ಸೂಪರ್‌ ಮಾರ್ಕೆಟ್‌ನಲ್ಲಿ ಕಾಂಕ್ರೀಟ್‌ ರಸ್ತೆ ಸದ್ದು


Team Udayavani, Jul 7, 2021, 9:33 AM IST

ಸೂಪರ್‌ ಮಾರ್ಕೆಟ್‌ನಲ್ಲಿ ಕಾಂಕ್ರೀಟ್‌ ರಸ್ತೆ ಸದ್ದು

ಧಾರವಾಡ: ಹುಬ್ಬಳ್ಳಿಯ ಸೂಪರ್‌ ಮಾರ್ಕೆಟ್‌ (ಜನತಾ ಬಜಾರ್‌) ಹು-ಧಾ ಸ್ಮಾರ್ಟ್‌ ಸಿಟಿ ಯೋಜನೆಯಡಿ ಅತ್ಯಾಧುನಿಕ ಮಾರುಕಟ್ಟೆಯಾಗಿ ಅಭಿವೃದ್ಧಿ ಹೊಂದುವತ್ತ ಸಾಗಿದರೆ ಧಾರವಾಡದ ಸೂಪರ್‌ ಮಾರುಕಟ್ಟೆ ಮಾತ್ರ ಅತ್ತ ಸೂಪರೂ ಆಗದೇ ಇತ್ತ ಸ್ಮಾಟ್‌ ಆಗದೇ ಪಾಪರ್‌ ಆಗಿಯೇ ಉಳಿದಿದ್ದು, ಸದ್ಯಕ್ಕೆ ಈ ಮಾರುಕಟ್ಟೆಯಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕಾಗಿ ಜೆಸಿಬಿ ಯಂತ್ರಗಳ ಸದ್ದು ಮಾತ್ರ ಜೋರಾಗಿ ಕೇಳುವಂತಾಗಿದೆ.

ಹೌದು. ಸೂಪರ್‌ ಮಾರುಕಟ್ಟೆಯನ್ನು ಅಭಿವೃದ್ಧಿ ಮಾಡಿ, ಸೂಪರ್‌ ಮಾಡಲು ನೂರಾರು ಕೋಟಿ ರೂ.ಗಳ ಯೋಜನೆ ಸಿದ್ಧವಾಗಿದ್ದು ಬಿಟ್ಟರೆ ಈವರೆಗೂ ಧಾರವಾಡಿಗರ ಈ ಕನಸು ನನಸಾಗೆ ಇಲ್ಲ. ಆದರೆ ಈಗ ಮಾರುಕಟ್ಟೆಯ ಮುಖ್ಯ ಹಾಗೂ ಒಳರಸ್ತೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದ್ದು, ಇದರಿಂದ ಮಾರುಕಟ್ಟೆಯಲ್ಲಿನ ಕೆಲ ಅಂಗಡಿಗಳ ತೆರವು ಕಾರ್ಯಾಚರಣೆ ಸಾಗಿದೆ. ಇದು ಕೆಲ ವ್ಯಾಪಾರಸ್ಥರಲ್ಲಿ ಆತಂಕ ಮೂಡಿಸಿದೆ.

