ನವಜಾತ ಶಿಶು ಕೊಲೆ ಕೇಸು: ದಂಪತಿ ಬಂಧನ


Team Udayavani, Jul 6, 2021, 2:24 PM IST

ನವಜಾತ ಶಿಶು ಕೊಲೆ ಕೇಸು: ದಂಪತಿ ಬಂಧನ

ಚಿಂತಾಮಣಿ: ನವಜಾತ ಹೆಣ್ಣು ಶಿಶುವನ್ನು ಉಸಿರುಗಟ್ಟಿ ಸಾಯಿಸಿ, ಸಾರ್ವಜನಿಕ ಆಸ್ಪತ್ರೆಯ ಶೌಚಾಲಯದ ಕಿಟಕಿ ಕಂಬಿಗೆ ಕಟ್ಟಿದ್ದ ಪ್ರಕರಣ ಸಂಬಂಧ ದಂಪತಿಯನ್ನು ಸೋಮವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಗೇಪಲ್ಲಿ ತಾಲೂಕಿನ ಚಾಕವೇಲು ನಿವಾಸಿ  ಮಮತಾ ಮತ್ತು ಆಕೆಯ ಪತಿ ವೇಣುಗೋಪಾಲರೆಡ್ಡಿ ಬಂಧಿತರು. ಮಗುವನ್ನು ತಾವೇ ಕೊಲೆ ಮಾಡಿರುವುದಾಗಿ ಆರೋಪಿಗಳನ್ನು ತಪ್ಪೊಪ್ಪಿಕೊಂಡಿದ್ದಾರೆ.

ಗರ್ಭಿಣಿ ಆಗಿದ್ದನ್ನು ಯಾರಿಗೂ ತಿಳಿಸಿರಲಿಲ್ಲ: ನಾನು ಗರ್ಭಿಣಿ ಆಗಿದ್ದರ ಬಗ್ಗೆ ಪ್ರಾರಂಭದಲ್ಲಿ ಪೋಷಕರಿಗೆ ಆಗಲಿ, ಇತರರಿಗೂ ತಿಳಿಸಿರಲಿಲ್ಲ. ಇತ್ತೀ ಚಿಗೆ ಗಂಡನಿಗೆ ತಿಳಿಸಿದ್ದೆ. ಏಕಾಏಕಿ ಗರ್ಭ ಧರಿಸಿದ್ದು ಗೊತ್ತಾದರೆ ಅವಮಾನಕ್ಕೆ ಒಳಗಾಗುತ್ತೇನೆ ಹಾಗೂ ಹೆಣ್ಣು ಮಗು ಜನಿಸಿದ್ದರಿಂದ ಹುಟ್ಟಿದ ಕೂಡಲೇ ಇಬ್ಬರು ಸೇರಿ ನೇಣು ಬಿಗಿದು ಕೊಲೆ ಮಾಡಿದ್ದಾಗಿ ಮಮತಾ ಪೊಲೀಸರಿಗೆಹೇಳಿಕೆಕೊಟ್ಟಿದ್ದಾರೆ.

ಹಲವು ಅನುಮಾನ: ಇನ್ನು ಪ್ರಕರಣದ ಸುತ್ತ ಹತ್ತಾರು ಅನುಮಾನ ಹುಟ್ಟುಕೊಳ್ಳುತ್ತಿದ್ದು, ಆರೋಪಿ ಮಹಿಳೆ ಗರ್ಭಧರಿಸಿರುವ ಬಗ್ಗೆ ಪತಿಗೆ, ಅತ್ತೆಗೆ, ಆಕೆಯ ಪೋಷಕರಿಗೂ ತಿಳಿಸದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೆ, ಈ ಹಿಂದೆ ಮಮತಾಳ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿದ್ದರಿಂದ ಮಗುವನ್ನು ಕೊಲೆ ಮಾಡಿರಬಹುದು ಎಂದು ಅನುಮಾನಗಳೂ ಹುಟ್ಟಿಕೊಂಡಿವೆ.

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲು: ಜು.3 ರಂದು ಹೊಟ್ಟೆ ನೋವು ಎಂದು ಪತಿ ಮತ್ತು ಅತ್ತೆಯೊಂದಿಗೆ ಆಸ್ಪತ್ರೆಗೆ ಬಂದ ಮಮತಾ ಶೌಚಾಲಯದಲ್ಲಿ ಹೆರಿಗೆ ಆಗಿದ್ದನ್ನು ಕಂಡು ಪತಿಗೆ ಹೇಳಿ ಮಗುವನ್ನು ಸಾಯಿಸಿದ್ದಾಳೆ. ಆದರಿಂದಮಗು ಕೊಲೆಯಲ್ಲಿ ಪತಿಗೂ ಪಾಲು ಇದೆ ಎಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಥಳ ಮಹಜರು: ಎಸ್ಪಿ ಮಿಥುನ್‌ ಕುಮಾರ್‌, ಚಿಂತಾಮಣಿ ಡಿವೈಎಸ್ಪಿ ವಿ.ಲಕ್ಷ್ಮಯ್ಯ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆ ಪಿಎಸ್‌ಐ ಜೆ.ಎನ್‌.ಆನಂದ್‌ಕುಮಾರ್‌ ನೇತೃತ್ವದ ತಂಡಆರೋಪಿಗಳನ್ನು ಬಂಧಿಸಿ ಸೋಮವಾರ ನಗರದ ಆಸ್ಪತ್ರೆಯ ಬಳಿ ಸ್ಥಳ ಮಹಜರು ಮಾಡಿ ಮಹಿಳೆಯ ಬಳಿ ಹೇಳಿಕೆ ಪಡೆದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ದೂರು ದಾಖಲಾದ 24 ಗಂಟೆಯೊಳಗೆ ವೈಜ್ಞಾನಿಕವಾಗಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಮಾಡಿರುವ ನಗರ ಠಾಣೆ ಪಿಎಸ್‌ಐ ಜೆ.ಎನ್‌. ಆನಂದ್‌ಕುಮಾರ್‌, ಅಪರಾಧ ವಿಭಾಗದ ಸಿಬ್ಬಂದಿನಾಗಭೂಷಣ್‌, ಚಂದ್ರಕುಮಾರ್‌, ಸುನಿತಾ, ರವೀಂದ್ರ, ವಿಶ್ವನಾಥ್‌ ಅವರ ಕಾರ್ಯವನ್ನು ಎಸ್ಪಿ ಮಿಥುನ್‌ಕುಮಾರ್‌ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.