಿನವೇ ಉತ್ತರ ಕೊಟ್ಟಿರುವ, ಇತ್ತೀಚೆಗಷ್ಟೇ ಸಿಎಂ ಆಗಿರುವ ಎಂ.ಕೆ. ಸ್ಟಾಲಿನ್‌ ಅವರು, ತಮಿಳುನಾಡಿನ ಎಂದಿನ ರಾಜಕಾರಣಿಗಳಂತೆ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಲು ಸಾಧ್ಯವೇ ಇಲ್ಲ. ಈ ವಿಚಾರದಲ್ಲಿ ನಮ್ಮ ನಿಲುವು ಬದಲಾವಣೆ ಮಾಡಿಕೊಳ್ಳಲ್ಲ ಎಂದು ಬಿಟ್ಟರು.

ವಿಚಿತ್ರವೆಂದರೆ, ಸಿಎಂ ಯಡಿಯೂರಪ್ಪ ಅವರು ನೀಡಿದ ಮಾತುಕತೆ ಆಹ್ವಾನದ ಬಗ್ಗೆ ಮಾತನ್ನೇ ಆಡದ ಸ್ಟಾಲಿನ್‌, ಕೇವಲ ಮೇಕೆ ದಾಟು ಬಗ್ಗೆ ಪ್ರಸ್ತಾವಿಸಿ, ಯೋಜನೆಯಿಂದ ತಮಿಳುನಾಡಿಗೆ ಅಪಾಯಗಳಿವೆ. ಹೀಗಾಗಿ ನಾವು ಯೋಜನೆಗೆ ಆಸ್ಪದ ಕೊಡುವುದಿಲ್ಲ ಎಂದರು. ಆದರೆ ಕರ್ನಾಟಕದ ಸಿಎಂ ಜತೆ ಒಂದು ಬಾರಿ ಕುಳಿತು ಮಾತನಾಡಿದ್ದರೆ, ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಬಹುದಿತ್ತು ಎಂಬ ಕನಿಷ್ಠ ಪ್ರಜ್ಞೆಯನ್ನೂ ತೋರಗೊಡಲಿಲ್ಲ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದಂತೆ, ತಮಿಳುನಾಡಿನ ರಾಜಕೀಯ ಪಕ್ಷಗಳಿಗೆ ಕಾವೇರಿ ಕುರಿತ ರಾಜಕೀಯ ಬೇಕೇಬೇಕು. ಹೀಗಾಗಿಯೇ ಸಣ್ಣ ಪುಟ್ಟ ಸಂಗತಿಗಳನ್ನೂ ಹೊಸ ಸರಕಾರ ದೊಡ್ಡದು ಮಾಡುತ್ತಿದೆ. ನಾವಂತೂ ಕಾನೂನು ಸಮರ ಮುಂದುವರಿಸುತ್ತೇವೆ ಎಂದು ಹೇಳಿರುವುದು ಸರಿಯಾಗಿಯೇ ಇದೆ. ಅಂತೆಯೇ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರೂ, ಮೇಕೆದಾಟು ವಿಚಾರದಲ್ಲಿ ತಮಿಳುನಾಡಿನ ಸಮ್ಮತಿ ಕೇಳಬೇಕಾಗಿರಲಿಲ್ಲ. ಅದು ನಮ್ಮ ಯೋಜನೆ, ಮುಂದುವರಿಸಿಕೊಂಡು ಹೋದರೆ ಸಾಕು ಎಂದಿದ್ದಾರೆ. ಅದೇನೇ ಇರಲಿ, ವಿವಾದವೇ ಅಲ್ಲದ ಮೇಕೆದಾಟು ವಿಚಾರವನ್ನು ವಿವಾದವನ್ನಾಗಿ ಮಾಡಲು ಹೊರಟಿರುವುದರ ಹಿಂದೆ ತಮಿಳುನಾಡು ಸರಕಾರದ ರಾಜಕೀಯ ದುರುದ್ದೇಶವೇ ಇದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.