ಕಾಂಕ್ರೀಟ್‌ ರಸ್ತೆ ನಿರ್ಮಾಣ: ಮಾರುಕಟ್ಟೆ ಸೂಪರ್‌ ಮಾಡುವ ಪ್ರಸ್ತಾವಗಳಿಗೆ ಮನ್ನಣೆ ಸಿಗದ ಕಾರಣ ಮಾರುಕಟ್ಟೆಯ ಒಳರಸ್ತೆಗಳ ಸುಧಾರಣೆ, ಗಟಾರು ನಿರ್ಮಾಣ ಕಾರ್ಯಕ್ಕೆ ಕಳೆದ ವರ್ಷದ ಆರಂಭದಲ್ಲಿ ಶಾಸಕ ಅರವಿಂದಬೆಲ್ಲದ ಚಾಲನೆ ನೀಡಿದ್ದರು. ಅದರನ್ವಯ98 ಲಕ್ಷ ಹಾಗೂ 31 ಲಕ್ಷ ರೂ.ಗಳ ಎರಡುಪ್ರತ್ಯೇಕ ಕಾಮಗಾರಿಗಳ ಅಡಿ ಮಾರುಕಟ್ಟೆಯ ಪ್ರಮುಖ ನಾಲ್ಕು ಒಳರಸ್ತೆಗಳ ಕಾಂಕ್ರೀಟ್‌ ರಸ್ತೆ ನಿರ್ಮಾಣ ಹಾಗೂ ಗಟಾರು ನಿರ್ಮಾಣ ಕಾರ್ಯ ಸಾಗಿದೆ. ಈಗಾಗಲೇ ಒಂದು ಬದಿ ಕಾಂಕ್ರೀಟ್‌ ರಸ್ತೆ, ಗಟಾರು ನಿರ್ಮಾಣವೂ ಆಗಿದೆ. ಮಾರುಕಟ್ಟೆಯ ಪ್ರಮುಖ ರಸ್ತೆಯಲ್ಲಿಕಾಂಕ್ರೀಟ್‌ ರಸ್ತೆ ನಿರ್ಮಾಣ ಆಗಿದ್ದು, ಇದೀಗ ಮಾರುಕಟ್ಟೆಯ ಒಳರಸ್ತೆಗಳ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಅಂಗಡಿಗಳ ತೆರವು: ಈ ಒಳ ರಸ್ತೆಗಳ ನಿರ್ಮಾಣಕ್ಕಾಗಿ ರಸ್ತೆಯಲ್ಲಿ ಬರುವ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣಕ್ಕೆ ಕಳೆದತಿಂಗಳಷ್ಟೇ ಚಾಲನೆ ನೀಡಲಾಗಿತ್ತು. ಇದಕ್ಕೆ ಆಗ ಅಂಗಡಿಕಾರರು, ಕೆಲ ರಾಜಕೀಯ ಮುಖಂಡರಿಂದ ವಿರೋಧ ವ್ಯಕ್ತವಾಗಿತ್ತು. ಸ್ವಯಂ ಪ್ರೇರಣೆಯಿಂದ ತೆರವು ಮಾಡಿಕೊಳ್ಳಲು ಅಂಗಡಿಕಾರರು ಅವಕಾಶ ಕೇಳಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಆದರೆ ಅಂಗಡಿಕಾರರಿಗೆ ನೀಡಿದ್ದ ಸಮಯದ ಅವಕಾಶಮುಗಿದರೂ ಕೆಲ ಅಂಗಡಿಕಾರರು ತೆರವು ಮಾಡಿರಲಿಲ್ಲ. ಈ ಬಗ್ಗೆ ನೀಡಿದ ಎಚ್ಚರಿಕೆಗಳಿಗೂ ಮಣೆ ಹಾಕಿರಲಿಲ್ಲ. ಹೀಗಾಗಿ ಪಾಲಿಕೆ ವಲಯಕಚೇರಿ ಸಹಾಯಕ ಆಯುಕ್ತ ಎಂ.ಬಿ. ಸಬರದ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡುಜು.3, ಜು.4 ರಂದು ಒಟ್ಟು 2 ದಿನಗಳಲ್ಲಿ 54 ಅಂಗಡಿಗಳನ್ನು ತೆರವುಗೊಳಿಸಲಾಗಿದೆ.

ಇದಲ್ಲದೇ ಇನ್ನೊಂದು ಬದಿಯ ಸರ್ವೇ ಕಾರ್ಯ ಮುಗಿಸಿರುವ ಪಾಲಿಕೆ ಅಲ್ಲಿನ ಅಂಗಡಿಕಾರರಿಗೆ ಸ್ವಯಂ ಪ್ರೇರಣೆಯಿಂದ ಅಂಗಡಿ ತೆರವು ಮಾಡಿಕೊಳ್ಳುವಂತೆ ಸೂಚಿಸಿದೆ. ಇದಕ್ಕೆ ಸ್ಪಂದನೆ ಕೊಡದಿದ್ದರೆ ಜೆಸಿಬಿ ಯಂತ್ರಗಳಮೂಲಕ ಅಂಗಡಿ ತೆರವು ಕಾರ್ಯಾಚರಣೆ ಮಾಡಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ. ಆದರೆ ಸೂಪರ್‌ ಮಾರುಕಟ್ಟೆಯ ಅಭಿವೃದ್ಧಿಗಾಗಿ ಸಿದ್ಧಗೊಂಡಿದ್ದ ಸೂಪರ್‌ ಯೋಜನೆಗಳೆಲ್ಲವೂ ಪಾಪರ್‌ ಆಗಿವೆ. ಸ್ಮಾಟ್‌ಸಿಟಿ ಯೋಜನೆಯಡಿ ಸ್ಮಾಟ್‌ ಆಗುವ ನಿರೀಕ್ಷೆಯೂ ಹುಸಿಯೂ ಆಗಿದೆ. ಅತಿಕ್ರಮಣ ಆಗುತ್ತಲೇ ಸಾಗಿರುವ ಈಮಾರುಕಟ್ಟೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಇಚ್ಛಾಶಕ್ತಿಯ ಕೊರತೆ ಇದ್ದು, ಇದಲ್ಲದೇ ವ್ಯಾಪಾರಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಈವರೆಗೂ ಸೂಪರ್‌ ಅಭಿವೃದ್ಧಿ ಕಾಣದಂತಾಗಿದೆ.

