ಐಸಿಐಸಿಐ ಬ್ಯಾಂಕ್ ನ ಎಟಿಎಂ, ಚೆಕ್ ಬುಕ್ ನಿಯಮಗಳ ಬದಲಾವಣೆ ಆಗಸ್ಟ್ ನಿಂದ ಅನ್ವಯ


Team Udayavani, Jul 6, 2021, 8:19 PM IST

icici-bank-changed-the-service-charges-of-atm-chequebook-cash-withdrawal-from-august-1

ನವ ದೆಹಲಿ : ತಿಂಗಳ ಆರಂಭದಿಂದ ಅಂದರೇ ಜುಲೈ 1 ರಿಂದ ಕೆಲವು ಬ್ಯಾಂಕಿಂಗ್ ವಹಿವಾಟಿನಲ್ಲಿ ಬದಲಾವಣೆಗಳು ಆಗಿವೆ. ಆದರೇ, ಕೆಲವು ಬ್ಯಾಂಕ್ ಗಳು ಈ ಬದಲಾವಣೆಯನ್ನು ಮುಂದೂಡಿವೆ.  ಆ ಬ್ಯಾಮಕ್ ಗಳ ಪೈಕಿ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ಕೂಡ ಒಂದು.

ಐಸಿಐಸಿಐ ಬ್ಯಾಂಕ್ ತನ್ನ ಗ್ರಾಹಕರಿಗೆ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ನಗದು ವಹಿವಾಟು, ಎಟಿಎಂ ಇಂಟರ್ ಚಾರ್ಜ್ ಮತ್ತು ಚೆಕ್ ಬುಕ್ ಶುಲ್ಕದ ದರವನ್ನು ಬ್ಯಾಂಕ್ ಪರಿಷ್ಕರಿಸಲಿದೆ ಎಂದು ಮಾಹಿತಿ ನೀಡಿದೆ.

ಪರಿಷ್ಕೃತ ಶುಲ್ಕಗಳು ಆಗಸ್ಟ್ 1, 2021 ರಿಂದ ಅನ್ವಯವಾಗುತ್ತವೆ. ನಗದು ವಹಿವಾಟು ಶುಲ್ಕದ ಮಿತಿಯಲ್ಲಿನ ಬದಲಾವಣೆಯು ಖಾತೆಯ ಪ್ರಕಾರಕ್ಕೆ ಅನುಗುಣವಾಗಿರುತ್ತದೆ. ಹಾಗಾದರೆ ನಿಮ್ಮ ಖಾತೆಯಲ್ಲಿ ಯಾವ ಸೇವೆಗೆ ಎಷ್ಟು ಶುಲ್ಕ ವಿಧಿಸಲಾಗುವುದು ಎಂದು ಐಸಿಐಸಿಐ ಬ್ಯಾಂಕ್ ತನ್ನ ಅಧಿಕೃತ ವೆಬ್‌ ಸೈಟ್ ಮೂಲಕ ತಿಳಿಸಿದೆ.

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿಂದು 4992 ಸೋಂಕಿತರು ಗುಣಮುಖ; 3104 ಹೊಸ ಪ್ರಕರಣ ಪತ್ತೆ

ಇನ್ನು,  ಪ್ರಸ್ತುತ, ಐಸಿಐಸಿಐ ಬ್ಯಾಂಕ್ ಖಾತೆದಾರರು ಒಂದು ವರ್ಷದಲ್ಲಿ 20 ಚೆಕ್ ಲೀವ್ಸ್ ಹೊಂದಿರುವ ಚೆಕ್ ಬುಕ್ ನನ್ನು ಉಚಿತವಾಗಿ ಪಡೆಯುತ್ತಿದ್ದರು. ಅದರ ನಂತರ ಹೆಚ್ಚಿನ ಚೆಕ್ ಲೀವ್ಸ್ ಅಗತ್ಯವಿದ್ದರೆ, ಗ್ರಾಹಕರು 10 ಲೀವ್ಸ್ ಗಳನ್ನು ಹೊಂದಿರುವ ಚೆಕ್ ಬುಕ್ ಗಾಗಿ  20 ರೂ. ಪಾವತಿಸಬೇಕಾಗಿತ್ತು. ಆದರೆ ಈಗ ಒಂದು ವರ್ಷದಲ್ಲಿ 25 ಚೆಕ್ ಲೀವ್ಸ್ ಗಳೊಂದಿಗೆ ಉಚಿತ ಚೆಕ್ ಬುಕ್ ಪಡೆಯಬಹುದಾಗಿದೆ. ಅದರ ನಂತರ ಶುಲ್ಕಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಅಂದರೆ, 10 ಚೆಕ್ ಲೀವ್ಸ್ ಪಡೆಯಲು  20 ರೂಪಾಯಿ ಪಾವತಿಸಬೇಕಾಗುತ್ತದೆ.

ಎಟಿಎಂ ಇಂಟರ್ ಚಾರ್ಜ್ ಶುಲ್ಕಗಳು (ಐಸಿಐಸಿಐ ಅಲ್ಲದ ಬ್ಯಾಂಕ್ ಎಟಿಎಂಗಳಿಂದ ಹಣ ವರ್ಗಾವಣೆ ಅಥವಾ ಹಿಂಪಡೆದರೆ ) :

  1. , ಒಂದು ತಿಂಗಳಲ್ಲಿ 6 ಮೆಟ್ರೋ ನಗರಗಳಲ್ಲಿ (ಮುಂಬೈ, ದೆಹಲಿ, ಚೆನ್ನೈ, ಕೋಲ್ಕತಾ, ಬೆಂಗಳೂರು ಮತ್ತು ಹೈದರಾಬಾದ್) ನೀವು ಯಾವುದೇ ಐಸಿಐಸಿಐ ಅಲ್ಲದ ಬ್ಯಾಂಕ್ ಎಟಿಎಂ ನಿಂದ ಹಣವನ್ನು ಹಿಂಪಡೆದುಕೊಂಡರೆ, ಮೊದಲ ಮೂರು ವಹಿವಾಟುಗಳು ಉಚಿತವಾಗಿರುತ್ತದೆ. ಇದು ಹಣಕಾಸು ಮತ್ತು ಹಣಕಾಸೇತರ ವಹಿವಾಟುಗಳನ್ನು ಕೂಡ ಒಳಗೊಂಡಿರುತ್ತದೆ.
  2. ಮೆಟ್ರೋ ನಗರಗಳನ್ನು ಹೊರತಾಗಿ ಉಳಿದೆಡೆ, ಒಂದು ತಿಂಗಳಲ್ಲಿ ಮೊದಲ 5 ವಹಿವಾಟುಗಳು ಉಚಿತವಾಗಿರಲಿದ್ದು, ಅದರ ನಂತರ, ಯಾವುದೇ ಹಣಕಾಸಿನ ವಹಿವಾಟಿಗೆ 20 ರೂ, ಮತ್ತು ಯಾವುದೇ ಹಣಕಾಸಿನೇತರ ವಹಿವಾಟು 8.5 ರೂ. ಶುಲ್ಕ ವಿಧಿಸಲಾಗುತ್ತದೆ.

ಇದನ್ನೂ ಓದಿ : ಕೋವಿಡ್ ಸೋಂಕು ಹೆಚ್ಚಳ: ಮಹಾರಾಷ್ಟ್ರ ಸತಾರಾ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.