60 ಅಡಿ ರಸ್ತೆ ನಿರ್ಮಾಣಕ್ಕೆ ಕೆಲವರ ವಿರೋಧ :  ಈಗಾಗಲೇ ಮಾರುಕಟ್ಟೆಯ ಮುಖ್ಯ ರಸ್ತೆ ಕಾಂಕ್ರೀಟ್‌ಮಯ ಆಗಿದ್ದು, ಗಟಾರು ನಿರ್ಮಾಣ ಕಾರ್ಯವೂ ಮುಗಿದಿದೆ. ಈಗ ಒಳರಸ್ತೆಗಳ ಸುಧಾರಣೆಗೆ ಮುಂದಾಗಿರುವ ಪಾಲಿಕೆ, ರಸ್ತೆಯ ಅನಧಿಕೃತ ಅಂಗಡಿಗಳ ತೆರವು ಕಾರ್ಯ ಮಾಡುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಆದರೆ ಪ್ರತಿ ತಿಂಗಳು ಪಾಲಿಕೆಗೆ ಕರ ಕಟ್ಟಿ ಬದುಕು ಕಟ್ಟಿಕೊಂಡಿದ್ದ ಈ ವ್ಯಾಪಾರಸ್ಥರ ಬದುಕು ಈಗ ಬೀದಿಗೆ ಬಿದ್ದಿದೆ. ರಸ್ತೆ ನಿರ್ಮಾಣಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ 50-60 ಪೂಟ್‌ ರಸ್ತೆ ನಿರ್ಮಾಣಕ್ಕಾಗಿ ಅಗಲೀಕರಣದಿಂದ ಅಂಗಡಿಗಳು ನೆಲಸಮ ಆಗುತ್ತಿವೆ. ಹೀಗಾಗಿ ರಸ್ತೆ ಅಗಲೀಕರಣ ಅಧಿಕವಾಗಿದ್ದು, ಇದನ್ನು ಕೈಬಿಡಬೇಕೆಂಬುದು ವ್ಯಾಪಾರಸ್ಥರ ಬೇಡಿಕೆಯಾಗಿದೆ.

ಒಂದು ಕಾಲದಲ್ಲಿ ಇಡೀ ನಗರಕ್ಕೆ ನೀರು ಪೂರೈಸುತ್ತಿದ್ದ ಹಾಲಗೇರಿ ಕೆರೆ ಕಾಲ ಕ್ರಮೇಣ ನೀರು ಮಾಯವಾಗಿ ಕೆರೆ ಮಾರುಕಟ್ಟೆಯಾಗಿ ಪರಿವರ್ತನೆ ಆಗಿದೆ ಎಂಬುದು ಈ ಸೂಪರ್‌ ಮಾರುಕಟ್ಟೆಯ ಇತಿಹಾಸ. ಧಾರವಾಡದ ಮೂಲ ಮಾರುಕಟ್ಟೆ ರವಿವಾರ ಪೇಟೆಯಲ್ಲಿತ್ತು. ಕೆಸರು ಗುಂಡಿಯಾಗಿದ್ದ ಹಾಲಗೇರಿಯಲ್ಲಿ ಮಾರುಕಟ್ಟೆ ನಿರ್ಮಿಸಿ, ಮಾರುಕಟ್ಟೆ ಸ್ಥಳಾಂತರಗೊಂಡಿದೆ. ಅಂದಾಜು 5 ಎಕರೆ ವಿಸ್ತೀರ್ಣದಲ್ಲಿ ಇರುವ ಈ ಮಾರುಕಟ್ಟೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವಗಳು 10 ಕೋಟಿಯಿಂದ ಆರಂಭವಾಗಿ 200-300 ಕೋಟಿಗೆ ಏರಿಕೆಯಾಗಿದ್ದು ಬಿಟ್ಟರೆ ಅವು ಮಾತ್ರ ಹಾಗೆ ನನೆಗುದಿಗೆ ಬಿದ್ದಿವೆ. ಇದೀಗ ಮಾರುಕಟ್ಟೆಯ ರಸ್ತೆಗಳ ಅಗಲೀಕರಣ, ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾರ್ಯ ಸಾಗಿದ್ದು, ಇದರ ಜತೆಗೆ ಮೂಲಸೌಕರ್ಯ ಒದಗಿಸುವತ್ತ ಗಮನ ಹರಿಸಬೇಕಿದೆ.

ಕಳೆದ 40 ವರ್ಷಗಳಿಂದ ನಾವೇ ಮಳಿಗೆ ನಿರ್ಮಿಸಿಕೊಂಡು ವ್ಯಾಪಾರ ಮಾಡಿಕೊಂಡು ಬಂದಿದ್ದು, ಪ್ರತಿ ತಿಂಗಳು ಪಾಲಿಕೆಗೆ 600 ರೂ. ಬಾಡಿಗೆ ಭರಿಸುತ್ತೇವೆ.ಈ ರೀತಿ 400ಕ್ಕೂ ಹೆಚ್ಚು ಜನರ ಮಳಿಗೆ ಇದ್ದು, ಇದೀಗ ರಸ್ತೆ ನಿರ್ಮಾಣದಿಂದ ಅಂಗಡಿ ಕಳೆದು ಕೊಳ್ಳಲಿದ್ದೇವೆ. ದಯವಿಟ್ಟು ನಮಗೆ ಪರ್ಯಾಯ ವ್ಯವಸ್ಥೆ ನಿರ್ಮಿಸಿ, ತೆರವು ಮಾಡಬೇಕು. ಇಲ್ಲವೇ ರಸ್ತೆ ನಿರ್ಮಾಣ ಜತೆಗೆ ಮಳಿಗೆಯನ್ನೂ ನಿರ್ಮಾಣ ಮಾಡಿ ಪಾಲಿಕೆಯೇ ವ್ಯಾಪಾರಸ್ಥರಿಗೆ ಬಾಡಿಗೆ ಕೊಡಲಿ.-ಮಹಮ್ಮದಹುಸೇನ ತಮಟಗಾರ, ಬಾಂಡೇ ಅಂಗಡಿ ಮಾಲೀಕ.

ಸೂಪರ್‌ ಮಾರುಕಟ್ಟೆಯಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಿಸುತ್ತಿದ್ದು, ಈ ರಸ್ತೆಯ ಮಾರ್ಗದಲ್ಲಿ ಅನಧಿಕೃತ ಆಗಿರುವ ಮಳಿಗೆಗಳನ್ನು ತೆರವು ಮಾಡಲಾಗಿದೆ. ಕೆಲವರು ಸ್ವಯಂ ಪ್ರೇರಣೆಯಿಂದಲೂ ತೆರವು ಮಾಡಿಕೊಂಡಿದ್ದಾರೆ. ಇದಲ್ಲದೇ ಇನ್ನೂ ಕೆಲ ಅನಧಿಕೃತ ಅಂಗಡಿಗಳಿಗೆ ಸೂಚನೆ ನೀಡಿದ್ದು, ಸ್ವಯಂ ಪ್ರೇರಣೆಯಿಂದ ತೆರವು ಮಾಡದಿದ್ದರೆ ಜೆಸಿಬಿ ಯಂತ್ರದ ಮೂಲಕ ತೆರವು ಮಾಡಲಾಗುವುದು.– ಎಂ.ಬಿ.ಸಬರದ,  ಸಹಾಯಕ ಆಯುಕ್ತ, ಪಾಲಿಕೆ ವಲಯ ಕಚೇರಿ, ಧಾರವಾಡ

ಕಾಂಕ್ರೀಟ್‌ ರಸ್ತೆ ನಿರ್ಮಾಣದ ನೆಪದಲ್ಲಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸುತ್ತಿರುವುದು ಸರಿಯಲ್ಲ. ಈ ಬಗ್ಗೆ ವ್ಯಾಪಾರಸ್ಥರೊಂದಿಗೆ ಚರ್ಚೆ ಕೈಗೊಂಡು, ಕಾನೂನಾತ್ಮಕ ಅಥವಾ ಸಾರ್ವಜನಿಕ ಹೋರಾಟದ ಮೂಲಕ ನ್ಯಾಯ ಪಡೆಯಲು ಮುಂದಾಗುತ್ತೇವೆ.– ಪಿ.ಎಚ್‌.ನೀರಲಕೇರಿ, ಹೋರಾಟಗಾರ

 

-ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.